Sign In

By signing in or creating an account, you agree with Associated Broadcasting Company's Terms & Conditions and Privacy Policy.

Indrakumar Suicide: ತಮಿಳು ಕಿರುತೆರೆ ನಟ ಇಂದ್ರಕುಮಾರ್​ ಆತ್ಮಹತ್ಯೆ; ಗೆಳೆಯನ ಮನೆಯಲ್ಲಿ ಶವ ಪತ್ತೆ

ಇಂದ್ರಕುಮಾರ್​ ತಮಿಳು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇವರಿಗೆ ಮದುವೆ ಆಗಿದ್ದು, ಒಂದು ಮಗು ಕೂಡ ಇದೆ. ಬಣ್ಣದ ಲೋಕದಲ್ಲಿ ಮತ್ತಷ್ಟು ಬೆಳೆಯಬೇಕು ಎನ್ನುವುದು ಇಂದ್ರಕುಮಾರ್​ ಉದ್ದೇಶವಾಗಿತ್ತು. Indrakumar Suicide

Indrakumar Suicide: ತಮಿಳು ಕಿರುತೆರೆ ನಟ ಇಂದ್ರಕುಮಾರ್​ ಆತ್ಮಹತ್ಯೆ; ಗೆಳೆಯನ ಮನೆಯಲ್ಲಿ ಶವ ಪತ್ತೆ
ಇಂದ್ರಕುಮಾರ್
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Feb 20, 2021 | 2:16 PM

ಇತ್ತೀಚೆಗಷ್ಟೇ ಮುಂಬೈ ಮೂಲದ ನಟ ಸಂದೀಪ್​ ನಾಹರ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಸಾವಿನ ಸುದ್ದಿ ಇಡೀ ಚಿತ್ರರಂಗ ಶಾಕ್​ಗೆ ಒಳಗಾಗಿತ್ತು. ಈ ಕಹಿ ನೆನಪು ಮಾಸುವ ಮೊದಲೇ ಮತ್ತೋರ್ವ ನಟ ಆತ್ಮಹತ್ಯೆ ಶರಣಾಗಿದ್ದಾರೆ. ತಮಿಳು ಕಿರುತೆರೆ ನಟ ಇಂದ್ರಕುಮಾರ್​ ಪೆರಂಬಲೂರಿನಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೆಳೆಯನ ಮನೆಯಲ್ಲಿ ಇವರು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಬುಧವಾರ ಇಂದ್ರಕುಮಾರ್ ಗೆಳೆಯರ ಜೊತೆ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ತೆರಳಿದ್ದರು. ಅಂದು ಅವರು ಖುಷಿ ಖುಷಿ ಆಗಿಯೇ ಇದ್ದರು. ಸಿನಿಮಾ ನೋಡಿ ಬಂದ ನಂತರ ಗೆಳೆಯನ ಮನೆಗೆ ತೆರಳಿದ್ದ ಅವರು ಒಂಟಿಯಾಗಿ ಉಳಿದುಕೊಂಡಿದ್ದರು. ಈತನಿಗಾಗಿ ಗೆಳೆಯರು ಹಾಗೂ ಕುಟುಂಬದವರು ಹುಡುಕಿದರೂ ಇಂದ್ರಕುಮಾರ್​ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ನಂತರ ಗೆಳೆಯನ ಮನೆಯಲ್ಲಿ ಅವರು ಉಳಿದುಕೊಂಡಿದ್ದಾರೆ ಎನ್ನುವ ವಿಚಾರ ತಿಳಿದು ಅಲ್ಲಿಗೆ ಹುಡುಕಲು ಪೊಲೀಸರು ತೆರಳಿದ್ದರು. ಈ ವೇಳೆ ಇಂದ್ರಕುಮಾರ್​ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದ್ದಾರೆ.

ಸದ್ಯ, ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಾವಿಗೀಡಾದ ಜಾಗದಲ್ಲಾಗಲೀ, ಸಾಮಾಜಿಕ ಜಾಲತಾಣದಲ್ಲಾಗಲೀ ಯಾವುದೇ ಆತ್ಮಹತ್ಯೆ ನೋಟ್ ಸಿಕ್ಕಿಲ್ಲ. ಇಂದ್ರಕುಮಾರ್​ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗೆಳೆಯರನ್ನು ಕರೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇಂದ್ರಕುಮಾರ್​ ತಮಿಳು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇವರಿಗೆ ಮದುವೆ ಆಗಿದ್ದು, ಒಂದು ಮಗು ಕೂಡ ಇದೆ. ಬಣ್ಣದ ಲೋಕದಲ್ಲಿ ಮತ್ತಷ್ಟು ಬೆಳೆಯಬೇಕು ಎನ್ನುವುದು ಇಂದ್ರಕುಮಾರ್​ ಉದ್ದೇಶವಾಗಿತ್ತು. ಆದರೆ, ಅವರಿಗೆ ಅವಕಾಶ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇನ್ನು, ಪತ್ನಿ ಜತೆಗೂ ಕೆಲ ಜಗಳಗಳು ಏರ್ಪಟ್ಟಿದ್ದವು ಎಂದು ತಿಳಿದು ಬಂದಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ದೇಶದಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಈ ವೇಳೆ ಚಿತ್ರರಂಗ ಸಂಪೂರ್ಣವಾಗಿ ಬಂದ್​ ಆಗಿತ್ತು. ಇದರಿಂದ ಸಿನಿಮಾ ರಂಗದ ಸಾಕಷ್ಟು ಮಂದಿ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದರು. ಅನ್​ಲಾಕ್​ ಘೋಷಣೆ ಆದ ನಂತರ ಚಿತ್ರಮಂದಿರದ ಸಾಕಷ್ಟು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದನ್ನೂ ಓದಿ: Sandeep Nahar ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸಂದೀಪ್ ನಾಹರ್ ತನ್ನ ಡೆತ್​ನೋಟ್​ನಲ್ಲಿ ಬರೆದಿಟ್ಟಿದ್ರು ನೋವಿನ ಕಥೆ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ