AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ದಿನದ ಸುತ್ತೂರು ಜಾತ್ರೆ ಈ ಬಾರಿ ಎರಡೇ ದಿನಕ್ಕೆ ಸೀಮಿತ.. ಕೊರೊನಾ ಹಿನ್ನೆಲೆ ಸರಳ ಆಚರಣೆ!

Suttur Jatra Mahotsav 2021 | ಕೊರೊನಾ ಹಿನ್ನೆಲೆಯಲ್ಲಿ ಸುತ್ತೂರು ಜಾತ್ರೆಯನ್ನು ಸರಳವಾಗಿ ಹಾಗೂ ಕೇವಲ ಎರಡು ದಿನಕ್ಕೆ ಸೀಮಿತ ಮಾಡಲು ನಿರ್ಧರಿಸಲಾಗಿದೆ. ಇಂದಿನಿಂದ ಜಾತ್ರೆ ಆರಂಭವಾಗಿದ್ದು ಇಂದು ರಥೋತ್ಸವ ನಡೆದಿದೆ. ಸುತ್ತೂರು ಶ್ರೀ, ವಿಜಯಪುರದ ಸಿದ್ದೇಶ್ವರ ಶ್ರೀ ರಥೋತ್ಸವಕ್ಕೆ ಚಾಲನೆ ನೀಡಿದ್ದಾರೆ.

6 ದಿನದ ಸುತ್ತೂರು ಜಾತ್ರೆ ಈ ಬಾರಿ ಎರಡೇ ದಿನಕ್ಕೆ ಸೀಮಿತ.. ಕೊರೊನಾ ಹಿನ್ನೆಲೆ ಸರಳ ಆಚರಣೆ!
ಸುತ್ತೂರು ಶ್ರೀ, ವಿಜಯಪುರದ ಸಿದ್ದೇಶ್ವರ ಶ್ರೀ ರಥೋತ್ಸವಕ್ಕೆ ಚಾಲನೆ ನೀಡಿದ್ರು.
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 10, 2021 | 2:15 PM

Share

ಮೈಸೂರು: ಪ್ರತಿ ವರ್ಷ ಸಂಭ್ರಮ ಸಡಗರದಿಂದ ಆರು ದಿನಗಳ ವರೆಗೆ ನಡೆಯುತ್ತಿದ್ದ ರಾಜ್ಯದ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವ ಕೊರೊನಾದಿಂದಾಗಿ ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಈ ಬಾರಿ ಕೇವಲ 2 ದಿನಕ್ಕೆ ಸುತ್ತೂರು ಜಾತ್ರೆ ಸೀಮಿತವಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ನಡೆಯುವ ಈ ಜಾತ್ರೆಗೆ ಅದರದೇ ಆದ ಪ್ರಸಿದ್ಧತೆ, ಇತಿಹಾಸ ಇದ್ದು ಕೊರೊನಾ ಎಲ್ಲದಕ್ಕೂ ಕಂಟಕವಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಸುತ್ತೂರು ಜಾತ್ರೆಯನ್ನು ಸರಳವಾಗಿ ಹಾಗೂ ಕೇವಲ ಎರಡು ದಿನಕ್ಕೆ ಸೀಮಿತ ಮಾಡಲು ನಿರ್ಧರಿಸಲಾಗಿದೆ. ಇಂದಿನಿಂದ ಜಾತ್ರೆ ಆರಂಭವಾಗಿದ್ದು ಇಂದು ರಥೋತ್ಸವ ನಡೆದಿದೆ. ಸುತ್ತೂರು ಶ್ರೀ, ವಿಜಯಪುರದ ಸಿದ್ದೇಶ್ವರ ಶ್ರೀ ರಥೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಸುತ್ತೂರಿನ ಗದ್ದುಗೆ ಮಠದಿಂದ ಶಿವರಾತ್ರೀಶ್ವರ ಶಿವಯೋಗಿಗಳ ಉತ್ಸವಮೂರ್ತಿ ಮೆರವಣಿಗೆ ನೆರವೇರಿದೆ. ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ರಥೋತ್ಸವದಲ್ಲಿ ಭಾಗಿಯಾಗಿದ್ದರು. ಸಾಮೂಹಿಕ ವಿವಾಹ ಹಾಗೂ ರಥೋತ್ಸವಕ್ಕೆ ಈ ಬಾರಿಯ ಸುತ್ತೂರು ಜಾತ್ರೆ ಸೀಮಿತಗೊಳಿಸಲಾಗಿದೆ. ಇನ್ನು ಸುತ್ತೂರು ಮಠ ಮಹಾದಾಸೋಹವನ್ನು ರದ್ದು ಮಾಡಿದೆ.

ರಾಜ್ಯದ ನಾನಾ ಭಾಗಗಳಿಂದ ಜಾತ್ರೆಗೆ ಜನರು ಬರುತ್ತಿದ್ದರು. ಮುಖ್ಯಮಂತ್ರಿ, ಸಚಿವರು, ಕೇಂದ್ರದ ಮಂತ್ರಿಗಳು, ಶಾಸಕರು ಜಾತ್ರೆಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಜನ ಸೇರುವುದು ಬೇಡ ಎನ್ನುವ ಕಾರಣಕ್ಕೆ ಈ ಬಾರಿ ಅತ್ಯಂತ ಸರಳವಾಗಿ ಕಾರ್ಯಕ್ರಮ ನಡೆಯಲಿದೆ.

Suttur Jatra mahotsav 2021

ಸುತ್ತೂರು ಜಾತ್ರೆ ವೇಳೆ ಕಂಡು ಬಂದ ದೃಶ್ಯ

Suttur Jatra mahotsav 2021

ಸುತ್ತೂರು ಜಾತ್ರೆ ವೇಳೆ ಕಂಡು ಬಂದ ದೃಶ್ಯ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್