AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಧಾರಾವಾಹಿ ಪಾಂಡಿಯನ್ ಸ್ಟೋರ್ಸ್‌ ಖ್ಯಾತಿಯ ನಟಿ ಚಿತ್ರಾ ಆತ್ಮಹತ್ಯೆ

ಜನಪ್ರಿಯ ತಮಿಳು ಧಾರವಾಹಿ ಪಾಂಡಿಯನ್ ಸ್ಟೋರ್ಸ್‌ನಲ್ಲಿ ಮುಲ್ಲೈ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ಚಿತ್ರಾ ನಜರೆತ್‌ಪೆಟ್ಟೈನ ಪಂಚತಾರಾ ಹೋಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ.

ತಮಿಳು ಧಾರಾವಾಹಿ ಪಾಂಡಿಯನ್ ಸ್ಟೋರ್ಸ್‌ ಖ್ಯಾತಿಯ ನಟಿ ಚಿತ್ರಾ ಆತ್ಮಹತ್ಯೆ
ನಟಿ ಚಿತ್ರಾ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 09, 2020 | 2:18 PM

Share

ಹೈದರಾಬಾದ್: ತಮಿಳು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿದ್ದ ವಿಜೆ ಚಿತ್ರಾ(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನೈ ಬಳಿಯ ಖಾಸಗಿ ಹೋಟೆಲ್‌ನ ತಾವು ತಗ್ಗಿದ್ದ ಕೋಣೆಯೊಂದರಲ್ಲಿ ನಟಿ ಚಿತ್ರಾ ನೇಣಿಗೆ ಶರಣಾಗಿದ್ದಾರೆ.

ನಟಿ ಚಿತ್ರಾಳಿಗೆ ಚೆನ್ನೈ ಮೂಲದ ಹೇಮಂತ್ ಜೊತೆ‌‌ ಕುಟುಂಬಸ್ಥರು ವಿವಾಹ‌ ನಿಶ್ಚಯ ಮಾಡಿದ್ದರು. ಆತ್ಮಹತ್ಯೆ ಕಾರಣವೇನೆಂಬುವುದು ಇನ್ನು ತಿಳಿದು ಬಂದಿಲ್ಲ. ಪೂನಮಲ್ಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಶೂಟಿಂಗ್ ಮುಗಿಸಿ ಹೋಟೆಲ್ ಕೋಣೆಗೆ ಬಂದ ನಟಿ ಆತ್ಮಹತ್ಯೆ: ಜನಪ್ರಿಯ ಧಾರವಾಹಿ ಪಾಂಡಿಯನ್ ಸ್ಟೋರ್ಸ್‌ನಲ್ಲಿ ಮುಲ್ಲೈ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ಚಿತ್ರಾ ನಜರೆತ್‌ಪೆಟ್ಟೈನ ಪಂಚತಾರಾ ಹೋಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಚಿತ್ರಾ ಇವಿಪಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿಸಿ ಇಂದು ಮುಂಜಾನೆ 2:30 ಕ್ಕೆ ತನ್ನ ಹೋಟೆಲ್ ಕೋಣೆಗೆ ಮರಳಿದ್ದರು ಎಂದು ಮೂಲಗಳು ತಿಳಿಸಿವೆ. ನಟಿ ಕೆಲ ದಿನಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹೇಮಂತ್ ಜೊತೆ ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ಚಿತ್ರಾ ತಮಿಳಿನ ಹಲವು ಟಿವಿ ಚಾನೆಲ್‌ಗಳಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ಪಾಂಡಿಯನ್ ಸ್ಟೋರ್ಸ್ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದು ಮುಲ್ಲೈ ಪಾತ್ರದ ಮೂಲಕ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ್ದರು. ಅಲ್ಲದೆ, ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಸುಂದರವಾದ ಫೋಟೋಗಳು ಮತ್ತು ಪೋಸ್ಟ್‌ಗಳೊಂದಿಗೆ ಅಭಿಮಾನಿಗಳನ್ನು ರಂಜಿಸುತ್ತಿದ್ದರು.

ಧಾರವಾಹಿಗಳಲ್ಲಿ ನಟಿಸುತ್ತಿದ್ದ ಸಮೀರ ಮತ್ತು ಅನುಪಮಾ ಆತ್ಮಹತ್ಯೆ

Published On - 9:25 am, Wed, 9 December 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!