AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಎಡವಟ್ಟು: ನೆಗಟಿವ್​ ಬಂದಿದ್ರೂ ಯುವಕನನ್ನ ಆಸ್ಪತ್ರೆಗೆ ಅಡ್ಮಿಟ್​, ಮುಂದೇನಾಯ್ತು?

ಬೆಂಗಳೂರು ಗ್ರಾಮಾಂತರ: ಸರ್ಕಾರಕ್ಕೆ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಕೇಸ್​ಗಳು ಹೆಚ್ಚುತ್ತಿರುವುದು ಒಂದು ಕಡೆ ತಲೆ ನೋವಾಗಿದ್ದರೆ ಮತ್ತೊಂದು ಕಡೆ ಬೆಂಗಳೂರು ಮಹಾನಗರ ಪಾಲಿಕೆಯು ಒಂದರ ಮೇಲೊಂದರಂತೆ ಮಾಡುತ್ತಿರುವ ಎಡವಟ್ಟುಗಳ ಮತ್ತಷ್ಟು ತಲೆಬಿಸಿ ಉಂಟುಮಾಡಿದೆ. ಇದೀಗ, ಪಾಸಿಟಿವ್​ ಬಂದಿದ್ದ ಸೊಂಕಿತನೊಬ್ಬನನ್ನ ಮನೆಗೆ ಕಳುಹಿಸಿ ನೆಗಟಿವ್ ವರದಿಯಾಗಿದ್ದ ಯುವಕನನ್ನ ಕೊವಿಡ್ ಆಸ್ಪತ್ರೆಗೆ ದಾಖಲಿಸಿಕೊಂಡಿರುವ ಪ್ರಕರಣ ಜಿಲ್ಲೆಯ ಹೊಸಕೋಟೆಯಲ್ಲಿ ಬೆಳಕಿಗೆ ಬಂದಿದೆ. ಜುಲೈ 1 ರಂದು ರಷ್ಯಾದಿಂದ ಬಂದವರನ್ನ ವೈಟ್​ಫೀಲ್ಡ್ ಬಳಿ ಹೋಟೆಲ್ ಒಂದರಲ್ಲಿ ಕ್ವಾರಂಟೈನ್​ ಮಾಡಿ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. […]

ಅಧಿಕಾರಿಗಳ ಎಡವಟ್ಟು: ನೆಗಟಿವ್​ ಬಂದಿದ್ರೂ ಯುವಕನನ್ನ ಆಸ್ಪತ್ರೆಗೆ ಅಡ್ಮಿಟ್​, ಮುಂದೇನಾಯ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 11, 2020 | 2:29 PM

Share

ಬೆಂಗಳೂರು ಗ್ರಾಮಾಂತರ: ಸರ್ಕಾರಕ್ಕೆ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಕೇಸ್​ಗಳು ಹೆಚ್ಚುತ್ತಿರುವುದು ಒಂದು ಕಡೆ ತಲೆ ನೋವಾಗಿದ್ದರೆ ಮತ್ತೊಂದು ಕಡೆ ಬೆಂಗಳೂರು ಮಹಾನಗರ ಪಾಲಿಕೆಯು ಒಂದರ ಮೇಲೊಂದರಂತೆ ಮಾಡುತ್ತಿರುವ ಎಡವಟ್ಟುಗಳ ಮತ್ತಷ್ಟು ತಲೆಬಿಸಿ ಉಂಟುಮಾಡಿದೆ. ಇದೀಗ, ಪಾಸಿಟಿವ್​ ಬಂದಿದ್ದ ಸೊಂಕಿತನೊಬ್ಬನನ್ನ ಮನೆಗೆ ಕಳುಹಿಸಿ ನೆಗಟಿವ್ ವರದಿಯಾಗಿದ್ದ ಯುವಕನನ್ನ ಕೊವಿಡ್ ಆಸ್ಪತ್ರೆಗೆ ದಾಖಲಿಸಿಕೊಂಡಿರುವ ಪ್ರಕರಣ ಜಿಲ್ಲೆಯ ಹೊಸಕೋಟೆಯಲ್ಲಿ ಬೆಳಕಿಗೆ ಬಂದಿದೆ.

ಜುಲೈ 1 ರಂದು ರಷ್ಯಾದಿಂದ ಬಂದವರನ್ನ ವೈಟ್​ಫೀಲ್ಡ್ ಬಳಿ ಹೋಟೆಲ್ ಒಂದರಲ್ಲಿ ಕ್ವಾರಂಟೈನ್​ ಮಾಡಿ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಈ‌ ವೇಳೆ, ಕೋವಿಡ್ ಟೆಸ್ಟ್​ ನಲ್ಲಿ 32 ಜನರಿಗೆ ಲಕ್ಷಣ ಕಂಡು‌ ಬಂದಿದ್ದು ಅವರನ್ನು ಕೊವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಈ‌ ಮಧ್ಯೆ, ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದ ಪಾಸಿಟಿವ್ ಬಂದ ಓರ್ವನನ್ನ ಮನೆಗೆ ಕಳಿಸಿ ನೆಗಟಿವ್ ಬಂದಿದ್ದ ಯುವಕನನ್ನ ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಮಧ್ಯೆ ಆಸ್ಪತ್ರೆಗೆ ಸೇರಿಸಿದ್ದ ಯುವಕನ ಮೊಬೈಲ್​ಗೆ ನೆಗಟಿವ್ ರಿಪೋರ್ಟ್ ಎಂಬ ಮೆಸೇಜ್​ ಬಂದಿದ್ದು ಇದೀಗ ಆತ ತನ್ನನ್ನು ಮನೆಗೆ ಕಳಿಸುವಂತೆ ಮನವಿ ಮಾಡಿದ್ದಾನೆ. ಆದರೆ, ಇದಕ್ಕೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲವಂತೆ.

ಈ ಮಧ್ಯೆ ತನ್ನ ತಂದೆಗೆ ಕರೆಮಾಡಿದ ಯುವಕ ಆತನನ್ನು ಆಸ್ಪತ್ರೆ ಬಳಿ ಕರೆಸಿ ನಂತರ ಕಾರಿನಲ್ಲಿ ಪರಾರಿಯಾಗಿದ್ದಾನೆ. ಇದೀಗ, ಎಸ್ಕೇಪ್ ಆಗಿದ್ದ ಯುವಕನನ್ನ ವಾಪಸ್ ಕರೆತರಲು ಹೋಗಿದ್ದ ಅಧಿಕಾರಿಗಳಿಗೆ ತಮ್ಮ ಎಡವಟ್ಟಿನ ಅರಿವಾಗಿದೆ. ಆಸ್ವತ್ರೆಯಲ್ಲಿ ಸೊಂಕಿತರ ಜೊತೆಗೆ ಯುವಕನಿದ್ದ ಕಾರಣದಿಂದ ಇದೀಗ ಆತನನ್ನು ಹೊಸಕೋಟೆ ಬಳಿ ಕ್ವಾರಂಟೈನ್ ಮಾಡಲಾಗಿದೆ. ಮತ್ತೊಮ್ಮೆ ಕೊವಿಡ್ ಟೆಸ್ಟ್ ಮಾಡಿಸಿ ರಿಪೋರ್ಟ್ ನೆಗಟಿವ್ ಬಂದ್ರೆ ಆತನನ್ನು ಮನೆಗೆ ಕಳಿಸುವುದಾಗಿ ತಿಳಿಸಿದ್ದಾರೆ.

Published On - 12:13 pm, Sat, 11 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ