AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾಲುವೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದ ಸ್ವಿಫ್ಟ್​ ಕಾರ್ ಇಂದು ಪತ್ತೆ.. ಎಲ್ಲಿ ಸಿಕ್ತು?

ಬೆಂಗಳೂರು: ಕಂದಾಯ ಸಚಿವ ಅಶೋಕ್ ಸ್ವಕ್ಷೇತ್ರದಲ್ಲೇ ಮಳೆರಾಯ ಭಾರಿ ಅವಾಂತರ ಸೃಷ್ಟಿಸಿದ್ದಾನೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಹೊಸಕೆರೆಹಳ್ಳಿ ವಾರ್ಡ್‌ನಲ್ಲಿ ಮಳೆ ಬಂದಾಗಲೆಲ್ಲಾ ಸಮಸ್ಯೆ ಎದುರಾಗುತ್ತಿದೆ. ಈ ಬಾರಿ ಸಹ ಹೊಸಕೆರೆಹಳ್ಳಿ ವಾರ್ಡ್‌ನ ಹಲವು ಮನೆಗಳಿಗೆ ನೀರು ನುಗ್ಗಿದೆ. ಕಳೆದ 5 ವರ್ಷದಿಂದ ಸಮಸ್ಯೆಯಾಗ್ತಿದ್ದರೂ ಪರಿಹಾರ ಮಾತ್ರ ಇಲ್ಲ ಎಂದು ಸ್ಥಳೀಯರು ತಮ್ಮ ನೋವು ತೋಡಿಕೊಂಡಿದ್ದಾರೆ. ಸಮಸ್ಯೆ ಬಗೆಹರಿಸಲು ಸ್ಥಳೀಯರು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಡೋಂಟ್​ ಕೇರ್​. ಬಿಬಿಎಂಪಿ ಮತ್ತು BWSSB ಮಧ್ಯೆ ಸಮನ್ವಯತೆಯ ಕೊರತೆಯಿರುವ […]

ರಾಜಕಾಲುವೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದ ಸ್ವಿಫ್ಟ್​ ಕಾರ್ ಇಂದು ಪತ್ತೆ.. ಎಲ್ಲಿ ಸಿಕ್ತು?
KUSHAL V
|

Updated on:Oct 24, 2020 | 9:04 AM

Share

ಬೆಂಗಳೂರು: ಕಂದಾಯ ಸಚಿವ ಅಶೋಕ್ ಸ್ವಕ್ಷೇತ್ರದಲ್ಲೇ ಮಳೆರಾಯ ಭಾರಿ ಅವಾಂತರ ಸೃಷ್ಟಿಸಿದ್ದಾನೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಹೊಸಕೆರೆಹಳ್ಳಿ ವಾರ್ಡ್‌ನಲ್ಲಿ ಮಳೆ ಬಂದಾಗಲೆಲ್ಲಾ ಸಮಸ್ಯೆ ಎದುರಾಗುತ್ತಿದೆ.

ಈ ಬಾರಿ ಸಹ ಹೊಸಕೆರೆಹಳ್ಳಿ ವಾರ್ಡ್‌ನ ಹಲವು ಮನೆಗಳಿಗೆ ನೀರು ನುಗ್ಗಿದೆ. ಕಳೆದ 5 ವರ್ಷದಿಂದ ಸಮಸ್ಯೆಯಾಗ್ತಿದ್ದರೂ ಪರಿಹಾರ ಮಾತ್ರ ಇಲ್ಲ ಎಂದು ಸ್ಥಳೀಯರು ತಮ್ಮ ನೋವು ತೋಡಿಕೊಂಡಿದ್ದಾರೆ. ಸಮಸ್ಯೆ ಬಗೆಹರಿಸಲು ಸ್ಥಳೀಯರು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಡೋಂಟ್​ ಕೇರ್​.

ಬಿಬಿಎಂಪಿ ಮತ್ತು BWSSB ಮಧ್ಯೆ ಸಮನ್ವಯತೆಯ ಕೊರತೆಯಿರುವ ಹಿನ್ನೆಲೆಯಲ್ಲಿ ಹೊಸಕೆರೆಹಳ್ಳಿ ವಾರ್ಡ್‌ನಲ್ಲಿ ಪದೇ ಪದೆ ಅವಾಂತರಗಳು ಸೃಷ್ಟಿಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೊನ್ನೆ ಮಳೆ ಬಂದು ಸಾಕಷ್ಟು ಅವಾಂತರಗಳು ಎದುರಾಗಿತ್ತು. ಆಗ, ಸ್ಥಳಕ್ಕೆ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಭೇಟಿಕೊಟ್ಟು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದರು. ಆದರೆ ಸಮಸ್ಯೆ ಬಗೆಹರಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ಜೊತೆಗೆ, ಮನೆಯ ಸಂಪ್‌ಗಳಲ್ಲಿ ಕೊಳಚೆ ನೀರು ಸೇರಿರುವ ಹಿನ್ನೆಲೆಯಲ್ಲಿ ಏರಿಯಾದಲ್ಲಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಬಂದಿದೆ. ಎಲ್ಲರಿಗೂ ದಸರಾ ಹಬ್ಬದ ಸಂಭ್ರಮ, ನಮಗೆ ಮಾತ್ರ ಸ್ವಚ್ಛತೆ ಕೆಲಸ ಎಂದು ಸ್ಥಳೀಯರು ತಮ್ಮ ನೋವು ತೋಡಿಕೊಂಡರು.

ಇತ್ತ, ನಿನ್ನೆ ಸಂಜೆ ಸುರಿದ ಮಳೆಗೆ ರಾಜಕಾಲುವೆ ಉಕ್ಕಿ ಹರಿದು ಅದರ ನೀರಿನಲ್ಲಿ ತೇಲಿಕೊಂಡು ಹೋಗಿದ್ದ ಮಾರುತಿ ಸುಜುಕಿ ಸ್ವಿಫ್ಟ್ ಕಾರ್​ ಇಂದು ಪಕ್ಕದ ರಸ್ತೆಯಲ್ಲಿ ಪತ್ತೆಯಾಗಿದೆ. ಓವರ್​ ಫ್ಲೋ ಆದ ರಾಜಕಾಲುವೆಯ ನೀರಿನ ರಭಸಕ್ಕೆ ಸಿಲುಕಿದ ಕಾರು ಪಕ್ಕದ ರೋಡಿಗೆ ತೇಲಿಕೊಂಡು ಬಂದಿದೆ. ಮಳೆಯ ರಭಸಕ್ಕೆ ಕಾರಿನಡಿ ಬೈಕ್ ಒಂದು ಸಿಲುಕಿರುವುದು ಸಹ ತಿಳಿದುಬಂದಿದೆ.

Published On - 8:55 am, Sat, 24 October 20

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ