AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ! ಕೂಲ್ ಕೂಲ್ ಸಿಟಿ ಬೆಂಗಳೂರಿನ ತಾಪಮಾನ 40 ಡಿಗ್ರಿ ತಲುಪಿತಾ! ಮುಂದಿನ ದಿನಗಳು ಇನ್ನಷ್ಟು ಭೀಕರ

ಬೇಸಿಗೆ ಶುರುವಾದ್ರೆ ಸಾಕು ಕೂತಲ್ಲಿಯೇ ಕೊತಕೊತ, ನಿಂತಲ್ಲಿ ನಿಲ್ಲಲಾಗದು. ಬೇಸಿಗೆಯ ಬೇಗೆಗೆ ಇಡೀ ಮೈ ಬೆಂದು ಬೆವರಾಗಿ ಹರಿದಿರುತ್ತದೆ. ಅದರಲ್ಲೂ ಕಾಂಕ್ರೀಟ್ ಕಾಡಾಗಿರುವ ಬೆಂಗಳೂರಿನಲ್ಲಿ ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ದಾಖಲೆ ಮಟ್ಟದ ತಾಪಮಾನ ದಾಖಲಾಗಿದೆ. ಹಾಗಂತ ಬೇಸಿಗೆ ಇನ್ನೂ ಮುಗಿದಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾಡುವ ಎಲ್ಲ ಲಕ್ಷಣಗಳೂ ಇವೆ. ಬೇಸಿಗೆಯ ಬಿಸಿ ಹೆಚ್ಚಳದ ಸಮ್ಮುಖದಲ್ಲಿ ಮೊದಲು ಆರೋಗ್ಯದ ಕಡೆ ಗಮನ ಕೊಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಅಬ್ಬಬ್ಬಾ! ಕೂಲ್ ಕೂಲ್ ಸಿಟಿ ಬೆಂಗಳೂರಿನ ತಾಪಮಾನ 40 ಡಿಗ್ರಿ ತಲುಪಿತಾ! ಮುಂದಿನ ದಿನಗಳು ಇನ್ನಷ್ಟು ಭೀಕರ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:Apr 30, 2024 | 8:33 PM

Share

ಸಿಲಿಕಾನ್ ಸಿಟಿ ಬೆಂಗಳೂರು ದಿನ ಕಳೆದಂತೆಲ್ಲ ಕಾದ ಹಂಚಿನಂತೆ ಸುಡುತ್ತಿದೆ. ಆಚೆ ಕಾಲಿಟ್ಟರೆ ಸಾಕು ಸೂರ್ಯ ನೆತ್ತಿ ಸುಡುತ್ತಿದ್ದಾನೆ. ಬಿಸಿ ಹಬೆ ಜನರನ್ನು ಎಲ್ಲೂ ಓಡಾಡದಂತೆ ಮಾಡಿದೆ. ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿಯೂ ದಾಖಲೆ ಮಟ್ಟದ ತಾಪಮಾನವಿತ್ತು. ಕಳೆದ ಏಪ್ರಿಲ್ 24ರ ಬುಧವಾರ ಬೆಂಗಳೂರಿನಲ್ಲಿ 38 ಡಿಗ್ರಿ ಸೆಲ್ಶಿಯಸ್ ಉಷ್ಠಾಂಶ ದಾಖಲಾಗಿತ್ತು. ಏಪ್ರಿಲ್ 28ರ ಭಾನುವಾರ ಬೆಂಗಳೂರು ತಾಪಮಾನ ಮತ್ತೊಂದು ದಾಖಲೆಯ ಮಟ್ಟ ತಲುಪಿದೆ. ಕಳೆದ ದಶಕದಲ್ಲೇ ಅತಿ ಹೆಚ್ಚು ಬಿಸಿಲಿನ ದಿನ ಎನ್ನುವ ದಾಖಲೆ ಬರೆದಿದೆ. ಸಾಮಾನ್ಯವಾಗಿ ಕೂಲ್ ಕೂಲ್​ ಆಗಿಯೆ ಇರುವ ಬೆಂಗಳೂರು ಮಹಾನಗರವೇ ಹೀಗಿರುವಾಗ ರಾಜ್ಯದ ಇತರ ಜಿಲ್ಲೆಗಳಲ್ಲಿಯಂತೂ ತಾಪಮಾನ ಏರುಗತಿಯಲ್ಲಿಯೇ ಇದ್ದು, ಬಿಸಿಲ ಬೇಗೆಗೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ಏಪ್ರಿಲ್‌ 28ರ ಭಾನುವಾರ ನಗರದಲ್ಲಿ ದಾಖಲೆಯ 38.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಇದು ರಾಜಧಾನಿಯಲ್ಲಿ ಏಪ್ರಿಲ್‌ ತಿಂಗಳಲ್ಲಿ ದಾಖಲಾದ ಎರಡನೇ ಅತಿ ಹೆಚ್ಚು ಹಾಗೂ ಒಟ್ಟಾರೆ ಮೂರನೇ ಅತಿ ಹೆಚ್ಚು ತಾಪಮಾನವಾಗಿದೆ. 2016 ಏಪ್ರಿಲ್‌ 25 ರಂದು ನಗರದಲ್ಲಿ 39.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ಇದಕ್ಕೂ ಪೂರ್ವದಲ್ಲಿ 1931 ಮೇ 22 ರಂದು 38.9 ಹಾಗೂ 1931 ರ ಏಪ್ರಿಲ್‌ 30ರಂದು 38.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಲೇ ಇದೆ. ಮುಂದಿನ ಎರಡು-ಮೂರು ದಿನಗಳಲ್ಲಿ ತಾಪಮಾನ 39 ಡಿಗ್ರಿಗೆ ಏರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮಾರ್ಚ್ 29 ರಂದು...

Published On - 4:34 pm, Tue, 30 April 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ