ಮುಂದಿನ ಸೀಸನ್​ಗೆ ಬಿಗ್​ ಬಾಸ್​ ನಿರೂಪಕ ಚೇಂಜ್​; ಹೊಸ ನಟನ ಹುಡುಕಾಟದಲ್ಲಿ ವಾಹಿನಿ

ಬಿಗ್​ ಬಾಸ್​ ಮುಂದಿನ ಸೀಸನ್​ಗೆ ನಿರೂಪಕನನ್ನು ಬದಲಾಯಿಸುವ ಬಗ್ಗೆ ಚಿಂತನೆ ನಡೆದಿದೆ. ಶೀಘ್ರವೇ ಈ ಬಗ್ಗೆ ವಾಹಿನಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ಮುಂದಿನ ಸೀಸನ್​ಗೆ ಬಿಗ್​ ಬಾಸ್​ ನಿರೂಪಕ ಚೇಂಜ್​; ಹೊಸ ನಟನ ಹುಡುಕಾಟದಲ್ಲಿ ವಾಹಿನಿ
ಸಾಂದರ್ಭಿಕ ಚಿತ್ರ
Follow us
| Updated By: Praveen Sahu

Updated on:Mar 23, 2021 | 12:32 PM

ತಮಿಳು ಬಿಗ್​ ಬಾಸ್​ ಯಶಸ್ವಿಯಾಗಿ ನಾಲ್ಕು ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಈ ನಾಲ್ಕೂ ಸೀಸನ್​ಗಳನ್ನು ನಡೆಸಿಕೊಟ್ಟಿದ್ದು ಖ್ಯಾತ ನಟ ಕಮಲ್​ ಹಾಸನ್​. ಆದರೆ, ಅವರು ಈಗ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಹೊಸ ಪಕ್ಷ ಕಟ್ಟಿರುವ ಅವರು 2021ರ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ, ಐದನೇ ಸೀಸನ್​ಗೆ ಹೊಸ ನಿರೂಪಕನ ಹುಡುಕಾಟದಲ್ಲಿ ವಾಹಿನಿ ತೊಡಗಿದೆ ಎನ್ನಲಾಗುತ್ತಿದೆ. ತಮಿಳು ಬಿಗ್​ ಬಾಸ್​ನ ನಾಲ್ಕನೇ ಸೀಸನ್​ ಜನವರಿಯಲ್ಲಿ ಪೂರ್ಣಗೊಂಡಿತ್ತು. ಐದನೇ ಸೀಸನ್ ಇದೇವರ್ಷ ನಡೆಯಲಿದೆ. ಕಮಲ್​ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರೆ ಅವರು ಮತ್ತೆ ಇತ್ತ ಮುಖ ಮಾಡುವುದಿಲ್ಲ. ಹೀಗಾಗಿ, ಹೊಸ ನಿರೂಪಕನನ್ನು ಹುಡುಕುವುದು ಅನಿವಾರ್ಯವಾಗಿದೆ.

ರಾಜಕೀಯ ಕೆಲಸಗಳ ಮಧ್ಯೆಯೂ ಕಮಲ್​ ಹಾಸನ್​ ನಾಲ್ಕನೇ ಸೀಸನ್​ ಹೋಸ್ಟ್​ ಮಾಡಲು ಒಪ್ಪಿಕೊಂಡಿದ್ದರು. ಅಂತೆಯೇ ಯಶಸ್ವಿಯಾಗಿ ಅದನ್ನು ನಿರ್ವಹಿಸಿದ್ದರು ಕೂಡ. ಈಗ ಅವರು ಪಕ್ಷದ ಕೆಲಸದಲ್ಲಿ ಬ್ಯುಸಿಯಿದ್ದು, ಮತ್ತೆ ಬಿಗ್​ ಬಾಸ್​ನತ್ತ ಮುಖ ಮಾಡುವುದಿಲ್ಲ ಎನ್ನಲಾಗಿದೆ.

ಸದ್ಯ ಕಾಲಿವುಡ್​ನಲ್ಲಿ ಕೇಳಿ ಬರುತ್ತಿರುವ ಮತ್ತೊಂದು ವಿಚಾರ ಎಂದರೆ, ನಟ ಸಿಂಬು ಅವರನ್ನು ಬಿಗ್​ ಬಾಸ್​ ಹೋಸ್ಟ್​ ಆಗಿ ಮಾಡಲು ತಯಾರಿ ನಡೆದಿದೆಯಂತೆ. ಆದರೆ, ಈ ಬಗ್ಗೆ ಎಲ್ಲಿಯೂ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ…..

ಸುದೀಪ್​ ಬದಲಾವಣೆ ಡೌಟ್​.. ಕನ್ನಡದಲ್ಲಿ ಸುದೀಪ್​ ಅತ್ಯುತ್ತಮವಾಗಿ ಬಿಗ್​ ಬಾಸ್​ ನಡೆಸಿಕೊಡುತ್ತಿದ್ದಾರೆ. ಅವರು ಹಾಕುವ ಡ್ರೆಸ್​, ಅವರ ನಿರೂಪಣೆ ಮಾಡುವ ಶೈಲಿಯನ್ನು ಕಣ್ತುಂಬಿಕೊಳ್ಳಲು ಅನೇಕರು ಬಿಗ್​ ಬಾಸ್​ ನೋಡುತ್ತಾರೆ. ಹೀಗಾಗಿ, ಸದ್ಯದ ಮಟ್ಟಿಗಂತೂ ಕನ್ನಡದಲ್ಲಿ ನಿರೂಪಕನ ಬದಲಾವಣೆ ಮಾಡುವುದು ಅನುಮಾನ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿದೆ….

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು

Published On - 6:12 pm, Mon, 22 March 21

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್