AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಟಿಲೇಟರ್​ ಕಿತ್ಕೊಂಡ ಕೊರೊನಾ: ಮದ್ವೆಯಾಗಿ ಕೇವಲ 1 ವರ್ಷವಾಗಿದ್ದ TB ಪೇಶಂಟ್​ ಸಾವು!

ಬೆಂಗಳೂರು: ಈ ಮಹಾಮಾರಿ ತುಂಬಾನೇ ಕ್ರೂರಿ. ಸದ್ದಿಲ್ಲದೆ ಸೋಂಕಿತರನ್ನು ಬಲಿಪೆಡಯುತ್ತಿದ್ದ ಕೊರೊನಾ ಇದೀಗ ಇತರೆ ರೋಗಿಗಳತ್ತ ಮುಖಮಾಡಿದ ಹಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಮದುವೆಯಾಗಿ ಕೇವಲ ಒಂದು ವರ್ಷವಾಗಿದ್ದ TB ಪೇಶಂಟ್​ ಒಬ್ಬರು ಕೊರೊನಾದಿಂದ ಉಂಟಾದ ವೆಂಟಿಲೇಟರ್​ ಕೊರತೆಯಿಂದ ಸಾವನ್ನಪ್ಪಿರೋ ಹೃದಯವಿದ್ರಾವಕ ಘಟನೆ ನಗರದಲ್ಲಿ ವರದಿಯಾಗಿದೆ. ವೆಂಟಿಲೇಟರ್​ ಕಸಿದುಕೊಂಡ ಕೊರೊನಾ ಮೂಲತಃ ಕೋಲಾರ ಮೂಲದ 21 ವರ್ಷದ ಮಹಿಳೆ ಕ್ಷಯ ರೋಗದಿಂದ ಬಳಲುತ್ತಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಯಲಹಂಕಕ್ಕೆ ಬಂದು ನೆಲೆಸಿದ್ದರು. 21 ದಿನಗಳ ಹಿಂದೆ ಈಕೆಯನ್ನು ಚಿಕಿತ್ಸೆಗಾಗಿ […]

ವೆಂಟಿಲೇಟರ್​ ಕಿತ್ಕೊಂಡ ಕೊರೊನಾ: ಮದ್ವೆಯಾಗಿ ಕೇವಲ 1 ವರ್ಷವಾಗಿದ್ದ TB ಪೇಶಂಟ್​ ಸಾವು!
KUSHAL V
| Edited By: |

Updated on:Jun 24, 2020 | 7:28 PM

Share

ಬೆಂಗಳೂರು: ಈ ಮಹಾಮಾರಿ ತುಂಬಾನೇ ಕ್ರೂರಿ. ಸದ್ದಿಲ್ಲದೆ ಸೋಂಕಿತರನ್ನು ಬಲಿಪೆಡಯುತ್ತಿದ್ದ ಕೊರೊನಾ ಇದೀಗ ಇತರೆ ರೋಗಿಗಳತ್ತ ಮುಖಮಾಡಿದ ಹಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಮದುವೆಯಾಗಿ ಕೇವಲ ಒಂದು ವರ್ಷವಾಗಿದ್ದ TB ಪೇಶಂಟ್​ ಒಬ್ಬರು ಕೊರೊನಾದಿಂದ ಉಂಟಾದ ವೆಂಟಿಲೇಟರ್​ ಕೊರತೆಯಿಂದ ಸಾವನ್ನಪ್ಪಿರೋ ಹೃದಯವಿದ್ರಾವಕ ಘಟನೆ ನಗರದಲ್ಲಿ ವರದಿಯಾಗಿದೆ.

ವೆಂಟಿಲೇಟರ್​ ಕಸಿದುಕೊಂಡ ಕೊರೊನಾ ಮೂಲತಃ ಕೋಲಾರ ಮೂಲದ 21 ವರ್ಷದ ಮಹಿಳೆ ಕ್ಷಯ ರೋಗದಿಂದ ಬಳಲುತ್ತಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಯಲಹಂಕಕ್ಕೆ ಬಂದು ನೆಲೆಸಿದ್ದರು. 21 ದಿನಗಳ ಹಿಂದೆ ಈಕೆಯನ್ನು ಚಿಕಿತ್ಸೆಗಾಗಿ ಮಲ್ಲೇಶ್ವರದಲ್ಲಿರುವ ಕೆ.ಸಿ. ಜನರಲ್​ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ವೆಂಟಿಲೇಟರ್​ ಮೂಲಕ ಕೃತಕ ಉಸಿರಾಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ವೆಂಟಿಲೇಟರ್​ಗಳ ಬೇಡಿಕೆಯು ಉಂಟಾಯಿತು.

ಹಾಗಾಗಿ, ಮಹಿಳೆಗೆ ನೀಡಲಾಗಿದ್ದ ವೆಂಟಿಲೇಟರ್​ನ ಕೊರೊನಾ ಸೋಂಕಿತರಿಗೆ ನೀಡಲು ನಿರ್ಧರಿಸಲಾಯಿತು. ಆದರೆ, ದುರದೃಷ್ಟವಶಾತ್​ ಇಂದು ಬೆಳಿಗ್ಗೆ ಮಹಿಳೆಯಿಂದ ವೆಂಟಿಲೇಟರ್​ ತೆಗೆದ ಮರುಕ್ಷಣವೇ ಆಕೆ ಅಸುನೀಗಿದ್ದಾರೆ. ಒಟ್ನಲ್ಲಿ ಇನ್ನೂ ಬದುಕಿ ಬಾಳಬೇಕಿದ್ದ ಹೆಣ್ಣುಮಗಳು ಕೊರೊನಾದಿಂದ ದೂರವಿದ್ದರೂ ಅದರ ಕರಿಛಾಯೆ ಮಾತ್ರ ಆಕೆಯನ್ನು ಆವರಿಸಿಯೇಬಿಟ್ಟಿತು.

Published On - 7:26 pm, Wed, 24 June 20

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್