AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಉಪ ಚುನಾವಣೆ: ಸುರ್ಜೇವಾಲಾ ತೇಪೆ ಹಚ್ಚುವ ಪ್ರಯತ್ನ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ, ರಣದೀಪ ಸಿಂಗ್ ಸುರ್ಜೇವಾಲಾ ಶಿರಾ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಎದ್ದಿದ್ದ ಗೊಂದಲಕ್ಕೆ ತರೆ ಎಳೆಯಲು ಇಂದು ಪ್ರಯತ್ನಿಸಿದ್ದಾರೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಖಾಸಗಿ ಮಾತುಕತೆಯ ವಿವರ ಟಿವಿ9 ವರದಿ ಮಾಡಿತ್ತು ಹಾಗೂ ಅವರ ಮಾತುಕತೆಯಿಂದ ಪಕ್ಷಕ್ಕೆ ಮುಜುಗರ ತರುವ ಪರಿಸ್ಥಿತಿ ಉದ್ಭವವಾಗಿತ್ತು. ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಾ ಈ ಇಬ್ಬರೂ ನಾಯಕರು ಶಿರಾ ವಿಧಾನ […]

ಶಿರಾ ಉಪ ಚುನಾವಣೆ: ಸುರ್ಜೇವಾಲಾ ತೇಪೆ ಹಚ್ಚುವ ಪ್ರಯತ್ನ
ಡಾ. ಭಾಸ್ಕರ ಹೆಗಡೆ
|

Updated on: Oct 10, 2020 | 5:07 PM

Share

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ, ರಣದೀಪ ಸಿಂಗ್ ಸುರ್ಜೇವಾಲಾ ಶಿರಾ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಎದ್ದಿದ್ದ ಗೊಂದಲಕ್ಕೆ ತರೆ ಎಳೆಯಲು ಇಂದು ಪ್ರಯತ್ನಿಸಿದ್ದಾರೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಖಾಸಗಿ ಮಾತುಕತೆಯ ವಿವರ ಟಿವಿ9 ವರದಿ ಮಾಡಿತ್ತು ಹಾಗೂ ಅವರ ಮಾತುಕತೆಯಿಂದ ಪಕ್ಷಕ್ಕೆ ಮುಜುಗರ ತರುವ ಪರಿಸ್ಥಿತಿ ಉದ್ಭವವಾಗಿತ್ತು. ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಾ ಈ ಇಬ್ಬರೂ ನಾಯಕರು ಶಿರಾ ವಿಧಾನ ಸಭಾ ಉಪ ಚುನಾವಣೆಯಲ್ಲಿ ಟಿ.ಬಿ. ಜಯಚಂದ್ರ ಅವರಿಗೆ ಏಕೆ ಟಿಕೆಟ್ ನೀಡುವಿರಿ? ಅವರ ಬದಲಿಗೆ, ಬೇರೆಯವರಿಗೆ ಟಿಕೆಟ್ ಯಾಕೆ ನೀಡುವುದಿಲ್ಲ? ಎಂದು ಸುರ್ಜೇವಾಲಾ ಕೇಳಿದ್ದಾರೆ ಎಂಬ ವಿಚಾರವನ್ನು ಖಾಸಗಿಯಾಗಿ ಹಂಚಿಕೊಂಡಿದ್ದರು.

ಈಗ ಸುರ್ಜೇವಾಲಾ ಖುದ್ದು ಟ್ವೀಟ್ ಮಾಡಿ ಈ ಗೊಂದಲಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ. ಶಿರಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ಏಐಸಿಸಿ ಮತ್ತು ರಾಜ್ಯದ ನಾಯಕರು ಸೇರಿ ಒಮ್ಮತದಿಂದ ಸಮರ್ಥ ನಾಯಕರಾದ ಟಿ.ಬಿ. ಜಯಚಂದ್ರ ಅವರಿಗೆ ಟಿಕೆಟ್ ನೀಡಲು ನಿರ್ಧರಿಸದ್ದಾರೆ. ಮಾಧ್ಯಮ ಸ್ನೇಹಿತರು ಬಿಜೆಪಿಯ ಷಡ್ಯಂತ್ರಕ್ಕೆ ಸಿಲುಕದೇ ನಮ್ಮ ಅಭಿಪ್ರಾಯಕ್ಕೆ ಆದ್ಯತೆ ನೀಡಬೇಕಾಗಿ ವಿನಂತಿ, ಎಂದು ತಮ್ಮ ಟ್ವೀಟ್ ಮೂಲಕ ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು