AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಾಹ್ನ 1 ರಿಂದ ಬೆಳಗ್ಗೆ 5 ರವರೆಗೆ ಲಾಕ್‌ಡೌನ್, ತಹಶೀಲ್ದಾರ್ ಆದೇಶ ಎಲ್ಲಿ?

ಚಿತ್ರದುರ್ಗ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿನಿಧಿಸುವ ಮೊಳಕಾಲ್ಮೂರು ತಾಲೂಕಿನಲ್ಲಿ ಲಾಕ್‌ಡೌನ್ ಮಾಡಲು ತಹಶೀಲ್ದಾರ್ ಮುಂದಾಗಿದ್ದಾರೆ. ಆಂಧ್ರದ ಗಡಿ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನಲ್ಲಿ ಕೊರೊನಾ ನಿಯಂತ್ರಿಸಲು ಲಾಕ್​ಡೌನ್ ಮಾಡಲಾಗುತ್ತಿದ್ದು, ವ್ಯಾಪಾರ ವಹಿವಾಟಿಗೆ ಸಮಯ ನಿಗದಿಪಡಿಸಲಾಗಿದೆ. ಈ ವೇಳೆ ಮಾತ್ರ ವ್ಯಾಪಾರ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುಯತ್ತೆ. ಬೆಳಗ್ಗೆ 5ರಿಂದ ಮಧ್ಯಾಹ್ನ 1 ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸಬಹುದು. ಇದಾದ ಮೇಲೆ […]

ಮಧ್ಯಾಹ್ನ 1 ರಿಂದ ಬೆಳಗ್ಗೆ 5 ರವರೆಗೆ ಲಾಕ್‌ಡೌನ್, ತಹಶೀಲ್ದಾರ್ ಆದೇಶ ಎಲ್ಲಿ?
ಆಯೇಷಾ ಬಾನು
|

Updated on: Jul 01, 2020 | 7:58 AM

Share

ಚಿತ್ರದುರ್ಗ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿನಿಧಿಸುವ ಮೊಳಕಾಲ್ಮೂರು ತಾಲೂಕಿನಲ್ಲಿ ಲಾಕ್‌ಡೌನ್ ಮಾಡಲು ತಹಶೀಲ್ದಾರ್ ಮುಂದಾಗಿದ್ದಾರೆ.

ಆಂಧ್ರದ ಗಡಿ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನಲ್ಲಿ ಕೊರೊನಾ ನಿಯಂತ್ರಿಸಲು ಲಾಕ್​ಡೌನ್ ಮಾಡಲಾಗುತ್ತಿದ್ದು, ವ್ಯಾಪಾರ ವಹಿವಾಟಿಗೆ ಸಮಯ ನಿಗದಿಪಡಿಸಲಾಗಿದೆ. ಈ ವೇಳೆ ಮಾತ್ರ ವ್ಯಾಪಾರ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುಯತ್ತೆ.

ಬೆಳಗ್ಗೆ 5ರಿಂದ ಮಧ್ಯಾಹ್ನ 1 ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸಬಹುದು. ಇದಾದ ಮೇಲೆ ಅಂದ್ರೆ ಮಧ್ಯಾಹ್ನ 1 ಗಂಟೆಯಿಂದ ಬೆಳಗ್ಗೆ 5 ರವರೆಗೆ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದು ಮೊಳಕಾಲ್ಮೂರು ತಹಶೀಲ್ದಾರ್ ಬಸವರಾಜ್‌ ಆದೇಶಿಸಿದ್ದಾರೆ. ಮುಂದಿನ ಆದೇಶದವರೆಗೆ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.