AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸೀಸನ್​ಗೆ ಬಿಗ್​ ಬಾಸ್​ ನಿರೂಪಕ ಚೇಂಜ್​; ಹೊಸ ನಟನ ಹುಡುಕಾಟದಲ್ಲಿ ವಾಹಿನಿ

ಬಿಗ್​ ಬಾಸ್​ ಮುಂದಿನ ಸೀಸನ್​ಗೆ ನಿರೂಪಕನನ್ನು ಬದಲಾಯಿಸುವ ಬಗ್ಗೆ ಚಿಂತನೆ ನಡೆದಿದೆ. ಶೀಘ್ರವೇ ಈ ಬಗ್ಗೆ ವಾಹಿನಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ಮುಂದಿನ ಸೀಸನ್​ಗೆ ಬಿಗ್​ ಬಾಸ್​ ನಿರೂಪಕ ಚೇಂಜ್​; ಹೊಸ ನಟನ ಹುಡುಕಾಟದಲ್ಲಿ ವಾಹಿನಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Mar 23, 2021 | 12:32 PM

Share

ತಮಿಳು ಬಿಗ್​ ಬಾಸ್​ ಯಶಸ್ವಿಯಾಗಿ ನಾಲ್ಕು ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಈ ನಾಲ್ಕೂ ಸೀಸನ್​ಗಳನ್ನು ನಡೆಸಿಕೊಟ್ಟಿದ್ದು ಖ್ಯಾತ ನಟ ಕಮಲ್​ ಹಾಸನ್​. ಆದರೆ, ಅವರು ಈಗ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಹೊಸ ಪಕ್ಷ ಕಟ್ಟಿರುವ ಅವರು 2021ರ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ, ಐದನೇ ಸೀಸನ್​ಗೆ ಹೊಸ ನಿರೂಪಕನ ಹುಡುಕಾಟದಲ್ಲಿ ವಾಹಿನಿ ತೊಡಗಿದೆ ಎನ್ನಲಾಗುತ್ತಿದೆ. ತಮಿಳು ಬಿಗ್​ ಬಾಸ್​ನ ನಾಲ್ಕನೇ ಸೀಸನ್​ ಜನವರಿಯಲ್ಲಿ ಪೂರ್ಣಗೊಂಡಿತ್ತು. ಐದನೇ ಸೀಸನ್ ಇದೇವರ್ಷ ನಡೆಯಲಿದೆ. ಕಮಲ್​ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರೆ ಅವರು ಮತ್ತೆ ಇತ್ತ ಮುಖ ಮಾಡುವುದಿಲ್ಲ. ಹೀಗಾಗಿ, ಹೊಸ ನಿರೂಪಕನನ್ನು ಹುಡುಕುವುದು ಅನಿವಾರ್ಯವಾಗಿದೆ.

ರಾಜಕೀಯ ಕೆಲಸಗಳ ಮಧ್ಯೆಯೂ ಕಮಲ್​ ಹಾಸನ್​ ನಾಲ್ಕನೇ ಸೀಸನ್​ ಹೋಸ್ಟ್​ ಮಾಡಲು ಒಪ್ಪಿಕೊಂಡಿದ್ದರು. ಅಂತೆಯೇ ಯಶಸ್ವಿಯಾಗಿ ಅದನ್ನು ನಿರ್ವಹಿಸಿದ್ದರು ಕೂಡ. ಈಗ ಅವರು ಪಕ್ಷದ ಕೆಲಸದಲ್ಲಿ ಬ್ಯುಸಿಯಿದ್ದು, ಮತ್ತೆ ಬಿಗ್​ ಬಾಸ್​ನತ್ತ ಮುಖ ಮಾಡುವುದಿಲ್ಲ ಎನ್ನಲಾಗಿದೆ.

ಸದ್ಯ ಕಾಲಿವುಡ್​ನಲ್ಲಿ ಕೇಳಿ ಬರುತ್ತಿರುವ ಮತ್ತೊಂದು ವಿಚಾರ ಎಂದರೆ, ನಟ ಸಿಂಬು ಅವರನ್ನು ಬಿಗ್​ ಬಾಸ್​ ಹೋಸ್ಟ್​ ಆಗಿ ಮಾಡಲು ತಯಾರಿ ನಡೆದಿದೆಯಂತೆ. ಆದರೆ, ಈ ಬಗ್ಗೆ ಎಲ್ಲಿಯೂ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ…..

ಸುದೀಪ್​ ಬದಲಾವಣೆ ಡೌಟ್​.. ಕನ್ನಡದಲ್ಲಿ ಸುದೀಪ್​ ಅತ್ಯುತ್ತಮವಾಗಿ ಬಿಗ್​ ಬಾಸ್​ ನಡೆಸಿಕೊಡುತ್ತಿದ್ದಾರೆ. ಅವರು ಹಾಕುವ ಡ್ರೆಸ್​, ಅವರ ನಿರೂಪಣೆ ಮಾಡುವ ಶೈಲಿಯನ್ನು ಕಣ್ತುಂಬಿಕೊಳ್ಳಲು ಅನೇಕರು ಬಿಗ್​ ಬಾಸ್​ ನೋಡುತ್ತಾರೆ. ಹೀಗಾಗಿ, ಸದ್ಯದ ಮಟ್ಟಿಗಂತೂ ಕನ್ನಡದಲ್ಲಿ ನಿರೂಪಕನ ಬದಲಾವಣೆ ಮಾಡುವುದು ಅನುಮಾನ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿದೆ….

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು

Published On - 6:12 pm, Mon, 22 March 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ