AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಬಳಿ ಬೇಷರತ್ ಕ್ಷಮೆ ಯಾಚಿಸಿದ ತಾಂಡವ್​ ಸಿನಿಮಾ ತಂಡ

ಒಟಿಟಿಯಲ್ಲಿ ಬಿಡುಗಡೆ ಆಗಿರುವ ತಾಂಡವ್ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಚಿತ್ರಿಸಲಾಗಿದೆ ಎನ್ನುವ ಆರೋಪ ಸಿನಿಮಾ ವಿರುದ್ಧ ಕೇಳಿ ಬಂದಿತ್ತು.

ಜನರ ಬಳಿ ಬೇಷರತ್ ಕ್ಷಮೆ ಯಾಚಿಸಿದ ತಾಂಡವ್​ ಸಿನಿಮಾ ತಂಡ
ತಾಂಡವ್ ವೆಬ್ ಸಿರೀಸ್​ನ ಒಂದು ದೃಶ್ಯ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 18, 2021 | 8:32 PM

ಇತ್ತೀಚೆಗಷ್ಟೇ ಅಮೇಜಾನ್​ ಪ್ರೈಮ್​ ವಿಡಿಯೊದಲ್ಲಿ ಬಿಡುಗಡೆಯಾಗಿರುವ, ನಟ ಸೈಫ್​ ಅಲಿಖಾನ್​ ಅಭಿನಯದ ‘ತಾಂಡವ್’​ ವೆಬ್​ ಸೀರಿಸ್​ ವಿರುದ್ಧ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿ​ ಸಿನಿಮಾ ತಂಡ ಬೇಷರತ್ ಕ್ಷಮೆ ಯಾಚಿಸಿದೆ.

ಒಟಿಟಿಯಲ್ಲಿ ಬಿಡುಗಡೆ ಆಗಿರುವ ತಾಂಡವ್ ವೆಬ್ ಸಿರೀಸ್​ನಲ್ಲಿ ಸೆಕ್ಸ್, ಹಿಂಸೆ, ಮಾದಕ ವಸ್ತು, ದ್ವೇಷ ಮತ್ತು ಕೀಳುತನವನ್ನು ಬಿಂಬಿಸಲಾಗಿದೆ. ಹಿಂದೂ ಧರ್ಮ ಮತ್ತು ಹಿಂದೂ ದೇವತೆಗಳ ಕುರಿತು ಬೇಕೆಂದೇ ಕೀಳಾಗಿ ಚಿತ್ರಿಸಲಾಗಿದೆ ಎನ್ನುವ ಆರೋಪ ಸಿನಿಮಾ ವಿರುದ್ಧ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಪ್ರಕರಣ ಕೂಡ ದಾಖಲಾಗಿತ್ತು.

ಈ ಬಗ್ಗೆ ಕ್ಷಮೆಯಾಚಿಸಿ ಹೇಳಿಕೆ ಬಿಡುಗಡೆ ಮಾಡಿರುವ ತಾಂಡವ್ ಚಿತ್ರತಂಡ, ತಾಂಡವ್​ ಸಿನಿಮಾ ಕೇವಲ ಕಾಲ್ಪನಿಕ ಕತೆಯನ್ನು ಆಧರಿಸಿದೆ. ಇದು ಯಾವುದೇ ವ್ಯಕ್ತಿ ಹಾಗೂ ಸಮಾಜಕ್ಕೆ ಸಂಬಂಧಿಸಿದ್ದಲ್ಲ. ಒಂದೊಮ್ಮೆ ಹೀಗೆ ಸಂಬಂಧಿಸಿದ್ದರೆ ಅದು ಕೇವಲ ಕಾಲ್ಪನಿಕ. ವ್ಯಕ್ತಿಗಳ ಭಾವನೆಗೆ ದಕ್ಕೆ ತರುವುದು ನಮ್ಮ ಉದ್ದೇಶವಲ್ಲ ಎಂದು ತಾಂಡವ್ ತಂಡ ಹೇಳಿದೆ.

‘ತಾಂಡವ್’ ಚಿತ್ರದ ಬಗ್ಗೆ ಜನರು ವ್ಯಕ್ತಪಡಿಸಿದ ಕಳವಳಗಳದ ಬಗ್ಗೆ ನಮಗೆ ಅರಿವಿದೆ. ಯಾರೊಬ್ಬರ ಭಾವನೆಗಳನ್ನು ಉದ್ದೇಶಪೂರ್ವಕವಾಗಿ ನೋಯಿಸುವುದು ನಮ್ಮ ಉದ್ದೇಶವಲ್ಲ. ಹಾಗೆ ನೋಯಿಸಿದ್ದರೆ ನಾವು ಬೇಷರತ್ತಾಗಿ ಕ್ಷಮೆಯಾಚಿಸುತ್ತೇವೆ ಎಂದು ಚಿತ್ರತಂಡ ಹೇಳಿದೆ.

ಸೈಫ್​ ಅಲಿಖಾನ್​ ಅಭಿನಯದ ತಾಂಡವ್​ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು; ಕ್ಷಮೆಗೆ ಒತ್ತಾಯ

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್