AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಟಿಲೇಟರ್​ ಕಿತ್ಕೊಂಡ ಕೊರೊನಾ: ಮದ್ವೆಯಾಗಿ ಕೇವಲ 1 ವರ್ಷವಾಗಿದ್ದ TB ಪೇಶಂಟ್​ ಸಾವು!

ಬೆಂಗಳೂರು: ಈ ಮಹಾಮಾರಿ ತುಂಬಾನೇ ಕ್ರೂರಿ. ಸದ್ದಿಲ್ಲದೆ ಸೋಂಕಿತರನ್ನು ಬಲಿಪೆಡಯುತ್ತಿದ್ದ ಕೊರೊನಾ ಇದೀಗ ಇತರೆ ರೋಗಿಗಳತ್ತ ಮುಖಮಾಡಿದ ಹಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಮದುವೆಯಾಗಿ ಕೇವಲ ಒಂದು ವರ್ಷವಾಗಿದ್ದ TB ಪೇಶಂಟ್​ ಒಬ್ಬರು ಕೊರೊನಾದಿಂದ ಉಂಟಾದ ವೆಂಟಿಲೇಟರ್​ ಕೊರತೆಯಿಂದ ಸಾವನ್ನಪ್ಪಿರೋ ಹೃದಯವಿದ್ರಾವಕ ಘಟನೆ ನಗರದಲ್ಲಿ ವರದಿಯಾಗಿದೆ. ವೆಂಟಿಲೇಟರ್​ ಕಸಿದುಕೊಂಡ ಕೊರೊನಾ ಮೂಲತಃ ಕೋಲಾರ ಮೂಲದ 21 ವರ್ಷದ ಮಹಿಳೆ ಕ್ಷಯ ರೋಗದಿಂದ ಬಳಲುತ್ತಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಯಲಹಂಕಕ್ಕೆ ಬಂದು ನೆಲೆಸಿದ್ದರು. 21 ದಿನಗಳ ಹಿಂದೆ ಈಕೆಯನ್ನು ಚಿಕಿತ್ಸೆಗಾಗಿ […]

ವೆಂಟಿಲೇಟರ್​ ಕಿತ್ಕೊಂಡ ಕೊರೊನಾ: ಮದ್ವೆಯಾಗಿ ಕೇವಲ 1 ವರ್ಷವಾಗಿದ್ದ TB ಪೇಶಂಟ್​ ಸಾವು!
KUSHAL V
| Edited By: ಸಾಧು ಶ್ರೀನಾಥ್​|

Updated on:Jun 24, 2020 | 7:28 PM

Share

ಬೆಂಗಳೂರು: ಈ ಮಹಾಮಾರಿ ತುಂಬಾನೇ ಕ್ರೂರಿ. ಸದ್ದಿಲ್ಲದೆ ಸೋಂಕಿತರನ್ನು ಬಲಿಪೆಡಯುತ್ತಿದ್ದ ಕೊರೊನಾ ಇದೀಗ ಇತರೆ ರೋಗಿಗಳತ್ತ ಮುಖಮಾಡಿದ ಹಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಮದುವೆಯಾಗಿ ಕೇವಲ ಒಂದು ವರ್ಷವಾಗಿದ್ದ TB ಪೇಶಂಟ್​ ಒಬ್ಬರು ಕೊರೊನಾದಿಂದ ಉಂಟಾದ ವೆಂಟಿಲೇಟರ್​ ಕೊರತೆಯಿಂದ ಸಾವನ್ನಪ್ಪಿರೋ ಹೃದಯವಿದ್ರಾವಕ ಘಟನೆ ನಗರದಲ್ಲಿ ವರದಿಯಾಗಿದೆ.

ವೆಂಟಿಲೇಟರ್​ ಕಸಿದುಕೊಂಡ ಕೊರೊನಾ ಮೂಲತಃ ಕೋಲಾರ ಮೂಲದ 21 ವರ್ಷದ ಮಹಿಳೆ ಕ್ಷಯ ರೋಗದಿಂದ ಬಳಲುತ್ತಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಯಲಹಂಕಕ್ಕೆ ಬಂದು ನೆಲೆಸಿದ್ದರು. 21 ದಿನಗಳ ಹಿಂದೆ ಈಕೆಯನ್ನು ಚಿಕಿತ್ಸೆಗಾಗಿ ಮಲ್ಲೇಶ್ವರದಲ್ಲಿರುವ ಕೆ.ಸಿ. ಜನರಲ್​ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ವೆಂಟಿಲೇಟರ್​ ಮೂಲಕ ಕೃತಕ ಉಸಿರಾಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ವೆಂಟಿಲೇಟರ್​ಗಳ ಬೇಡಿಕೆಯು ಉಂಟಾಯಿತು.

ಹಾಗಾಗಿ, ಮಹಿಳೆಗೆ ನೀಡಲಾಗಿದ್ದ ವೆಂಟಿಲೇಟರ್​ನ ಕೊರೊನಾ ಸೋಂಕಿತರಿಗೆ ನೀಡಲು ನಿರ್ಧರಿಸಲಾಯಿತು. ಆದರೆ, ದುರದೃಷ್ಟವಶಾತ್​ ಇಂದು ಬೆಳಿಗ್ಗೆ ಮಹಿಳೆಯಿಂದ ವೆಂಟಿಲೇಟರ್​ ತೆಗೆದ ಮರುಕ್ಷಣವೇ ಆಕೆ ಅಸುನೀಗಿದ್ದಾರೆ. ಒಟ್ನಲ್ಲಿ ಇನ್ನೂ ಬದುಕಿ ಬಾಳಬೇಕಿದ್ದ ಹೆಣ್ಣುಮಗಳು ಕೊರೊನಾದಿಂದ ದೂರವಿದ್ದರೂ ಅದರ ಕರಿಛಾಯೆ ಮಾತ್ರ ಆಕೆಯನ್ನು ಆವರಿಸಿಯೇಬಿಟ್ಟಿತು.

Published On - 7:26 pm, Wed, 24 June 20

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ