ಜನಾರ್ಧನ ರೆಡ್ಡಿ ಮನವಿಗೆ ಷರತ್ತಿನ ಸಮ್ಮತಿ ನೀಡಿದ ಸುಪ್ರೀಂಕೋರ್ಟ್‌

ಬಳ್ಳಾರಿಗೆ ಭೇಟಿ ನೀಡಲು ಅವಕಾಶ ಕೋರಿ ಮಾಜಿ ಸಚಿವ ಜಿ ಜನಾರ್ಧನ ರೆಡ್ಡಿ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಮನವಿ ಪುರಸ್ಕೃತಗೊಂಡಿದೆ. ಸರ್ವೋಚ್ಛ ನ್ಯಾಯಾಲಯವು ಎರಡು ದಿನಗಳ ಮಟ್ಟಿಗೆ ಭೇಟಿ ನೀಡಲು ಷರತ್ತಿನ ಸಮ್ಮತಿ ನೀಡಿದೆ. ಆಗಸ್ಟ್ 30 ರಿಂದ 2 ದಿನ ಬಳ್ಳಾರಿಗೆ ಭೇಟಿ ನೀಡುವ ಅವಕಾಶವನ್ನು ಅಪೆಕ್ಸ್ ಕೋರ್ಟ್ ಒದಗಿಸಿದ್ದು, ಪೊಲೀಸ್ ಕಾವಲಿನಲ್ಲಿ ಮಾತ್ರ ಅಲ್ಲಿಗೆ ಹೋಗಬೇಕು ಹಾಗು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿ ಮೇಲೆ ಪ್ರಭಾವ ಬೀರಬಾರದು ಎಂದು ಆದೇಶಿಸಿದೆ. ಇತ್ತೀಚೆಗೆ […]

ಜನಾರ್ಧನ ರೆಡ್ಡಿ ಮನವಿಗೆ ಷರತ್ತಿನ ಸಮ್ಮತಿ ನೀಡಿದ ಸುಪ್ರೀಂಕೋರ್ಟ್‌
ಅರುಣ್​ ಕುಮಾರ್​ ಬೆಳ್ಳಿ

Updated on: Aug 27, 2020 | 7:29 PM

ಬಳ್ಳಾರಿಗೆ ಭೇಟಿ ನೀಡಲು ಅವಕಾಶ ಕೋರಿ ಮಾಜಿ ಸಚಿವ ಜಿ ಜನಾರ್ಧನ ರೆಡ್ಡಿ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಮನವಿ ಪುರಸ್ಕೃತಗೊಂಡಿದೆ. ಸರ್ವೋಚ್ಛ ನ್ಯಾಯಾಲಯವು ಎರಡು ದಿನಗಳ ಮಟ್ಟಿಗೆ ಭೇಟಿ ನೀಡಲು ಷರತ್ತಿನ ಸಮ್ಮತಿ ನೀಡಿದೆ.

ಆಗಸ್ಟ್ 30 ರಿಂದ 2 ದಿನ ಬಳ್ಳಾರಿಗೆ ಭೇಟಿ ನೀಡುವ ಅವಕಾಶವನ್ನು ಅಪೆಕ್ಸ್ ಕೋರ್ಟ್ ಒದಗಿಸಿದ್ದು, ಪೊಲೀಸ್ ಕಾವಲಿನಲ್ಲಿ ಮಾತ್ರ ಅಲ್ಲಿಗೆ ಹೋಗಬೇಕು ಹಾಗು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿ ಮೇಲೆ ಪ್ರಭಾವ ಬೀರಬಾರದು ಎಂದು ಆದೇಶಿಸಿದೆ.

ಇತ್ತೀಚೆಗೆ ನಿಧನರಾದ ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ತಿಥಿಕಾರ್ಯದಲ್ಲಿ ಪಾಲ್ಗೊಳ್ಳಲು ಜನಾರ್ಧನ ರೆಡ್ಡಿ ಅನುಮತಿ ಕೋರಿದ್ದರು

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us