AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಉಪ ಚುನಾವಣೆ: ಸುರ್ಜೇವಾಲಾ ತೇಪೆ ಹಚ್ಚುವ ಪ್ರಯತ್ನ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ, ರಣದೀಪ ಸಿಂಗ್ ಸುರ್ಜೇವಾಲಾ ಶಿರಾ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಎದ್ದಿದ್ದ ಗೊಂದಲಕ್ಕೆ ತರೆ ಎಳೆಯಲು ಇಂದು ಪ್ರಯತ್ನಿಸಿದ್ದಾರೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಖಾಸಗಿ ಮಾತುಕತೆಯ ವಿವರ ಟಿವಿ9 ವರದಿ ಮಾಡಿತ್ತು ಹಾಗೂ ಅವರ ಮಾತುಕತೆಯಿಂದ ಪಕ್ಷಕ್ಕೆ ಮುಜುಗರ ತರುವ ಪರಿಸ್ಥಿತಿ ಉದ್ಭವವಾಗಿತ್ತು. ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಾ ಈ ಇಬ್ಬರೂ ನಾಯಕರು ಶಿರಾ ವಿಧಾನ […]

ಶಿರಾ ಉಪ ಚುನಾವಣೆ: ಸುರ್ಜೇವಾಲಾ ತೇಪೆ ಹಚ್ಚುವ ಪ್ರಯತ್ನ
ಡಾ. ಭಾಸ್ಕರ ಹೆಗಡೆ
|

Updated on: Oct 10, 2020 | 5:07 PM

Share

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ, ರಣದೀಪ ಸಿಂಗ್ ಸುರ್ಜೇವಾಲಾ ಶಿರಾ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಎದ್ದಿದ್ದ ಗೊಂದಲಕ್ಕೆ ತರೆ ಎಳೆಯಲು ಇಂದು ಪ್ರಯತ್ನಿಸಿದ್ದಾರೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಖಾಸಗಿ ಮಾತುಕತೆಯ ವಿವರ ಟಿವಿ9 ವರದಿ ಮಾಡಿತ್ತು ಹಾಗೂ ಅವರ ಮಾತುಕತೆಯಿಂದ ಪಕ್ಷಕ್ಕೆ ಮುಜುಗರ ತರುವ ಪರಿಸ್ಥಿತಿ ಉದ್ಭವವಾಗಿತ್ತು. ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಾ ಈ ಇಬ್ಬರೂ ನಾಯಕರು ಶಿರಾ ವಿಧಾನ ಸಭಾ ಉಪ ಚುನಾವಣೆಯಲ್ಲಿ ಟಿ.ಬಿ. ಜಯಚಂದ್ರ ಅವರಿಗೆ ಏಕೆ ಟಿಕೆಟ್ ನೀಡುವಿರಿ? ಅವರ ಬದಲಿಗೆ, ಬೇರೆಯವರಿಗೆ ಟಿಕೆಟ್ ಯಾಕೆ ನೀಡುವುದಿಲ್ಲ? ಎಂದು ಸುರ್ಜೇವಾಲಾ ಕೇಳಿದ್ದಾರೆ ಎಂಬ ವಿಚಾರವನ್ನು ಖಾಸಗಿಯಾಗಿ ಹಂಚಿಕೊಂಡಿದ್ದರು.

ಈಗ ಸುರ್ಜೇವಾಲಾ ಖುದ್ದು ಟ್ವೀಟ್ ಮಾಡಿ ಈ ಗೊಂದಲಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ. ಶಿರಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ಏಐಸಿಸಿ ಮತ್ತು ರಾಜ್ಯದ ನಾಯಕರು ಸೇರಿ ಒಮ್ಮತದಿಂದ ಸಮರ್ಥ ನಾಯಕರಾದ ಟಿ.ಬಿ. ಜಯಚಂದ್ರ ಅವರಿಗೆ ಟಿಕೆಟ್ ನೀಡಲು ನಿರ್ಧರಿಸದ್ದಾರೆ. ಮಾಧ್ಯಮ ಸ್ನೇಹಿತರು ಬಿಜೆಪಿಯ ಷಡ್ಯಂತ್ರಕ್ಕೆ ಸಿಲುಕದೇ ನಮ್ಮ ಅಭಿಪ್ರಾಯಕ್ಕೆ ಆದ್ಯತೆ ನೀಡಬೇಕಾಗಿ ವಿನಂತಿ, ಎಂದು ತಮ್ಮ ಟ್ವೀಟ್ ಮೂಲಕ ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?