AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸೀಸನ್​ಗೆ ಬಿಗ್​ ಬಾಸ್​ ನಿರೂಪಕ ಚೇಂಜ್​; ಹೊಸ ನಟನ ಹುಡುಕಾಟದಲ್ಲಿ ವಾಹಿನಿ

ಬಿಗ್​ ಬಾಸ್​ ಮುಂದಿನ ಸೀಸನ್​ಗೆ ನಿರೂಪಕನನ್ನು ಬದಲಾಯಿಸುವ ಬಗ್ಗೆ ಚಿಂತನೆ ನಡೆದಿದೆ. ಶೀಘ್ರವೇ ಈ ಬಗ್ಗೆ ವಾಹಿನಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ಮುಂದಿನ ಸೀಸನ್​ಗೆ ಬಿಗ್​ ಬಾಸ್​ ನಿರೂಪಕ ಚೇಂಜ್​; ಹೊಸ ನಟನ ಹುಡುಕಾಟದಲ್ಲಿ ವಾಹಿನಿ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Praveen Sahu

Updated on:Mar 23, 2021 | 12:32 PM

ತಮಿಳು ಬಿಗ್​ ಬಾಸ್​ ಯಶಸ್ವಿಯಾಗಿ ನಾಲ್ಕು ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಈ ನಾಲ್ಕೂ ಸೀಸನ್​ಗಳನ್ನು ನಡೆಸಿಕೊಟ್ಟಿದ್ದು ಖ್ಯಾತ ನಟ ಕಮಲ್​ ಹಾಸನ್​. ಆದರೆ, ಅವರು ಈಗ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಹೊಸ ಪಕ್ಷ ಕಟ್ಟಿರುವ ಅವರು 2021ರ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ, ಐದನೇ ಸೀಸನ್​ಗೆ ಹೊಸ ನಿರೂಪಕನ ಹುಡುಕಾಟದಲ್ಲಿ ವಾಹಿನಿ ತೊಡಗಿದೆ ಎನ್ನಲಾಗುತ್ತಿದೆ. ತಮಿಳು ಬಿಗ್​ ಬಾಸ್​ನ ನಾಲ್ಕನೇ ಸೀಸನ್​ ಜನವರಿಯಲ್ಲಿ ಪೂರ್ಣಗೊಂಡಿತ್ತು. ಐದನೇ ಸೀಸನ್ ಇದೇವರ್ಷ ನಡೆಯಲಿದೆ. ಕಮಲ್​ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರೆ ಅವರು ಮತ್ತೆ ಇತ್ತ ಮುಖ ಮಾಡುವುದಿಲ್ಲ. ಹೀಗಾಗಿ, ಹೊಸ ನಿರೂಪಕನನ್ನು ಹುಡುಕುವುದು ಅನಿವಾರ್ಯವಾಗಿದೆ.

ರಾಜಕೀಯ ಕೆಲಸಗಳ ಮಧ್ಯೆಯೂ ಕಮಲ್​ ಹಾಸನ್​ ನಾಲ್ಕನೇ ಸೀಸನ್​ ಹೋಸ್ಟ್​ ಮಾಡಲು ಒಪ್ಪಿಕೊಂಡಿದ್ದರು. ಅಂತೆಯೇ ಯಶಸ್ವಿಯಾಗಿ ಅದನ್ನು ನಿರ್ವಹಿಸಿದ್ದರು ಕೂಡ. ಈಗ ಅವರು ಪಕ್ಷದ ಕೆಲಸದಲ್ಲಿ ಬ್ಯುಸಿಯಿದ್ದು, ಮತ್ತೆ ಬಿಗ್​ ಬಾಸ್​ನತ್ತ ಮುಖ ಮಾಡುವುದಿಲ್ಲ ಎನ್ನಲಾಗಿದೆ.

ಸದ್ಯ ಕಾಲಿವುಡ್​ನಲ್ಲಿ ಕೇಳಿ ಬರುತ್ತಿರುವ ಮತ್ತೊಂದು ವಿಚಾರ ಎಂದರೆ, ನಟ ಸಿಂಬು ಅವರನ್ನು ಬಿಗ್​ ಬಾಸ್​ ಹೋಸ್ಟ್​ ಆಗಿ ಮಾಡಲು ತಯಾರಿ ನಡೆದಿದೆಯಂತೆ. ಆದರೆ, ಈ ಬಗ್ಗೆ ಎಲ್ಲಿಯೂ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ…..

ಸುದೀಪ್​ ಬದಲಾವಣೆ ಡೌಟ್​.. ಕನ್ನಡದಲ್ಲಿ ಸುದೀಪ್​ ಅತ್ಯುತ್ತಮವಾಗಿ ಬಿಗ್​ ಬಾಸ್​ ನಡೆಸಿಕೊಡುತ್ತಿದ್ದಾರೆ. ಅವರು ಹಾಕುವ ಡ್ರೆಸ್​, ಅವರ ನಿರೂಪಣೆ ಮಾಡುವ ಶೈಲಿಯನ್ನು ಕಣ್ತುಂಬಿಕೊಳ್ಳಲು ಅನೇಕರು ಬಿಗ್​ ಬಾಸ್​ ನೋಡುತ್ತಾರೆ. ಹೀಗಾಗಿ, ಸದ್ಯದ ಮಟ್ಟಿಗಂತೂ ಕನ್ನಡದಲ್ಲಿ ನಿರೂಪಕನ ಬದಲಾವಣೆ ಮಾಡುವುದು ಅನುಮಾನ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿದೆ….

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು

Published On - 6:12 pm, Mon, 22 March 21

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ