Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಪೋರ್ಟ್ ಟರ್ಮಿನಲ್​ನಲ್ಲಿ ನಾಯಿಗಳ ಹಾವಳಿ, ಪ್ರಯಾಣಿಕರಲ್ಲಿ ಹೆಚ್ಚಾಯ್ತು ಆತಂಕ

ಅದು ಜಾಗತಿಕ ಮಟ್ಟದಲ್ಲಿ ಅತಿಹೆಚ್ಚು ಪ್ರಯಾಣಿಕರು ಪ್ರಯಾಣಿಸೋ ಏರ್ಪೋರ್ಟ್. ಇಷ್ಟು ದಿನ ಉತ್ತಮ ಸೌಲಭ್ಯಗಳಿಂದ ಹೆಸರು ವಾಸಿಯಾಗಿದ್ದ ಆ ಏರ್ಪೋರ್ಟ್​ನಲ್ಲಿ ಈಗ ಹೊಸ ಆತಂಕ ಸೃಷ್ಟಿಯಾಗಿದೆ. ಜನ ಏರ್ಪೋಟ್ ಆವರಣದಲ್ಲಿ ಭಯ ಇಲ್ಲದೆ ಓಡಾಡೋಕು ಆಗ್ತಿಲ್ಲ.

ಏರ್ ಪೋರ್ಟ್ ಟರ್ಮಿನಲ್​ನಲ್ಲಿ ನಾಯಿಗಳ ಹಾವಳಿ, ಪ್ರಯಾಣಿಕರಲ್ಲಿ ಹೆಚ್ಚಾಯ್ತು ಆತಂಕ
ಬೆಂಗಳೂರು ಏರ್ ಪೋರ್ಟ್ ಟರ್ಮಿನಲ್​ನಲ್ಲಿ ನಾಯಿಗಳ ಹಾವಳಿ
Follow us
ಆಯೇಷಾ ಬಾನು
|

Updated on:Dec 09, 2020 | 10:19 AM

ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ದಾಣ ಅಂದ್ರೆ ಮೊದ್ಲು ನೆನಪಾಗೋದೆ ಹಚ್ಚ ಹಸಿರಿನ ವಾತವಾರಣ. ಇದ್ರ ಜೊತೆಗೇ ಸ್ವಚ್ಛಂದ ಟರ್ಮಿನಲ್. ಆದ್ರೆ ಇದೇ ಏರ್ ಪೋರ್ಟ್ ಮಾನ ಅಂತರಾಷ್ಟ್ರಿಯಾ ಮಟ್ಟದಲ್ಲಿ ಹರಾಜಾಗುತ್ತಾ ಅನ್ನೋ ಅನುಮಾನ ಪ್ರಯಾಣಿಕರಲ್ಲಿ ಕಾಡುತ್ತಿದೆ.

ಏರ್ ಪೋರ್ಟ್ ಟರ್ಮಿನಲ್​ನಲ್ಲಿ ನಾಯಿಗಳ ಹಿಂಡು: ಇದಕ್ಕೆ ಕಾರಣ ಬೀದಿನಾಯಿಗಳ ಹಾವಳಿ. ಅಂದಹಾಗೆ ಲಾಕ್​ಡೌನ್ ನಂತರದಲ್ಲಿ, ದಿನದಿಂದ ದಿನಕ್ಕೆ ಏರ್ ಪೋರ್ಟ್​ನಿಂದ ಸಂಚರಿಸೋ ಪ್ರಯಾಣಿಕರ ಸಂಖ್ಯೆ ಹೆಚ್ಚಾಗ್ತಿದೆ. ಆದ್ರೆ ಈ ಮಧ್ಯೆ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿ ಹಾವಳಿ ಸಹ ಹೆಚ್ಚಾಗಿದ್ದು, ಏರ್ ಪೋರ್ಟ್ ಟರ್ಮಿನಲ್ ಸೇರಿದಂತೆ ಪಾರ್ಕಿಂಗ್ ಏರಿಯಾಗಳಲೆಲ್ಲಾ ಹಿಂಡಾಗಿ ಬೀದಿ ನಾಯಿಗಳು ಬೀಡು ಬಿಟ್ಟಿವೆ. ಜತೆಯಲ್ಲೇ ಏರ್ ಪೋರ್ಟ್​ಗೆ ಬರೋ ಪ್ರಯಾಣಿಕರ ಮಧ್ಯೆ ರಾಜಾರೋಷವಾಗಿ ನಾಯಿಗಳು ಹಿಂಡು ಹಿಂಡಾಗಿ ಒಡಾಡ್ತಿದ್ದು, ಯಾವಾಗ ಯಾವ ಪ್ರಯಾಣೀಕರ ಮೇಲೆ ಬೀದಿ ನಾಯಿಗಳು ದಾಳಿ ಮಾಡ್ತಾವೋ ಅನ್ನೋ ಆತಂಕ ಪ್ರಯಾಣಿಕರಲ್ಲಿ ಮೂಡಿದೆ.

ಟರ್ಮಿನಲ್​ನ ಹೋಟೆಲ್ ಸೇರಿದಂತೆ ಅಂಗಡಿಗಳ ಮುಂದೆ ಆಹಾರ ಸೇವಿಸೋ ಪ್ರಯಾಣಿಕರ ಮುಂದೆಯೇ ನಿಲ್ಲೋ ನಾಯಿಗಳು ಪ್ರಯಾಣಿಕರಿಗೆ ಸಾಕಷ್ಟು ಕಿರಿಕಿರಿ ಉಂಟು ಮಾಡ್ತಿವೆ. ದೇಶ ವಿದೇಶದಿಂದ್ಲೂ ಪ್ರಯಾಣೀಕರು ಬಂದು ಹೋಗೊ ಏರ್ಪೋಟ್ ಅತಿಸೂಕ್ಷ್ಮ ಪ್ರದೇಶವಾಗಿದೆ. ಟರ್ಮಿನಲ್ ಒಳಭಾಗದಲ್ಲಿ ಸಾಕಷ್ಟು ಭದ್ರತೆ ನೀಡಿರೋ ಏರ್ಪೋಟ್ ಆಡಳಿತ ಮಂಡಳಿ, ಟರ್ಮಿನಲ್ ಆವರಣದಲ್ಲೂ ಬೀದಿ ನಾಯಿಗಳ ಹಾವಾಳಿಗೆ ಬ್ರೇಕ್ ಹಾಕಬೇಕಿದೆ. ಈ ಮೂಲಕ ಪ್ರಯಾಣಿಕರ ಆತಂಕ ದೂರ ಮಾಡಬೇಕಿದೆ ಎಂಬುದು ಸ್ಥಳೀಯರ ಆಗ್ರಹ.

ಒಟ್ಟಾರೆ ಹೈ-ಫೈ ಸೌಲಭ್ಯಗಳ ಮೂಲಕ ಹೆಸರುವಾಸಿಯಾಗಿರೋ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಈಗ ಬೀದಿ ನಾಯಿ ಹಾವಳಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ನಾಯಿಗಳು ಏರ್ಪೋರ್ಟ್​ಗೆ ಬರೋ ಪ್ರಯಾಣಿಕರ ಮೇಲೆ ದಾಳಿ ಮಾಡಿ ಬೆಂಗಳೂರಿನ ಮಾನ ಜಾಗತಿಕವಾಗಿ ಹರಾಜು ಹಾಕುವ ಮುನ್ನ ಏರ್ಪೋರ್ಟ್ ಆಡಳಿತ ಮಂಡಳಿ ಬೀದಿ ನಾಯಿಗಳ ಹಾವಳಿಗೆ ಬ್ರೇಕ್ ಹಾಕಬೇಕಿದೆ.

Published On - 7:59 am, Wed, 2 December 20

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ