Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ದಿನದ ಸುತ್ತೂರು ಜಾತ್ರೆ ಈ ಬಾರಿ ಎರಡೇ ದಿನಕ್ಕೆ ಸೀಮಿತ.. ಕೊರೊನಾ ಹಿನ್ನೆಲೆ ಸರಳ ಆಚರಣೆ!

Suttur Jatra Mahotsav 2021 | ಕೊರೊನಾ ಹಿನ್ನೆಲೆಯಲ್ಲಿ ಸುತ್ತೂರು ಜಾತ್ರೆಯನ್ನು ಸರಳವಾಗಿ ಹಾಗೂ ಕೇವಲ ಎರಡು ದಿನಕ್ಕೆ ಸೀಮಿತ ಮಾಡಲು ನಿರ್ಧರಿಸಲಾಗಿದೆ. ಇಂದಿನಿಂದ ಜಾತ್ರೆ ಆರಂಭವಾಗಿದ್ದು ಇಂದು ರಥೋತ್ಸವ ನಡೆದಿದೆ. ಸುತ್ತೂರು ಶ್ರೀ, ವಿಜಯಪುರದ ಸಿದ್ದೇಶ್ವರ ಶ್ರೀ ರಥೋತ್ಸವಕ್ಕೆ ಚಾಲನೆ ನೀಡಿದ್ದಾರೆ.

6 ದಿನದ ಸುತ್ತೂರು ಜಾತ್ರೆ ಈ ಬಾರಿ ಎರಡೇ ದಿನಕ್ಕೆ ಸೀಮಿತ.. ಕೊರೊನಾ ಹಿನ್ನೆಲೆ ಸರಳ ಆಚರಣೆ!
ಸುತ್ತೂರು ಶ್ರೀ, ವಿಜಯಪುರದ ಸಿದ್ದೇಶ್ವರ ಶ್ರೀ ರಥೋತ್ಸವಕ್ಕೆ ಚಾಲನೆ ನೀಡಿದ್ರು.
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Feb 10, 2021 | 2:15 PM

ಮೈಸೂರು: ಪ್ರತಿ ವರ್ಷ ಸಂಭ್ರಮ ಸಡಗರದಿಂದ ಆರು ದಿನಗಳ ವರೆಗೆ ನಡೆಯುತ್ತಿದ್ದ ರಾಜ್ಯದ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವ ಕೊರೊನಾದಿಂದಾಗಿ ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಈ ಬಾರಿ ಕೇವಲ 2 ದಿನಕ್ಕೆ ಸುತ್ತೂರು ಜಾತ್ರೆ ಸೀಮಿತವಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ನಡೆಯುವ ಈ ಜಾತ್ರೆಗೆ ಅದರದೇ ಆದ ಪ್ರಸಿದ್ಧತೆ, ಇತಿಹಾಸ ಇದ್ದು ಕೊರೊನಾ ಎಲ್ಲದಕ್ಕೂ ಕಂಟಕವಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಸುತ್ತೂರು ಜಾತ್ರೆಯನ್ನು ಸರಳವಾಗಿ ಹಾಗೂ ಕೇವಲ ಎರಡು ದಿನಕ್ಕೆ ಸೀಮಿತ ಮಾಡಲು ನಿರ್ಧರಿಸಲಾಗಿದೆ. ಇಂದಿನಿಂದ ಜಾತ್ರೆ ಆರಂಭವಾಗಿದ್ದು ಇಂದು ರಥೋತ್ಸವ ನಡೆದಿದೆ. ಸುತ್ತೂರು ಶ್ರೀ, ವಿಜಯಪುರದ ಸಿದ್ದೇಶ್ವರ ಶ್ರೀ ರಥೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಸುತ್ತೂರಿನ ಗದ್ದುಗೆ ಮಠದಿಂದ ಶಿವರಾತ್ರೀಶ್ವರ ಶಿವಯೋಗಿಗಳ ಉತ್ಸವಮೂರ್ತಿ ಮೆರವಣಿಗೆ ನೆರವೇರಿದೆ. ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ರಥೋತ್ಸವದಲ್ಲಿ ಭಾಗಿಯಾಗಿದ್ದರು. ಸಾಮೂಹಿಕ ವಿವಾಹ ಹಾಗೂ ರಥೋತ್ಸವಕ್ಕೆ ಈ ಬಾರಿಯ ಸುತ್ತೂರು ಜಾತ್ರೆ ಸೀಮಿತಗೊಳಿಸಲಾಗಿದೆ. ಇನ್ನು ಸುತ್ತೂರು ಮಠ ಮಹಾದಾಸೋಹವನ್ನು ರದ್ದು ಮಾಡಿದೆ.

ರಾಜ್ಯದ ನಾನಾ ಭಾಗಗಳಿಂದ ಜಾತ್ರೆಗೆ ಜನರು ಬರುತ್ತಿದ್ದರು. ಮುಖ್ಯಮಂತ್ರಿ, ಸಚಿವರು, ಕೇಂದ್ರದ ಮಂತ್ರಿಗಳು, ಶಾಸಕರು ಜಾತ್ರೆಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಜನ ಸೇರುವುದು ಬೇಡ ಎನ್ನುವ ಕಾರಣಕ್ಕೆ ಈ ಬಾರಿ ಅತ್ಯಂತ ಸರಳವಾಗಿ ಕಾರ್ಯಕ್ರಮ ನಡೆಯಲಿದೆ.

Suttur Jatra mahotsav 2021

ಸುತ್ತೂರು ಜಾತ್ರೆ ವೇಳೆ ಕಂಡು ಬಂದ ದೃಶ್ಯ

Suttur Jatra mahotsav 2021

ಸುತ್ತೂರು ಜಾತ್ರೆ ವೇಳೆ ಕಂಡು ಬಂದ ದೃಶ್ಯ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ