AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ! ಕೂಲ್ ಕೂಲ್ ಸಿಟಿ ಬೆಂಗಳೂರಿನ ತಾಪಮಾನ 40 ಡಿಗ್ರಿ ತಲುಪಿತಾ! ಮುಂದಿನ ದಿನಗಳು ಇನ್ನಷ್ಟು ಭೀಕರ

ಬೇಸಿಗೆ ಶುರುವಾದ್ರೆ ಸಾಕು ಕೂತಲ್ಲಿಯೇ ಕೊತಕೊತ, ನಿಂತಲ್ಲಿ ನಿಲ್ಲಲಾಗದು. ಬೇಸಿಗೆಯ ಬೇಗೆಗೆ ಇಡೀ ಮೈ ಬೆಂದು ಬೆವರಾಗಿ ಹರಿದಿರುತ್ತದೆ. ಅದರಲ್ಲೂ ಕಾಂಕ್ರೀಟ್ ಕಾಡಾಗಿರುವ ಬೆಂಗಳೂರಿನಲ್ಲಿ ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ದಾಖಲೆ ಮಟ್ಟದ ತಾಪಮಾನ ದಾಖಲಾಗಿದೆ. ಹಾಗಂತ ಬೇಸಿಗೆ ಇನ್ನೂ ಮುಗಿದಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾಡುವ ಎಲ್ಲ ಲಕ್ಷಣಗಳೂ ಇವೆ. ಬೇಸಿಗೆಯ ಬಿಸಿ ಹೆಚ್ಚಳದ ಸಮ್ಮುಖದಲ್ಲಿ ಮೊದಲು ಆರೋಗ್ಯದ ಕಡೆ ಗಮನ ಕೊಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಅಬ್ಬಬ್ಬಾ! ಕೂಲ್ ಕೂಲ್ ಸಿಟಿ ಬೆಂಗಳೂರಿನ ತಾಪಮಾನ 40 ಡಿಗ್ರಿ ತಲುಪಿತಾ! ಮುಂದಿನ ದಿನಗಳು ಇನ್ನಷ್ಟು ಭೀಕರ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:Apr 30, 2024 | 8:33 PM

Share

ಸಿಲಿಕಾನ್ ಸಿಟಿ ಬೆಂಗಳೂರು ದಿನ ಕಳೆದಂತೆಲ್ಲ ಕಾದ ಹಂಚಿನಂತೆ ಸುಡುತ್ತಿದೆ. ಆಚೆ ಕಾಲಿಟ್ಟರೆ ಸಾಕು ಸೂರ್ಯ ನೆತ್ತಿ ಸುಡುತ್ತಿದ್ದಾನೆ. ಬಿಸಿ ಹಬೆ ಜನರನ್ನು ಎಲ್ಲೂ ಓಡಾಡದಂತೆ ಮಾಡಿದೆ. ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿಯೂ ದಾಖಲೆ ಮಟ್ಟದ ತಾಪಮಾನವಿತ್ತು. ಕಳೆದ ಏಪ್ರಿಲ್ 24ರ ಬುಧವಾರ ಬೆಂಗಳೂರಿನಲ್ಲಿ 38 ಡಿಗ್ರಿ ಸೆಲ್ಶಿಯಸ್ ಉಷ್ಠಾಂಶ ದಾಖಲಾಗಿತ್ತು. ಏಪ್ರಿಲ್ 28ರ ಭಾನುವಾರ ಬೆಂಗಳೂರು ತಾಪಮಾನ ಮತ್ತೊಂದು ದಾಖಲೆಯ ಮಟ್ಟ ತಲುಪಿದೆ. ಕಳೆದ ದಶಕದಲ್ಲೇ ಅತಿ ಹೆಚ್ಚು ಬಿಸಿಲಿನ ದಿನ ಎನ್ನುವ ದಾಖಲೆ ಬರೆದಿದೆ. ಸಾಮಾನ್ಯವಾಗಿ ಕೂಲ್ ಕೂಲ್​ ಆಗಿಯೆ ಇರುವ ಬೆಂಗಳೂರು ಮಹಾನಗರವೇ ಹೀಗಿರುವಾಗ ರಾಜ್ಯದ ಇತರ ಜಿಲ್ಲೆಗಳಲ್ಲಿಯಂತೂ ತಾಪಮಾನ ಏರುಗತಿಯಲ್ಲಿಯೇ ಇದ್ದು, ಬಿಸಿಲ ಬೇಗೆಗೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ಏಪ್ರಿಲ್‌ 28ರ ಭಾನುವಾರ ನಗರದಲ್ಲಿ ದಾಖಲೆಯ 38.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಇದು ರಾಜಧಾನಿಯಲ್ಲಿ ಏಪ್ರಿಲ್‌ ತಿಂಗಳಲ್ಲಿ ದಾಖಲಾದ ಎರಡನೇ ಅತಿ ಹೆಚ್ಚು ಹಾಗೂ ಒಟ್ಟಾರೆ ಮೂರನೇ ಅತಿ ಹೆಚ್ಚು ತಾಪಮಾನವಾಗಿದೆ. 2016 ಏಪ್ರಿಲ್‌ 25 ರಂದು ನಗರದಲ್ಲಿ 39.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ಇದಕ್ಕೂ ಪೂರ್ವದಲ್ಲಿ 1931 ಮೇ 22 ರಂದು 38.9 ಹಾಗೂ 1931 ರ ಏಪ್ರಿಲ್‌ 30ರಂದು 38.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಲೇ ಇದೆ. ಮುಂದಿನ ಎರಡು-ಮೂರು ದಿನಗಳಲ್ಲಿ ತಾಪಮಾನ 39 ಡಿಗ್ರಿಗೆ ಏರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮಾರ್ಚ್ 29 ರಂದು...

Published On - 4:34 pm, Tue, 30 April 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!