AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series ಸ್ಮಿತ್ ಸೆಂಚುರಿ.. ಜಡೇಜಾಗೆ 4 ವಿಕೆಟ್​: ಆಸ್ಟ್ರೇಲಿಯಾ ಆಲೌಟ್​

ಟೀಂ ಇಂಡಿಯಾ ಪರ 4 ವಿಕೆಟ್​ ಕಬಳಿಸಿದ ರವೀಂದ್ರ ಜಡೇಜಾ ಮೊದಲ ಇನ್ನಿಂಗ್ಸ್​ನ ಯಶಸ್ವಿ ಬೌಲರ್​ ಎನಿಸಿಕೊಂಡರು. ಹಾಗೆಯೇ ನವ್​ದೀಪ್​ ಸೈನಿ ಹಾಗೂ ಬುಮ್ರಾ ತಲಾ ವಿಕೆಟ್​ ತೆಗೆಯುವುದರ ಮುಖಾಂತರ ತಂಡಕ್ಕೆ ನೆರವಾದರು. ವೇಗಿ ಸಿರಾಜ್​ ಕೂಡ 1 ವಿಕೆಟ್​ ತೆಗೆದು ಮಿಂಚಿದರು.

India vs Australia Test Series ಸ್ಮಿತ್ ಸೆಂಚುರಿ.. ಜಡೇಜಾಗೆ 4 ವಿಕೆಟ್​: ಆಸ್ಟ್ರೇಲಿಯಾ ಆಲೌಟ್​
ಶತಕದ ಸಂಭ್ರಮದಲ್ಲಿ ಸ್ಟಿವ್​ ಸ್ಮಿತ್​
ಪೃಥ್ವಿಶಂಕರ
|

Updated on: Jan 08, 2021 | 10:15 AM

Share

ಸಿಡ್ನಿ: ಇಂಡಿಯಾ- ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್​ನ 2ನೇ ದಿನದಾಟದಲ್ಲಿ ಟೀಂ ಇಂಡಿಯಾ ಸಂಪೂರ್ಣ ಮೇಲುಗೈ ಸಾಧಿಸಿದ್ದು, ಮೊದಲ ಇನ್ನಿಂಗ್ಸ್​ನಲ್ಲಿ ಆಸಿಸ್​ ಪಡೆಯನ್ನು 338 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಟೀಂ ಇಂಡಿಯಾ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

ಆಸಿಸ್​ ಪರ ಸ್ಟೀವ್ ಸ್ಮಿತ್ 130 ರನ್ ಗಳಿಸಿ, ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೊದಲಿಗರಾದರು. ಸ್ಮಿತ್ ಜೊತೆಗೆ, ಲಾಬುಶೆನ್ 91 ರನ್ ಗಳಿಸಿದರೆ, ಚೊಚ್ಚಲ ಪಂದ್ಯವನ್ನಾಡಿದ ವಿಲ್ ಪುಕೋವ್ಸ್ಕಿ 62 ರನ್ ಗಳಿಸಿ ಆಸ್ಟ್ರೇಲಿಯಾ ತಂಡಕ್ಕೆ ನೆರವಾದರು.

3ನೇ ಟೆಸ್ಟ್‌ನ ಮೊದಲನೇ ದಿನದಲ್ಲಿ 166 ರನ್​ ಗಳಿಸಿ 2 ವಿಕೆಟ್​ ಕಳೆದುಕೊಂಡಿದ್ದ ಆಸಿಸ್​ ತಂಡ, 3ನೇ ದಿನದಾಟದಲ್ಲಿ ಉತ್ತಮ ಆರಂಭ ಪಡೆಯಿತು. ಸ್ಮಿತ್ ಜೊತೆಗೂಡಿದ ಲಾಬುಶೆನ್ ತಂಡಕ್ಕೆ ಬೇಕಾದ ಅಡಿಪಾಯ ಹಾಕಿಕೊಟ್ಟರು. ಆದರೆ 2ನೇ ಸೆಷನ್​ ಆರಂಭಕ್ಕೂ ಮುನ್ನ ಕೇವಲ 5 ವಿಕೆಟ್​ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿದ್ದ ಆಸ್ಟ್ರೇಲಿಯಾ ತಂಡ, 2ನೇ ಸೆಷನ್​ ಮುಗಿಯುವುದರೊಳಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 338 ರನ್ ಗಳಿಸಿತು.

ಆಸಿಸ್​ ಪಡೆಯನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಟೀಂ ಇಂಡಿಯಾ ಬೌಲರ್​ಗಳು ಯಶಸ್ವಿಯಾದರು. ಅದರಲ್ಲೂ ಟೀಂ ಇಂಡಿಯಾ ಪರ 4 ವಿಕೆಟ್​ ಕಬಳಿಸಿದ ರವೀಂದ್ರ ಜಡೇಜಾ ಮೊದಲ ಇನ್ನಿಂಗ್ಸ್​ನ ಯಶಸ್ವಿ ಬೌಲರ್​ ಎನಿಸಿಕೊಂಡರು. ಹಾಗೆಯೇ ನವ್​ದೀಪ್​ ಸೈನಿ ಹಾಗೂ ಬುಮ್ರಾ ತಲಾ 2 ವಿಕೆಟ್​ ತೆಗೆಯುವುದರ ಮೂಲಕ ತಂಡಕ್ಕೆ ನೆರವಾದರು. ವೇಗಿ ಸಿರಾಜ್​ ಕೂಡ 1 ವಿಕೆಟ್​ ತೆಗೆದರು.

ಈಗಾಗಲೇ ತಮ್ಮ ಮೊದಲ ಇನ್ನಿಂಗ್ಸ್​ನ ಬ್ಯಾಟಿಂಗ್​ ಆರಂಭಿಸಿರುವ ಟೀಂ ಇಂಡಿಯಾ 26 ರನ್​ ಗಳಿಸಿದೆ. ರೋಹಿತ್​ ಶರ್ಮ ಹಾಗೂ ಶು ಭ್​ ಮನ್​  ಗಿಲ್​ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ.

ಪಂತ್ ವಿಶ್ವದಲ್ಲೇ ಅತಿಹೆಚ್ಚು ಕ್ಯಾಚ್​ಗಳನ್ನು ಡ್ರಾಪ್ ಮಾಡಿರುವ ವಿಕೆಟ್ ​ಕೀಪರ್: ರಿಕ್ಕಿ ಪಾಂಟಿಂಗ್

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ