AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ

ಬೆಂಗಳೂರು: ಡಿಸೆಂಬರ್ ಅಂತ್ಯದವರೆಗೂ ಶಾಲೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಡಿಸೆಂಬರ್​ನಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ಬೇಡ ಎಂದು ತಜ್ಞರು ಹೇಳಿದರು. ಹಾಗಾಗಿ, ಡಿಸೆಂಬರ್ 3ನೇ ವಾರದಲ್ಲಿ ಮತ್ತೆ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರೇಶ್ ಕುಮಾರ್​ ಹೇಳಿದರು. ಶಾಲೆ ಆರಂಭಿಸುವ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮೀಣ ಭಾಗದಲ್ಲಿ ಆಗುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಿತು. ಶಿಕ್ಷಣ ಇಲಾಖೆ ಸಂಗ್ರಹಿಸಿದ್ದ […]

Corona 2020: ಈ ವರ್ಷ ಶಾಲೆ ಇಲ್ಲ.. ಶಿಕ್ಷಣ ಸಚಿವ ಸುರೇಶ್ ಕುಮಾರ್​ ಘೋಷಣೆ
ಸಚಿವ ಸುರೇಶ್​ ಕುಮಾರ್​
KUSHAL V
| Updated By: ಆಯೇಷಾ ಬಾನು|

Updated on:Nov 24, 2020 | 6:52 AM

Share

ಬೆಂಗಳೂರು: ಡಿಸೆಂಬರ್ ಅಂತ್ಯದವರೆಗೂ ಶಾಲೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಡಿಸೆಂಬರ್​ನಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ಬೇಡ ಎಂದು ತಜ್ಞರು ಹೇಳಿದರು. ಹಾಗಾಗಿ, ಡಿಸೆಂಬರ್ 3ನೇ ವಾರದಲ್ಲಿ ಮತ್ತೆ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸುರೇಶ್ ಕುಮಾರ್​ ಹೇಳಿದರು.

ಶಾಲೆ ಆರಂಭಿಸುವ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮೀಣ ಭಾಗದಲ್ಲಿ ಆಗುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಿತು. ಶಿಕ್ಷಣ ಇಲಾಖೆ ಸಂಗ್ರಹಿಸಿದ್ದ ವರದಿಯನ್ನು ಸಿಎಂ BSYಗೆ ಸಲ್ಲಿಸಿದ್ದರು. ಡಾ.ಸುದರ್ಶನ್​ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಅಭಿಪ್ರಾಯ ಬಗ್ಗೆ ಚರ್ಚೆ ನಡೆಯಿತು ಎಂದು ಸುರೇಶ್​ ಕುಮಾರ್​ ಹೇಳಿದರು.

ಡಿಸೆಂಬರ್​ನಲ್ಲಿ ಹೆಚ್ಚು ಚಳಿ‌ ಇರುತ್ತೆ. ಕೊರೊನಾ ಎರಡನೇ ಅಲೆಯ ಆತಂಕ‌ ಕೂಡಾ ಇದೆ. ಹಾಗಾಗಿ, 1ರಿಂದ 8ನೇ ತರಗತಿವರೆಗೆ ಈ ವರ್ಷ ಶಾಲೆ ಆರಂಭವಿಲ್ಲ ಎಂದು ಸುರೇಶ್​ ಕುಮಾರ್​ ಹೇಳಿದರು. ಜೊತೆಗೆ, ಡಿಸೆಂಬರ್​ನಲ್ಲಿ ಪಿಯು ಕಾಲೇಜು ತೆರೆಯುವುದಿಲ್ಲ ಎಂದು ಸಹ ಹೇಳಿದರು. ಚಂದನ ವಾಹಿನಿಯಲ್ಲಿ ಸಂವೇದಾ ತರಗತಿಗಳು ನಡೆಯಲಿವೆ. ಚಂದನ ವಾಹಿನಿಯಲ್ಲಿ ಇಂದಿನಿಂದ ಸಂವೇದಾ ಟಿವಿ ಪಾಠ ನಡೆಯಲಿದೆ ಎಂದೂ ಸಹ ಮಾಹಿತಿ ನೀಡಿದರು.

SSLC, ದ್ವಿತೀಯ PU ಪರೀಕ್ಷೆ ಯಾವಾಗ ಗೊತ್ತಾ?

‘ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ತೆರೆಯುವುದಿಲ್ಲ’ ಈ ನಡುವೆ, 1ನೇ ತರಗತಿಯಿಂದ ದ್ವಿತೀಯ PUವರೆಗೆ ಕಾಲೇಜು ತೆರೆಯಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ಕೊಟ್ಟರು. ಡಿಸೆಂಬರ್​ನಲ್ಲಿ ಶಾಲೆ, ಪಿಯು ಕಾಲೇಜು ತೆರೆಯುವುದಿಲ್ಲ ಎಂದು ಹೇಳಿದರು.

Published On - 1:14 pm, Mon, 23 November 20

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ