AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರ ಕೋಟೆ ಎಲ್ಲಿದೆ ಎಂಬುದು ನನಗೆ ಗೊತ್ತಿಲ್ಲ: ಸಿದ್ದರಾಮಯ್ಯಗೆ ತನ್ವೀರ್ ಟಾಂಗ್

ಮೈಸೂರು ಮೇಯರ್ ಸ್ಥಾನ ಜೆಡಿಎಸ್​ಗೆ ಬಿಟ್ಟು ಕೊಟ್ಟಿರುವುದಕ್ಕೆ ಶಾಸಕ ತನ್ವೀರ್ ಸೇಠ್ ಪಾತ್ರವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ತನ್ವೀರ್ ಸೇಠ್​ಗೆ ನೋಟಿಸ್ ನೀಡಿ ಕಠಿಣ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಆಗ್ರಹಿಸಿದ್ದರು.

ಯಾರ ಕೋಟೆ ಎಲ್ಲಿದೆ ಎಂಬುದು ನನಗೆ ಗೊತ್ತಿಲ್ಲ: ಸಿದ್ದರಾಮಯ್ಯಗೆ ತನ್ವೀರ್ ಟಾಂಗ್
ತನ್ವೀರ್ ಸೇಠ್
sandhya thejappa
| Edited By: |

Updated on: Mar 01, 2021 | 2:44 PM

Share

ಬೆಂಗಳೂರು: ಮೈಸೂರು ಪಾಲಿಕೆ ಮೇಯರ್ ಚುನಾವಣೆಗೆ ಸಂಬಂಧಿಸಿ ಮಾತನಾಡಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಯಾರ ಕೋಟೆ ಎಲ್ಲಿದೆ ಎಂಬುದು ನನಗೆ ಗೊತ್ತಿಲ್ಲ. ಆದರೆ ಪಕ್ಷ ನನಗೆ ನೀಡಿದ ಕೆಲಸವನ್ನು ಮಾಡಿದ್ದೇನೆ. ನನ್ನ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ. ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆಂದು ಅನಿಸುತ್ತಿದೆ. ಈ ಘಟನೆಯನ್ನು ಹೇಗೆ ಗ್ರಹಿಸುತ್ತಾರೋ ನನಗೆ ಗೊತ್ತಿಲ್ಲ. ಒಂದಂತೂ ಸತ್ಯ, ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ತನ್ವೀರ್ ಸೇಠ್ ಮೇಲಿನ ಸಿಟ್ಟು ಸಿದ್ದರಾಮಯ್ಯಗೆ ಸದ್ಯಕ್ಕಂತೂ ಕಡಿಮೆಯಾಗುವ ಹಾಗೆ ಕಾಣುತ್ತಿಲ್ಲ. ಮೇಯರ್​ ಸ್ಥಾನ ಪಕ್ಷದ ಕೈ ಜಾರಿದ್ದಕ್ಕೆ ರೊಚ್ಚಿಗೆದ್ದಿರೋ ಸಿದ್ದು ಮೇಲಿಂದ ಮೇಲೆ ಸೇಠ್ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ನನ್ನ ವಿರುದ್ಧ ನನ್ನ ಕ್ಷೇತ್ರದಲ್ಲೇ ಸೇಠ್ ರಾಜಕೀಯ ಮೇಲಾಟವಾಡುತ್ತಿದ್ದಾರೆ. ಅವರು ಹೀಗೆ ಮಾಡಿದ್ರೂ ನಾನು ಸುಮ್ಮನೆ ಇರಬೇಕಾ ಅಂತಾ ತನ್ವೀರ್ ಸೇಠ್ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಮೈಸೂರು ಮೇಯರ್ ಸ್ಥಾನ ಜೆಡಿಎಸ್​ಗೆ ಬಿಟ್ಟು ಕೊಟ್ಟಿರುವುದಕ್ಕೆ ಶಾಸಕ ತನ್ವೀರ್ ಸೇಠ್ ಪಾತ್ರವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ತನ್ವೀರ್ ಸೇಠ್​ಗೆ ನೋಟಿಸ್ ನೀಡಿ ಕಠಿಣ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಆಗ್ರಹಿಸಿದ್ದರು.

ಈ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಶಾಸಕ ತನ್ವೀರ್ ಸೇಠ್ ಭೇಟಿ ಮಾಡುತ್ತಾರೆ. ಈ ಕುರಿತು ಮಹತ್ತರವಾದ ಮಾತುಕತೆ ನಡೆಯುತ್ತದೆ. ಲಿಖಿತ ರೂಪದಲ್ಲಿ ಮೈಸೂರ ಮೇಯರ್ ಚುನಾವಣೆ ಘಟನೆಯ ಬಗ್ಗೆ ವರದಿ ಸಿದ್ಧಪಡಿಸಿರುವ ಸೇಠ್ ಡಿ.ಕೆ.ಶಿವಕುಮಾರ್​ಗೆ ನೀಡುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ

ತನ್ವೀರ್ ಸೇಠ್ ವಿರುದ್ಧ ಸಿಡಿದ ಸಿದ್ದರಾಮಯ್ಯ.. ಡಿ.ಕೆ.ಶಿವಕುಮಾರ್ ಜೊತೆ ತನ್ವೀರ್ ಸೇಠ್ ಮಹತ್ವದ ಮೀಟಿಂಗ್

CM ಯಡಿಯೂರಪ್ಪ AK 47 ನಿಂದ ಬೆದರಿಸಿದರೂ ನಾಳೆ ಕರ್ನಾಟಕ ಬಂದ್ ಮಾಡೇ ಮಾಡುತ್ತೇವೆ -ತನ್ವೀರ್

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ