AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ

ಬೆಂಗಳೂರು: ಡಿಸೆಂಬರ್ ಅಂತ್ಯದವರೆಗೂ ಶಾಲೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಡಿಸೆಂಬರ್​ನಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ಬೇಡ ಎಂದು ತಜ್ಞರು ಹೇಳಿದರು. ಹಾಗಾಗಿ, ಡಿಸೆಂಬರ್ 3ನೇ ವಾರದಲ್ಲಿ ಮತ್ತೆ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರೇಶ್ ಕುಮಾರ್​ ಹೇಳಿದರು. ಶಾಲೆ ಆರಂಭಿಸುವ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮೀಣ ಭಾಗದಲ್ಲಿ ಆಗುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಿತು. ಶಿಕ್ಷಣ ಇಲಾಖೆ ಸಂಗ್ರಹಿಸಿದ್ದ […]

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ
ಸಚಿವ ಸುರೇಶ್​ ಕುಮಾರ್​
KUSHAL V
| Edited By: |

Updated on:Nov 24, 2020 | 6:52 AM

Share

ಬೆಂಗಳೂರು: ಡಿಸೆಂಬರ್ ಅಂತ್ಯದವರೆಗೂ ಶಾಲೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಡಿಸೆಂಬರ್​ನಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ಬೇಡ ಎಂದು ತಜ್ಞರು ಹೇಳಿದರು. ಹಾಗಾಗಿ, ಡಿಸೆಂಬರ್ 3ನೇ ವಾರದಲ್ಲಿ ಮತ್ತೆ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರೇಶ್ ಕುಮಾರ್​ ಹೇಳಿದರು.

ಶಾಲೆ ಆರಂಭಿಸುವ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮೀಣ ಭಾಗದಲ್ಲಿ ಆಗುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಿತು. ಶಿಕ್ಷಣ ಇಲಾಖೆ ಸಂಗ್ರಹಿಸಿದ್ದ ವರದಿಯನ್ನು ಸಿಎಂ BSYಗೆ ಸಲ್ಲಿಸಿದ್ದರು. ಡಾ.ಸುದರ್ಶನ್​ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಅಭಿಪ್ರಾಯ ಬಗ್ಗೆ ಚರ್ಚೆ ನಡೆಯಿತು ಎಂದು ಸುರೇಶ್​ ಕುಮಾರ್​ ಹೇಳಿದರು.

ಡಿಸೆಂಬರ್​ನಲ್ಲಿ ಹೆಚ್ಚು ಚಳಿ‌ ಇರುತ್ತೆ. ಕೊರೊನಾ ಎರಡನೇ ಅಲೆಯ ಆತಂಕ‌ ಕೂಡಾ ಇದೆ. ಹಾಗಾಗಿ, 1ರಿಂದ 8ನೇ ತರಗತಿವರೆಗೆ ಈ ವರ್ಷ ಶಾಲೆ ಆರಂಭವಿಲ್ಲ ಎಂದು ಸುರೇಶ್​ ಕುಮಾರ್​ ಹೇಳಿದರು. ಜೊತೆಗೆ, ಡಿಸೆಂಬರ್​ನಲ್ಲಿ ಪಿಯು ಕಾಲೇಜು ತೆರೆಯುವುದಿಲ್ಲ ಎಂದು ಸಹ ಹೇಳಿದರು. ಚಂದನ ವಾಹಿನಿಯಲ್ಲಿ ಸಂವೇದಾ ತರಗತಿಗಳು ನಡೆಯಲಿವೆ. ಚಂದನ ವಾಹಿನಿಯಲ್ಲಿ ಇಂದಿನಿಂದ ಸಂವೇದಾ ಟಿವಿ ಪಾಠ ನಡೆಯಲಿದೆ ಎಂದೂ ಸಹ ಮಾಹಿತಿ ನೀಡಿದರು.

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?

‘ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ತೆರೆಯುವುದಿಲ್ಲ’ ಈ ನಡುವೆ, 1ನೇ ತರಗತಿಯಿಂದ ದ್ವಿತೀಯ PUವರೆಗೆ ಕಾಲೇಜು ತೆರೆಯಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ಕೊಟ್ಟರು. ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ತೆರೆಯುವುದಿಲ್ಲ ಎಂದು ಹೇಳಿದರು.

Published On - 1:14 pm, Mon, 23 November 20

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ