AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌನ್ ಬನೇಗಾ ಕರೋಡ್​ಪತಿ ತಜ್ಞರ ಸೀಟಲ್ಲಿ ಕೂರಲಿದ್ದಾರೆ ‘ಸೂಪರ್ 30’ ಸಂಸ್ಥಾಪಕ ಆನಂದ ಕುಮಾರ್

'ಸೂಪರ್ 30' ಸಂಸ್ಥಾಪಕ ಮತ್ತು ಖ್ಯಾತ ಗಣಿತಜ್ಞ ಆನಂದ ಕುಮಾರ್ ಸೋಮವಾರ ಪ್ರಸಾರವಾಗಲಿರುವ ಜನಪ್ರಿಯ ಕ್ವಿಜ್ ಶೋ ಕೌನ್ ಬನೇಗಾ ಕರೋಡ್​ಪತಿ ಕಾರ್ಯಕ್ರಮದ ತಜ್ಞರ ಸೀಟಲ್ಲಿ ಕುಳಿತುಕೊಳ್ಳಲಿದ್ದಾರೆ.

ಕೌನ್ ಬನೇಗಾ ಕರೋಡ್​ಪತಿ ತಜ್ಞರ ಸೀಟಲ್ಲಿ ಕೂರಲಿದ್ದಾರೆ 'ಸೂಪರ್ 30' ಸಂಸ್ಥಾಪಕ ಆನಂದ ಕುಮಾರ್
ಆನಂದ ಕುಮಾರ್
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Dec 05, 2020 | 4:20 PM

Share

ಪಟನಾ: ‘ಸೂಪರ್ 30’ ಸಂಸ್ಥಾಪಕ ಮತ್ತು ಖ್ಯಾತ ಗಣಿತಜ್ಞ ಆನಂದ ಕುಮಾರ್ ಸೋಮವಾರ ಪ್ರಸಾರವಾಗಲಿರುವ ಜನಪ್ರಿಯ ಕ್ವಿಜ್ ಶೋ ಕೌನ್ ಬನೇಗಾ ಕರೋಡ್​ಪತಿ ಕಾರ್ಯಕ್ರಮದ ತಜ್ಞರ ಸೀಟಲ್ಲಿ ಕುಳಿತುಕೊಳ್ಳಲಿದ್ದಾರೆ. ಆನಂದ ಕುಮಾರ್ ಅವರು ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೆಬಿಸಿ 12ನೇ ಆವೃತ್ತಿಯ 51, 61ಮತ್ತು 62ನೇ ಕಂತಿನ ತಜ್ಞರಾಗಿರಲಿದ್ದಾರೆ ಎಂದು ಸೂಪರ್ 30 ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

2017ರಲ್ಲಿ ಆನಂದ ಕುಮಾರ್ ಕೆಬಿಸಿಯಲ್ಲಿ ಸ್ಪರ್ಧಿಯಾಗಿ ಭಾಗವಹಿಸಿ ₹25 ಲಕ್ಷ ಗೆದ್ದಿದ್ದರು. ‘ಆರಕ್ಷಣ್’ ಚಿತ್ರದಲ್ಲಿ ಶಿಕ್ಷಕನ ಪಾತ್ರ ನಿರ್ವಹಿಸಲು ಅಮಿತಾಬ್ ಬಚ್ಚನ್ ಅವರಿಗೆ ಸಹಾಯ ಮಾಡಿದ್ದರು ಕುಮಾರ್. ಬಚ್ಚನ್ ಜತೆ ಕೆಲಸ ಮಾಡುವುದು ಖುಷಿಕೊಡುತ್ತದೆ ಅಂತಾರೆ ಅವರು.

2002ರಲ್ಲಿ ಆರಂಭವಾದ ಸೂಪರ್ 30 ಸಂಸ್ಥೆಯು ರಿಕ್ಷಾ ಚಾಲಕರ, ರೈತರ, ಮನೆಗೆಲಸದವರ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬದ ಬಡ ಮಕ್ಕಳಿಗೆ ಉಚಿತ ಶಿಕ್ಷಣ, ಆಹಾರ ಮತ್ತು ವಸತಿ ಪೂರೈಸಿ ಐಐಟಿ ಪರೀಕ್ಷೆಗೆ ಸಿದ್ಧಪಡಿಸುತ್ತದೆ.

ಆನಂದ ಕುಮಾರ್ ಅವರ ಜೀವನಾಧಾರಿತ ಸೂಪರ್ 30 ಎಂಬ ಸಿನಿಮಾ ಕಳೆದ ವರ್ಷ ತೆರೆಕಂಡಿತ್ತು. ಹೃತಿಕ್ ರೋಷನ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು.

Published On - 4:19 pm, Sat, 5 December 20

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​