AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಧಾರಾವಾಹಿ ಪಾಂಡಿಯನ್ ಸ್ಟೋರ್ಸ್‌ ಖ್ಯಾತಿಯ ನಟಿ ಚಿತ್ರಾ ಆತ್ಮಹತ್ಯೆ

ಜನಪ್ರಿಯ ತಮಿಳು ಧಾರವಾಹಿ ಪಾಂಡಿಯನ್ ಸ್ಟೋರ್ಸ್‌ನಲ್ಲಿ ಮುಲ್ಲೈ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ಚಿತ್ರಾ ನಜರೆತ್‌ಪೆಟ್ಟೈನ ಪಂಚತಾರಾ ಹೋಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ.

ತಮಿಳು ಧಾರಾವಾಹಿ ಪಾಂಡಿಯನ್ ಸ್ಟೋರ್ಸ್‌ ಖ್ಯಾತಿಯ ನಟಿ ಚಿತ್ರಾ ಆತ್ಮಹತ್ಯೆ
ನಟಿ ಚಿತ್ರಾ
ಆಯೇಷಾ ಬಾನು
|

Updated on:Dec 09, 2020 | 2:18 PM

Share

ಹೈದರಾಬಾದ್: ತಮಿಳು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿದ್ದ ವಿಜೆ ಚಿತ್ರಾ(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನೈ ಬಳಿಯ ಖಾಸಗಿ ಹೋಟೆಲ್‌ನ ತಾವು ತಗ್ಗಿದ್ದ ಕೋಣೆಯೊಂದರಲ್ಲಿ ನಟಿ ಚಿತ್ರಾ ನೇಣಿಗೆ ಶರಣಾಗಿದ್ದಾರೆ.

ನಟಿ ಚಿತ್ರಾಳಿಗೆ ಚೆನ್ನೈ ಮೂಲದ ಹೇಮಂತ್ ಜೊತೆ‌‌ ಕುಟುಂಬಸ್ಥರು ವಿವಾಹ‌ ನಿಶ್ಚಯ ಮಾಡಿದ್ದರು. ಆತ್ಮಹತ್ಯೆ ಕಾರಣವೇನೆಂಬುವುದು ಇನ್ನು ತಿಳಿದು ಬಂದಿಲ್ಲ. ಪೂನಮಲ್ಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಶೂಟಿಂಗ್ ಮುಗಿಸಿ ಹೋಟೆಲ್ ಕೋಣೆಗೆ ಬಂದ ನಟಿ ಆತ್ಮಹತ್ಯೆ: ಜನಪ್ರಿಯ ಧಾರವಾಹಿ ಪಾಂಡಿಯನ್ ಸ್ಟೋರ್ಸ್‌ನಲ್ಲಿ ಮುಲ್ಲೈ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ಚಿತ್ರಾ ನಜರೆತ್‌ಪೆಟ್ಟೈನ ಪಂಚತಾರಾ ಹೋಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಚಿತ್ರಾ ಇವಿಪಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿಸಿ ಇಂದು ಮುಂಜಾನೆ 2:30 ಕ್ಕೆ ತನ್ನ ಹೋಟೆಲ್ ಕೋಣೆಗೆ ಮರಳಿದ್ದರು ಎಂದು ಮೂಲಗಳು ತಿಳಿಸಿವೆ. ನಟಿ ಕೆಲ ದಿನಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹೇಮಂತ್ ಜೊತೆ ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ಚಿತ್ರಾ ತಮಿಳಿನ ಹಲವು ಟಿವಿ ಚಾನೆಲ್‌ಗಳಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ಪಾಂಡಿಯನ್ ಸ್ಟೋರ್ಸ್ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದು ಮುಲ್ಲೈ ಪಾತ್ರದ ಮೂಲಕ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ್ದರು. ಅಲ್ಲದೆ, ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಸುಂದರವಾದ ಫೋಟೋಗಳು ಮತ್ತು ಪೋಸ್ಟ್‌ಗಳೊಂದಿಗೆ ಅಭಿಮಾನಿಗಳನ್ನು ರಂಜಿಸುತ್ತಿದ್ದರು.

ಧಾರವಾಹಿಗಳಲ್ಲಿ ನಟಿಸುತ್ತಿದ್ದ ಸಮೀರ ಮತ್ತು ಅನುಪಮಾ ಆತ್ಮಹತ್ಯೆ

Published On - 9:25 am, Wed, 9 December 20

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ