AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಎಡವಟ್ಟು: ನೆಗಟಿವ್​ ಬಂದಿದ್ರೂ ಯುವಕನನ್ನ ಆಸ್ಪತ್ರೆಗೆ ಅಡ್ಮಿಟ್​, ಮುಂದೇನಾಯ್ತು?

ಬೆಂಗಳೂರು ಗ್ರಾಮಾಂತರ: ಸರ್ಕಾರಕ್ಕೆ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಕೇಸ್​ಗಳು ಹೆಚ್ಚುತ್ತಿರುವುದು ಒಂದು ಕಡೆ ತಲೆ ನೋವಾಗಿದ್ದರೆ ಮತ್ತೊಂದು ಕಡೆ ಬೆಂಗಳೂರು ಮಹಾನಗರ ಪಾಲಿಕೆಯು ಒಂದರ ಮೇಲೊಂದರಂತೆ ಮಾಡುತ್ತಿರುವ ಎಡವಟ್ಟುಗಳ ಮತ್ತಷ್ಟು ತಲೆಬಿಸಿ ಉಂಟುಮಾಡಿದೆ. ಇದೀಗ, ಪಾಸಿಟಿವ್​ ಬಂದಿದ್ದ ಸೊಂಕಿತನೊಬ್ಬನನ್ನ ಮನೆಗೆ ಕಳುಹಿಸಿ ನೆಗಟಿವ್ ವರದಿಯಾಗಿದ್ದ ಯುವಕನನ್ನ ಕೊವಿಡ್ ಆಸ್ಪತ್ರೆಗೆ ದಾಖಲಿಸಿಕೊಂಡಿರುವ ಪ್ರಕರಣ ಜಿಲ್ಲೆಯ ಹೊಸಕೋಟೆಯಲ್ಲಿ ಬೆಳಕಿಗೆ ಬಂದಿದೆ. ಜುಲೈ 1 ರಂದು ರಷ್ಯಾದಿಂದ ಬಂದವರನ್ನ ವೈಟ್​ಫೀಲ್ಡ್ ಬಳಿ ಹೋಟೆಲ್ ಒಂದರಲ್ಲಿ ಕ್ವಾರಂಟೈನ್​ ಮಾಡಿ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. […]

ಅಧಿಕಾರಿಗಳ ಎಡವಟ್ಟು: ನೆಗಟಿವ್​ ಬಂದಿದ್ರೂ ಯುವಕನನ್ನ ಆಸ್ಪತ್ರೆಗೆ ಅಡ್ಮಿಟ್​, ಮುಂದೇನಾಯ್ತು?
ಸಾಧು ಶ್ರೀನಾಥ್​
| Edited By: |

Updated on:Jul 11, 2020 | 2:29 PM

Share

ಬೆಂಗಳೂರು ಗ್ರಾಮಾಂತರ: ಸರ್ಕಾರಕ್ಕೆ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಕೇಸ್​ಗಳು ಹೆಚ್ಚುತ್ತಿರುವುದು ಒಂದು ಕಡೆ ತಲೆ ನೋವಾಗಿದ್ದರೆ ಮತ್ತೊಂದು ಕಡೆ ಬೆಂಗಳೂರು ಮಹಾನಗರ ಪಾಲಿಕೆಯು ಒಂದರ ಮೇಲೊಂದರಂತೆ ಮಾಡುತ್ತಿರುವ ಎಡವಟ್ಟುಗಳ ಮತ್ತಷ್ಟು ತಲೆಬಿಸಿ ಉಂಟುಮಾಡಿದೆ. ಇದೀಗ, ಪಾಸಿಟಿವ್​ ಬಂದಿದ್ದ ಸೊಂಕಿತನೊಬ್ಬನನ್ನ ಮನೆಗೆ ಕಳುಹಿಸಿ ನೆಗಟಿವ್ ವರದಿಯಾಗಿದ್ದ ಯುವಕನನ್ನ ಕೊವಿಡ್ ಆಸ್ಪತ್ರೆಗೆ ದಾಖಲಿಸಿಕೊಂಡಿರುವ ಪ್ರಕರಣ ಜಿಲ್ಲೆಯ ಹೊಸಕೋಟೆಯಲ್ಲಿ ಬೆಳಕಿಗೆ ಬಂದಿದೆ.

ಜುಲೈ 1 ರಂದು ರಷ್ಯಾದಿಂದ ಬಂದವರನ್ನ ವೈಟ್​ಫೀಲ್ಡ್ ಬಳಿ ಹೋಟೆಲ್ ಒಂದರಲ್ಲಿ ಕ್ವಾರಂಟೈನ್​ ಮಾಡಿ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಈ‌ ವೇಳೆ, ಕೋವಿಡ್ ಟೆಸ್ಟ್​ ನಲ್ಲಿ 32 ಜನರಿಗೆ ಲಕ್ಷಣ ಕಂಡು‌ ಬಂದಿದ್ದು ಅವರನ್ನು ಕೊವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಈ‌ ಮಧ್ಯೆ, ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದ ಪಾಸಿಟಿವ್ ಬಂದ ಓರ್ವನನ್ನ ಮನೆಗೆ ಕಳಿಸಿ ನೆಗಟಿವ್ ಬಂದಿದ್ದ ಯುವಕನನ್ನ ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಮಧ್ಯೆ ಆಸ್ಪತ್ರೆಗೆ ಸೇರಿಸಿದ್ದ ಯುವಕನ ಮೊಬೈಲ್​ಗೆ ನೆಗಟಿವ್ ರಿಪೋರ್ಟ್ ಎಂಬ ಮೆಸೇಜ್​ ಬಂದಿದ್ದು ಇದೀಗ ಆತ ತನ್ನನ್ನು ಮನೆಗೆ ಕಳಿಸುವಂತೆ ಮನವಿ ಮಾಡಿದ್ದಾನೆ. ಆದರೆ, ಇದಕ್ಕೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲವಂತೆ.

ಈ ಮಧ್ಯೆ ತನ್ನ ತಂದೆಗೆ ಕರೆಮಾಡಿದ ಯುವಕ ಆತನನ್ನು ಆಸ್ಪತ್ರೆ ಬಳಿ ಕರೆಸಿ ನಂತರ ಕಾರಿನಲ್ಲಿ ಪರಾರಿಯಾಗಿದ್ದಾನೆ. ಇದೀಗ, ಎಸ್ಕೇಪ್ ಆಗಿದ್ದ ಯುವಕನನ್ನ ವಾಪಸ್ ಕರೆತರಲು ಹೋಗಿದ್ದ ಅಧಿಕಾರಿಗಳಿಗೆ ತಮ್ಮ ಎಡವಟ್ಟಿನ ಅರಿವಾಗಿದೆ. ಆಸ್ವತ್ರೆಯಲ್ಲಿ ಸೊಂಕಿತರ ಜೊತೆಗೆ ಯುವಕನಿದ್ದ ಕಾರಣದಿಂದ ಇದೀಗ ಆತನನ್ನು ಹೊಸಕೋಟೆ ಬಳಿ ಕ್ವಾರಂಟೈನ್ ಮಾಡಲಾಗಿದೆ. ಮತ್ತೊಮ್ಮೆ ಕೊವಿಡ್ ಟೆಸ್ಟ್ ಮಾಡಿಸಿ ರಿಪೋರ್ಟ್ ನೆಗಟಿವ್ ಬಂದ್ರೆ ಆತನನ್ನು ಮನೆಗೆ ಕಳಿಸುವುದಾಗಿ ತಿಳಿಸಿದ್ದಾರೆ.

Published On - 12:13 pm, Sat, 11 July 20

3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ