AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indrakumar Suicide: ತಮಿಳು ಕಿರುತೆರೆ ನಟ ಇಂದ್ರಕುಮಾರ್​ ಆತ್ಮಹತ್ಯೆ; ಗೆಳೆಯನ ಮನೆಯಲ್ಲಿ ಶವ ಪತ್ತೆ

ಇಂದ್ರಕುಮಾರ್​ ತಮಿಳು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇವರಿಗೆ ಮದುವೆ ಆಗಿದ್ದು, ಒಂದು ಮಗು ಕೂಡ ಇದೆ. ಬಣ್ಣದ ಲೋಕದಲ್ಲಿ ಮತ್ತಷ್ಟು ಬೆಳೆಯಬೇಕು ಎನ್ನುವುದು ಇಂದ್ರಕುಮಾರ್​ ಉದ್ದೇಶವಾಗಿತ್ತು. Indrakumar Suicide

Indrakumar Suicide: ತಮಿಳು ಕಿರುತೆರೆ ನಟ ಇಂದ್ರಕುಮಾರ್​ ಆತ್ಮಹತ್ಯೆ; ಗೆಳೆಯನ ಮನೆಯಲ್ಲಿ ಶವ ಪತ್ತೆ
ಇಂದ್ರಕುಮಾರ್
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Feb 20, 2021 | 2:16 PM

Share

ಇತ್ತೀಚೆಗಷ್ಟೇ ಮುಂಬೈ ಮೂಲದ ನಟ ಸಂದೀಪ್​ ನಾಹರ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಸಾವಿನ ಸುದ್ದಿ ಇಡೀ ಚಿತ್ರರಂಗ ಶಾಕ್​ಗೆ ಒಳಗಾಗಿತ್ತು. ಈ ಕಹಿ ನೆನಪು ಮಾಸುವ ಮೊದಲೇ ಮತ್ತೋರ್ವ ನಟ ಆತ್ಮಹತ್ಯೆ ಶರಣಾಗಿದ್ದಾರೆ. ತಮಿಳು ಕಿರುತೆರೆ ನಟ ಇಂದ್ರಕುಮಾರ್​ ಪೆರಂಬಲೂರಿನಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೆಳೆಯನ ಮನೆಯಲ್ಲಿ ಇವರು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಬುಧವಾರ ಇಂದ್ರಕುಮಾರ್ ಗೆಳೆಯರ ಜೊತೆ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ತೆರಳಿದ್ದರು. ಅಂದು ಅವರು ಖುಷಿ ಖುಷಿ ಆಗಿಯೇ ಇದ್ದರು. ಸಿನಿಮಾ ನೋಡಿ ಬಂದ ನಂತರ ಗೆಳೆಯನ ಮನೆಗೆ ತೆರಳಿದ್ದ ಅವರು ಒಂಟಿಯಾಗಿ ಉಳಿದುಕೊಂಡಿದ್ದರು. ಈತನಿಗಾಗಿ ಗೆಳೆಯರು ಹಾಗೂ ಕುಟುಂಬದವರು ಹುಡುಕಿದರೂ ಇಂದ್ರಕುಮಾರ್​ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ನಂತರ ಗೆಳೆಯನ ಮನೆಯಲ್ಲಿ ಅವರು ಉಳಿದುಕೊಂಡಿದ್ದಾರೆ ಎನ್ನುವ ವಿಚಾರ ತಿಳಿದು ಅಲ್ಲಿಗೆ ಹುಡುಕಲು ಪೊಲೀಸರು ತೆರಳಿದ್ದರು. ಈ ವೇಳೆ ಇಂದ್ರಕುಮಾರ್​ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದ್ದಾರೆ.

ಸದ್ಯ, ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಾವಿಗೀಡಾದ ಜಾಗದಲ್ಲಾಗಲೀ, ಸಾಮಾಜಿಕ ಜಾಲತಾಣದಲ್ಲಾಗಲೀ ಯಾವುದೇ ಆತ್ಮಹತ್ಯೆ ನೋಟ್ ಸಿಕ್ಕಿಲ್ಲ. ಇಂದ್ರಕುಮಾರ್​ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗೆಳೆಯರನ್ನು ಕರೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇಂದ್ರಕುಮಾರ್​ ತಮಿಳು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇವರಿಗೆ ಮದುವೆ ಆಗಿದ್ದು, ಒಂದು ಮಗು ಕೂಡ ಇದೆ. ಬಣ್ಣದ ಲೋಕದಲ್ಲಿ ಮತ್ತಷ್ಟು ಬೆಳೆಯಬೇಕು ಎನ್ನುವುದು ಇಂದ್ರಕುಮಾರ್​ ಉದ್ದೇಶವಾಗಿತ್ತು. ಆದರೆ, ಅವರಿಗೆ ಅವಕಾಶ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇನ್ನು, ಪತ್ನಿ ಜತೆಗೂ ಕೆಲ ಜಗಳಗಳು ಏರ್ಪಟ್ಟಿದ್ದವು ಎಂದು ತಿಳಿದು ಬಂದಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ದೇಶದಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಈ ವೇಳೆ ಚಿತ್ರರಂಗ ಸಂಪೂರ್ಣವಾಗಿ ಬಂದ್​ ಆಗಿತ್ತು. ಇದರಿಂದ ಸಿನಿಮಾ ರಂಗದ ಸಾಕಷ್ಟು ಮಂದಿ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದರು. ಅನ್​ಲಾಕ್​ ಘೋಷಣೆ ಆದ ನಂತರ ಚಿತ್ರಮಂದಿರದ ಸಾಕಷ್ಟು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದನ್ನೂ ಓದಿ: Sandeep Nahar ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸಂದೀಪ್ ನಾಹರ್ ತನ್ನ ಡೆತ್​ನೋಟ್​ನಲ್ಲಿ ಬರೆದಿಟ್ಟಿದ್ರು ನೋವಿನ ಕಥೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More