AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indrakumar Suicide: ತಮಿಳು ಕಿರುತೆರೆ ನಟ ಇಂದ್ರಕುಮಾರ್​ ಆತ್ಮಹತ್ಯೆ; ಗೆಳೆಯನ ಮನೆಯಲ್ಲಿ ಶವ ಪತ್ತೆ

ಇಂದ್ರಕುಮಾರ್​ ತಮಿಳು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇವರಿಗೆ ಮದುವೆ ಆಗಿದ್ದು, ಒಂದು ಮಗು ಕೂಡ ಇದೆ. ಬಣ್ಣದ ಲೋಕದಲ್ಲಿ ಮತ್ತಷ್ಟು ಬೆಳೆಯಬೇಕು ಎನ್ನುವುದು ಇಂದ್ರಕುಮಾರ್​ ಉದ್ದೇಶವಾಗಿತ್ತು. Indrakumar Suicide

Indrakumar Suicide: ತಮಿಳು ಕಿರುತೆರೆ ನಟ ಇಂದ್ರಕುಮಾರ್​ ಆತ್ಮಹತ್ಯೆ; ಗೆಳೆಯನ ಮನೆಯಲ್ಲಿ ಶವ ಪತ್ತೆ
ಇಂದ್ರಕುಮಾರ್
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Feb 20, 2021 | 2:16 PM

Share

ಇತ್ತೀಚೆಗಷ್ಟೇ ಮುಂಬೈ ಮೂಲದ ನಟ ಸಂದೀಪ್​ ನಾಹರ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಸಾವಿನ ಸುದ್ದಿ ಇಡೀ ಚಿತ್ರರಂಗ ಶಾಕ್​ಗೆ ಒಳಗಾಗಿತ್ತು. ಈ ಕಹಿ ನೆನಪು ಮಾಸುವ ಮೊದಲೇ ಮತ್ತೋರ್ವ ನಟ ಆತ್ಮಹತ್ಯೆ ಶರಣಾಗಿದ್ದಾರೆ. ತಮಿಳು ಕಿರುತೆರೆ ನಟ ಇಂದ್ರಕುಮಾರ್​ ಪೆರಂಬಲೂರಿನಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೆಳೆಯನ ಮನೆಯಲ್ಲಿ ಇವರು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಬುಧವಾರ ಇಂದ್ರಕುಮಾರ್ ಗೆಳೆಯರ ಜೊತೆ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ತೆರಳಿದ್ದರು. ಅಂದು ಅವರು ಖುಷಿ ಖುಷಿ ಆಗಿಯೇ ಇದ್ದರು. ಸಿನಿಮಾ ನೋಡಿ ಬಂದ ನಂತರ ಗೆಳೆಯನ ಮನೆಗೆ ತೆರಳಿದ್ದ ಅವರು ಒಂಟಿಯಾಗಿ ಉಳಿದುಕೊಂಡಿದ್ದರು. ಈತನಿಗಾಗಿ ಗೆಳೆಯರು ಹಾಗೂ ಕುಟುಂಬದವರು ಹುಡುಕಿದರೂ ಇಂದ್ರಕುಮಾರ್​ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ನಂತರ ಗೆಳೆಯನ ಮನೆಯಲ್ಲಿ ಅವರು ಉಳಿದುಕೊಂಡಿದ್ದಾರೆ ಎನ್ನುವ ವಿಚಾರ ತಿಳಿದು ಅಲ್ಲಿಗೆ ಹುಡುಕಲು ಪೊಲೀಸರು ತೆರಳಿದ್ದರು. ಈ ವೇಳೆ ಇಂದ್ರಕುಮಾರ್​ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದ್ದಾರೆ.

ಸದ್ಯ, ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಾವಿಗೀಡಾದ ಜಾಗದಲ್ಲಾಗಲೀ, ಸಾಮಾಜಿಕ ಜಾಲತಾಣದಲ್ಲಾಗಲೀ ಯಾವುದೇ ಆತ್ಮಹತ್ಯೆ ನೋಟ್ ಸಿಕ್ಕಿಲ್ಲ. ಇಂದ್ರಕುಮಾರ್​ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗೆಳೆಯರನ್ನು ಕರೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇಂದ್ರಕುಮಾರ್​ ತಮಿಳು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇವರಿಗೆ ಮದುವೆ ಆಗಿದ್ದು, ಒಂದು ಮಗು ಕೂಡ ಇದೆ. ಬಣ್ಣದ ಲೋಕದಲ್ಲಿ ಮತ್ತಷ್ಟು ಬೆಳೆಯಬೇಕು ಎನ್ನುವುದು ಇಂದ್ರಕುಮಾರ್​ ಉದ್ದೇಶವಾಗಿತ್ತು. ಆದರೆ, ಅವರಿಗೆ ಅವಕಾಶ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇನ್ನು, ಪತ್ನಿ ಜತೆಗೂ ಕೆಲ ಜಗಳಗಳು ಏರ್ಪಟ್ಟಿದ್ದವು ಎಂದು ತಿಳಿದು ಬಂದಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ದೇಶದಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಈ ವೇಳೆ ಚಿತ್ರರಂಗ ಸಂಪೂರ್ಣವಾಗಿ ಬಂದ್​ ಆಗಿತ್ತು. ಇದರಿಂದ ಸಿನಿಮಾ ರಂಗದ ಸಾಕಷ್ಟು ಮಂದಿ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದರು. ಅನ್​ಲಾಕ್​ ಘೋಷಣೆ ಆದ ನಂತರ ಚಿತ್ರಮಂದಿರದ ಸಾಕಷ್ಟು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದನ್ನೂ ಓದಿ: Sandeep Nahar ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸಂದೀಪ್ ನಾಹರ್ ತನ್ನ ಡೆತ್​ನೋಟ್​ನಲ್ಲಿ ಬರೆದಿಟ್ಟಿದ್ರು ನೋವಿನ ಕಥೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ