ವಿಜಯಪುರ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ: ಐದಾರು ಮಕ್ಕಳ ಮೇಲೆ ದಾಳಿ

ವಿಜಯಪುರ ನಗರದಲ್ಲಿನ ಬೀದಿ ನಾಯಿ ಹಾವಳಿ ಬಗ್ಗೆ ಕಳೆದ ಆಗಸ್ಟ್​​ನಲ್ಲೇ ಮನವಿ ಮಾಡಿದ್ದರೂ ಇಲ್ಲಿಯವರೆಗೂ ಯಾವುದೇ ಇಲಾಖೆ ಆಧಿಕಾರಿಗಳು ಸಿಬ್ಬಂದಿಗಳು ಕ್ರಮ ತೆಗೆದುಕೊಂಡಿಲ್ಲ. ಇದೀಗ ಬೀದಿ ನಾಯಿಗಳ ಹಾವಳಿ ಜೋರಾಗಿ ಬೀದಿ ನಾಯಿಗಳು ದಾಳಿ ಮಾಡುತ್ತಿದ್ದರೂ ಯಾವುದೇ ಕ್ರಮ ಇಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ಧಾರೆ.

ವಿಜಯಪುರ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ: ಐದಾರು ಮಕ್ಕಳ ಮೇಲೆ ದಾಳಿ
ಸಾಂದರ್ಭಿಕ ಚಿತ್ರ
Edited By:

Updated on: Nov 28, 2023 | 9:07 PM

ವಿಜಯಪುರ, ನವೆಂಬರ್ 28: ವಿಜಯಪುರ ನಗರದಲ್ಲಿ (Vijayapura) ಬೀದಿ ನಾಯಿಗಳ (Street Dogs) ಕಾಟ ಜೋರಾಗಿದೆ. ಗಲ್ಲಿ ಗಲ್ಲಿಗಳಲ್ಲಿ ಬೀಡು ಬಿಟ್ಟಿರೋ ನಾಯಿಗಳು ಪುಟ್ಟ ಪುಟ್ಟ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿವೆ. ಸೋಮವಾರದಿಂದ ನಗರದ ಬಡಿಕಮಾನ್, ಬಾಗಾಯತ್ ಗಲ್ಲಿ, ದೌಲತ್ ಕೋಟೆ ಹಾಗೂ ಭಾಂಗಿ ಆಸ್ಪತ್ರೆ ಪ್ರದೇಶಗಳಲ್ಲಿ ಬೀದಿ ಬದಿಯ ನಾಯಿಗಳು ಆರೇಳು ಮಕ್ಕಳನ್ನು ಕಚ್ಚಿ ಗಾಯಗೊಳಿಸಿವೆ. ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಂತೆ ಕಳೆದ ಆಗಸ್ಟ್​​​​ನಲ್ಲೇ ಮಹಾನಗರ ಪಾಲಿಕೆ ಹಾಗೂ ಪುರಾತತ್ವ ಇಲಾಖೆ ಆಧಿಕಾರಿಗಳಿಗೆ ಮನವಿ ಕೊಟ್ಟಿದ್ದರೂ ಕ್ರಮ ತೆಗೆದುಕೊಳ್ಳದ ಕಾರಣ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಾಲ್ವರು ಪುಟ್ಟ ಮಕ್ಕಳಳನ್ನು ಕಚ್ಚಿದ್ದ ಬೀದಿ ಬದಿಯ ನಾಯಿಗಳು ಮಂಗಳವಾರ ಸಹ ತಮ್ಮ ಅಟ್ಟಹಾಸವನ್ನು ಮುಂದುವರೆಸಿವೆ. ಮಂಗಳವಾರ ಮೂವರು ಮಕ್ಕಳನ್ನು ಕಚ್ಚಿದ್ದು ಜನರು ಭಯಗೊಳ್ಳುವಂತಾಗಿದೆ. ನಗರದ ಬಡೀ ಕಮಾನ್, ಬಾಗಾಯತ್ ಗಲ್ಲಿ, ಬಾಂಗೀ ಆಸ್ಪತ್ರೆ ಬಳಿ, ದೌಲತ್ ಕೋಟೆ, ಹಕೀಂ ಚೌಕ್ ನ ಸುತ್ತಮುತ್ತ ಬೀದಿಬದಿಯ ನಾಯಿಗಳ ಕಾಟ ಜೋರಾಗಿದೆ. ಶಾಲೆಗೆ ಹೋಗುವ 8 ವರ್ಷದೊಳಗಿನ ಮಕ್ಕಳನ್ನೇ ಗುರಿಯಾಗಿಸೋ ಬೀದಿ ನಾಯಿಗಳು ಮಕ್ಕಳನ್ನು ಮನಬಂದಂತೆ ಕಚ್ಚಿ ಗಾಯಗೊಳಿಸಿವೆ. ಮನೆಯಾಚೆ ಅಂಗಡಿಗೆ ಹೋಗುವಾಗಲೂ ನಾಯಿಗಳು ಅಟ್ಯಾಕ್ ಮಾಡಿವೆ. ನಿನ್ನೆ ನಾಲ್ಕು ಪುಠಾಣಿಗಳ ಮೇಲೆ ಕ್ರೌರ್ಯ ಮಾಡಿದ್ದ ಬೀದಿನಾಯಿಗಳು ಇಂದು ಮತ್ತೇ ಮೂವರು ಮಕ್ಕಳನ್ನು ಕಚ್ಚಿವೆ. ಬೀದಿನಾಯಿಗಳ ದಾಳಿಗೆ ಈ ಭಾಗದ ಮಕ್ಕಳು ಶಾಲೆಗೆ ಹೋಗಲು ಸಹ ಭಯಪಡುತ್ತಿದ್ದಾರೆ. ಮಕ್ಕಳನ್ನು ಪೋಷಕರು ಕರೆದುಕೊಂಡು ಹೋಗಿ ಶಾಲೆಗೆ ಬಿಟ್ಟು ಬರುತ್ತಿದ್ದಾರೆ. ಇನ್ನು ಕೆಲವರು ಮಕ್ಕಳನ್ನು ಮನೆಯಾಚೆ ಕಳುಹಿಸುವುದನ್ನೇ ಬಿಟ್ಟಿದ್ದಾರೆ. ನಿನ್ನೆ ಹಾಗೂ ಇಂದು ಬೀದಿ ನಾಯಿಗಳ ಕಡಿತಕ್ಕೊಳಗಾದ ಏಳು ಮಕ್ಕಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎಲ್ಲರಿಗೂ ರೆಬೀಸ್ಲಸಿಕೆ ಹಾಕಿ ಉಪಚಾರ ಮಾಡಲಾಗಿದೆ. ಇಷ್ಟೆಲ್ಲಾ ಆವಾಂತರವಾದರೂ ಮಹಾನಗರ ಪಾಲಿಕೆಯವರಾಗಲಿ ಜಿಲ್ಲಾಡಳಿತದ ಆಧಿಕಾರಿಗಳಾಗಲಿ ಸ್ಥಳಕ್ಕೆ ಆಗಮಿಸದೇ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆಸಮಾಧಾನ ಹೊರ ಹಾಕಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮತಿ ಮೀರಿದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ತೊಂದರೆಯಾಗುತ್ತಿದೆ. ಕೂಡಲೇ ಬೀದಿ ನಾಯಿಗಳ ಹತೋಟಿಗೆ ಕ್ರಮ ತೆಗೆದುಕೊಳ್ಳಬೇಕು. ಬೀದಿ ನಾಯಿಗಳನ್ನು ಹಿಡಿದು ಸ್ಥಳಾಂತರ ಮಾಡಬೇಕೆಂದು ಸಿಟಿಜನ್ಸ್ ಪೋರಮ್​ನಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಹಾಗೂ ಭಾರತೀಯ ಪುರಾತತ್ವ ಇಲಾಖೆ ಆಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಲಾಗಿತ್ತು. ನಗರ ಭಾಗದ ಪುರಾತತ್ವ ಸ್ಮಾರಕಗಳನ್ನು ಹೆಚ್ಚು ಬೀದಿ ನಾಯಿಗಳ ವಾಸ ಮಾಡುತ್ತವೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಹಾವಳಿ ಮಾಡುತ್ತಿವೆ. ಆದ್ದರಿಂದ ಪುರಾತತ್ವ ಇಲಾಖೆ ಆಧಿಕಾರಿಗಳಿಗೆ ಸಿಟಿಜನ್ ಫೋರಮ್ ಮೂಲಕ ಮನವಿ ಸಲ್ಲಿಕೆ ಮಾಡಲಾಗಿದೆ. ಕಳೆದ ಆಗಸ್ಟ್​​ನಲ್ಲೇ ಮನವಿ ಮಾಡಿದ್ದರೂ ಇಲ್ಲಿಯವರೆಗೂ ಯಾವುದೇ ಇಲಾಖೆ ಆಧಿಕಾರಿಗಳು ಸಿಬ್ಬಂದಿಗಳು ಕ್ರಮ ತೆಗೆದುಕೊಂಡಿಲ್ಲ. ಇದೀಗಾ ಬೀದಿ ನಾಯಿಗಳ ಹಾವಳಿ ಜೋರಾಗಿ ಬೀದಿ ನಾಯಿಗಳು ದಾಳಿ ಮಾಡುತ್ತಿದ್ದರೂ ಯಾವುದೇ ಕ್ರಮ ಇಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ಧಾರೆ.

ಇದನ್ನೂ ಓದಿ: ವಿಜಯಪುರ: ಮಕ್ಕಳ ಮೇಲೆ ನಾಯಿಗಳ ದಾಳಿ, ನಾಲ್ವರಿಗೆ ಗಾಯ

ನಗರದಲ್ಲಿ ಬೀದಿ ನಾಯಿಗಳ ಕಾಟ ಮಾತ್ರ ಮಿತಿ ಮೀರಿದೆ. ನಿನ್ನೆಯಿಂದಲೇ ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿರೋ ಬೀದಿ ನಾಯಿಗಳು ದೊಡ್ಡವರ ಮೇಲೆಯೂ ದಾಳಿ ಮಾಡೋ ಸಾಧ್ಯತೆಯಿದೆ. ಇನ್ನು ನಗರದಲ್ಲಿ ಮಾಂಸ ಮಾರಾಟ ಮಾಡುವ ಅಂಗಡಿಗಳ ನಿರ್ಲಕ್ಷ್ಯವೂ ಬೀದಿ ನಾಯಿಗಳ ಹಾವಳಿಗೆ ಕಾರಣವಾಗಿದೆ. ಮಾಂಸದಂಗಡಿ ತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಬೀದಿ ನಾಯಿಗಳು ಮಾಂಸದ ತ್ಯಾಜ್ಯವನ್ನು ತಿನ್ನುತ್ತಾ ಜನರ ಮೇಲೆ ದಾಳಿ ಮಾಡುತ್ತಿವೆ. ಈ ನಿಟ್ಟಿನಲ್ಲೂ ಮಹಾನಗರ ಪಾಲಿಕೆಯ ಆಧಿಕಾರಿಗಳು ಆಯುಕ್ತರು ಹಾಗೂ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕಿದೆ. ಸದ್ಯ ಬೀದಿನಾಯಿಗಳನ್ನು ಹಿಡಿದು ಸ್ಥಳಾಂತರ ಮಾಡಿದರೆ ಮಾತ್ರ ಇದಕ್ಕೆ ಪರಿಹಾರ ಸಿಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us