AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಹೃದಯಾಘಾತದಿಂದ ನಿಧನ! ಸೆಲೆಬ್ರಿಟಿಗಳ ಸಂತಾಪ

SP Jananathan Death: ನಿರ್ದೇಶಿಸಿದ ಮೊದಲ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದ ಎಸ್​.ಪಿ. ಜನನಾಥನ್​ ಅವರು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದರು. ಭಾನುವಾರ ಅವರು ಹೃದಯಾಘಾತದಿಂದ ನಿಧನರಾದರು.

ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಹೃದಯಾಘಾತದಿಂದ ನಿಧನ! ಸೆಲೆಬ್ರಿಟಿಗಳ ಸಂತಾಪ
ಎಸ್​.ಪಿ. ಜನನಾಥನ್​
ಮದನ್​ ಕುಮಾರ್​
| Edited By: |

Updated on: Mar 14, 2021 | 3:21 PM

Share

ವಿಶೇಷ ಸಿನಿಮಾಗಳ ಮೂಲಕ ತಮಿಳು ಚಿತ್ರರಂಗಕ್ಕೆ ಕೊಡುಗೆ ನೀಡಿದ್ದ ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಅವರು ಭಾನುವಾರ (ಮಾ.14) ನಿಧನರಾದರು. ಅವರ ಅಗಲಿಕೆಗೆ ಕಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜನನಾಥನ್ ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅನೇಕರು ಪ್ರಾರ್ಥಿಸುತ್ತಿದ್ದಾರೆ.

ಕಳೆದ ಗುರುವಾರವೇ (ಮಾ.11) ಎಸ್​.ಪಿ. ಜನನಾಥನ್​ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಆಸ್ಪತ್ರೆಯಲ್ಲೇ ಅವರಿಗೆ ಹೃದಯಾಘಾತ ಆಯಿತು ಎಂದು ವರದಿ ಆಗಿದೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಎಸ್​.ಪಿ. ಜನನಾಥನ್ ನಿರ್ದೇಶಿಸಿದ್ದ ಮೊದಲ ಸಿನಿಮಾ ‘ಇಯರ್​ಕೈ’ (2003) ಬಾಕ್ಸ್​ ಆಫೀಸ್​ನಲ್ಲಿ ಹೇಳಿಕೊಳ್ಳುವಂತಹ ಕಲೆಕ್ಷನ್​ ಮಾಡಿರಲಿಲ್ಲ. ಆದರೆ ಅತ್ಯುತ್ತಮ ಸಿನಿಮಾ ರಾಷ್ಟ್ರ ಪ್ರಶಸ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿ ಆಗಿತ್ತು.

‘ಇಯರ್​ಕೈ’ ಬಳಿಕ ಕಾಲಿವುಡ್​ನಲ್ಲಿ ಜನನಾಥನ್​ ಅವರು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದರು. ಮಾಡಿದ್ದು ಬೆರಳೆಣಿಕೆಯ ಸಿನಿಮಾಗಳಾದರೂ ಅಪಾರ ಮನ್ನಣೆ ಗಳಿಸಿದ್ದರು. ನಿಧನರಾಗುವುದಕ್ಕೂ ಮುನ್ನ ಅವರು ‘ಲಾಭಂ’ ಸಿನಿಮಾ ನಿರ್ದೇಶಿಸುತ್ತಿದ್ದರು. ಆ ಚಿತ್ರಕ್ಕೆ ಕಮಲ್​ ಹಾಸನ್​ ಪುತ್ರಿ ಶ್ರುತಿ ಹಾಸನ್​ ನಾಯಕಿ. ಜನನಾಥನ್​ ನಿಧನಕ್ಕೆ ಟ್ವಿಟರ್​ ಮೂಲಕ ಶ್ರುತಿ ಅವರು ಸಂತಾಪ ಸೂಚಿಸಿದ್ದಾರೆ.

‘ಭಾರವಾದ ಹೃದಯದಿಂದ ನಿಮಗೆ ನಾವು ವಿದಾಯ ಹೇಳುತ್ತಿದ್ದೇವೆ. ನಿಮ್ಮ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ನಿಮ್ಮನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ನಿಮ್ಮ ಕುಟುಂಬದವರಿಗೆ ನನ್ನ ಸಂತಾಪಗಳು’ ಎಂದು ಶ್ರುತಿ ಹಾಸನ್​ ಟ್ವೀಟ್​ ಮಾಡಿದ್ದಾರೆ.

ಸಂಗೀತ ನಿರ್ದೇಶಕ ಡಿ. ಇಮ್ಮಾನ್​, ನಟ ಮೋಹನ್​ ರಾಜ ಮುಂತಾದವರು ಜನನಾಥನ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ವಿಜಯ್​ ಸೇತುಪತಿ, ಜಗಪತಿ ಬಾಬು, ಶ್ರುತಿ ಹಾಸನ್ ನಟನೆಯ ‘ಲಾಭಂ’ ಚಿತ್ರಕ್ಕೆ ಜನನಾಥನ್​ ನಿರ್ದೇಶನ ಮಾಡುತ್ತಿದ್ದರು. ಆ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿದ್ದವು. ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ರೂಪದರ್ಶಿಯ ನಿಗೂಢ ಸಾವು: ಮಾಡಲಿಂಗ್ ಆಸೆಯೇ ಆ ವಿದ್ಯಾರ್ಥಿನಿಯ ಬದುಕಿಗೆ ಮುಳುವಾಯಿತಾ?

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್