AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಿ ದೇಗುಲ ಲೋಕಾರ್ಪಣೆ: ಕಂಚಿನ ಪುತ್ಥಳಿಗೆ ಸುಮಲತಾ, ದರ್ಶನ್​, ಅಭಿ ಪುಷ್ಪಾರ್ಚನೆ

ಮಂಡ್ಯ: ರೆಬೆಲ್​ ಸ್ಟಾರ್ ಡಾ. ಅಂಬರೀಷ್​ರ 2ನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ನಟನ ನೆನಪಿನಲ್ಲಿ ಅವರ ಅಭಿಮಾನಿಗಳು ನಿರ್ಮಿಸಿದ್ದ ದೇಗುಲವನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಜಿಲ್ಲೆಯ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ನಿರ್ಮಾಣಗೊಂಡಿರೋ ಅಂಬರೀಷ್ ಗುಡಿಗೆ ಇಂದು ನಟನ ಪತ್ನಿ ಹಾಗೂ ಸಂಸದೆ ಸುಮಲತಾ ಅಂಬರೀಷ್​, ಪುತ್ರ ಅಭಿಷೇಕ್​ ಹಾಗೂ ನಟ ದರ್ಶನ್ ಭೇಟಿಕೊಟ್ಟು ಲೋಕಾರ್ಪಣೆ ಮಾಡಿದರು. ಗುಡಿಯೊಳಗೆ ಅಂಬಿ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಮಾಡಲಾಗಿದೆ. ಗುಡಿ ಉದ್ಘಾಟನೆ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನು ಮದುವಣಗಿತ್ತಿಯಂತೆ ಸಿಂಗಾರಗೊಳಿಸಲಾಗಿತ್ತು. ರಸ್ತೆಗಳಲ್ಲಿ ಹಸಿರು […]

ಅಂಬಿ ದೇಗುಲ ಲೋಕಾರ್ಪಣೆ: ಕಂಚಿನ ಪುತ್ಥಳಿಗೆ ಸುಮಲತಾ, ದರ್ಶನ್​, ಅಭಿ ಪುಷ್ಪಾರ್ಚನೆ
ಅಂಬಿ ಗುಡಿ ಲೋಕಾರ್ಪಣೆ
KUSHAL V
|

Updated on:Nov 24, 2020 | 3:11 PM

Share

ಮಂಡ್ಯ: ರೆಬೆಲ್​ ಸ್ಟಾರ್ ಡಾ. ಅಂಬರೀಷ್​ರ 2ನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ನಟನ ನೆನಪಿನಲ್ಲಿ ಅವರ ಅಭಿಮಾನಿಗಳು ನಿರ್ಮಿಸಿದ್ದ ದೇಗುಲವನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಜಿಲ್ಲೆಯ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ನಿರ್ಮಾಣಗೊಂಡಿರೋ ಅಂಬರೀಷ್ ಗುಡಿಗೆ ಇಂದು ನಟನ ಪತ್ನಿ ಹಾಗೂ ಸಂಸದೆ ಸುಮಲತಾ ಅಂಬರೀಷ್​, ಪುತ್ರ ಅಭಿಷೇಕ್​ ಹಾಗೂ ನಟ ದರ್ಶನ್ ಭೇಟಿಕೊಟ್ಟು ಲೋಕಾರ್ಪಣೆ ಮಾಡಿದರು.

ಗುಡಿಯೊಳಗೆ ಅಂಬಿ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಮಾಡಲಾಗಿದೆ. ಗುಡಿ ಉದ್ಘಾಟನೆ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನು ಮದುವಣಗಿತ್ತಿಯಂತೆ ಸಿಂಗಾರಗೊಳಿಸಲಾಗಿತ್ತು. ರಸ್ತೆಗಳಲ್ಲಿ ಹಸಿರು ತೋರಣ ಮತ್ತು ಗುಡಿಗೆ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು.

ಇನ್ನು, ಗುಡಿ ಉದ್ಘಾಟನೆಗೆ ಆಗಮಿಸಿದ ನಟ ದರ್ಶನ್, ಸಂಸದೆ ಸುಮಲತಾ, ಅಭಿಷೇಕ್ ಅಂಬರೀಷ್, ರಾಕ್ ಲೈನ್ ವೆಂಕಟೇಶ್ ಹಾಗೂ ದೊಡ್ಡಣ್ಣರನ್ನು ಗ್ರಾಮದ ಬಾಗಿಲಿನಿಂದ ದೇಗುಲದವರೆಗೂ ತೆರೆದ ಜೀಪ್​ನಲ್ಲಿ ಮೆರವಣಿಗೆ ಕರೆದೊಯ್ಯಲಾಯಿತು. ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದಿದ್ದ ಅಭಿಮಾನಿಗಳು ಹಾಗೂ ಗ್ರಾಮಸ್ಥರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಮೆರವಣಿಗೆ ವೇಳೆ JCB ಮೇಲೆ ನಿಂತ ಕೆಲ ಅಭಿಮಾನಿಗಳು ಗಣ್ಯರ ಮೇಲೆ ಪುಷ್ಪವೃಷ್ಟಿ ಸಹ ಮಾಡಿದರು.

ತದ ನಂತರ, ಅಂಬಿ ದೇಗುಲದತ್ತ ಆಗಮಿಸಿದ ಗಣ್ಯರು ಗುಡಿ ಹಾಗೂ ಅಂಬರೀಷ್​ರ ಕಂಚಿನ ಪುತ್ಥಳಿಯನ್ನು ಲೋಕಾರ್ಪಣೆ ಮಾಡಿದರು. ಬಳಿಕೆ ಪುಷ್ಪಾರ್ಚನೆ ಸಹ ಮಾಡಿದರು. ಅಂಬಿ ಗುಡಿ ಉದ್ಘಾಟನೆ ಬಳಿಕ ಬೃಹತ್ ರಕ್ತದಾನ ಶಿಬಿರಕ್ಕೂ ಚಾಲನೆ ನೀಡಿದರು.

ಇದೇ ವೇಳೆ, ಅಂಬರೀಷ್​ ಸಾವನ್ನಪ್ಪಿದ್ರು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದ ಗ್ರಾಮದ ತಿಮ್ಮಯ್ಯನನ್ನು ಸಹ ನೆನೆಸಿಕೊಂಡರು. ತಿಮ್ಮಯ್ಯ ಅಂಬರೀಷ್​ ಸಾವನ್ನಪ್ಪಿದ ದಿನವೇ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ರು. ಹಾಗಾಗಿ, ಗಣ್ಯರು ತಿಮ್ಮಯ್ಯನ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಸಹ ಮಾಡಿದರು. ಕನ್ನಡ ಚಿತ್ರರಂಗ ಅಂದ್ರೆ ಆ ನಾಲ್ವರು -ಚಂದನವನದ ಆಧಾರ ಸ್ತಂಭಗಳನ್ನು ನೆನೆದ ದರ್ಶನ್​

Published On - 2:26 pm, Tue, 24 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್