AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TCS employees salary hike: FY22ಕ್ಕೆ ಉದ್ಯೋಗಿಗಳ ವೇತನ ಹೆಚ್ಚಳ ಘೋಷಿಸಿದ ಮೊದಲ ಕಂಪೆನಿ ಟಿಸಿಎಸ್

FY22ಕ್ಕೆ ಉದ್ಯೋಗಿಗಳಿಗೆ ವೇತನ ಹೆಚ್ಚಳ ಘೋಷಿಸಿದ ಮೊದಲ ಕಂಪೆನಿ ಎಂಬ ಶ್ರೇಯ ಈಗ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್​ಗೆ ದಕ್ಕಿದೆ. ಆರು ತಿಂಗಳು ಎರಡನೇ ಬಾರಿಗೆ ಉದ್ಯೋಗಿಗಳಿಗೆ ವೇತನ ಹೆಚ್ಚಳ ಘೋಷಿಸಿದೆ.

TCS employees salary hike: FY22ಕ್ಕೆ ಉದ್ಯೋಗಿಗಳ ವೇತನ ಹೆಚ್ಚಳ ಘೋಷಿಸಿದ ಮೊದಲ ಕಂಪೆನಿ ಟಿಸಿಎಸ್
ಪ್ರಾತಿನಿಧಿಕ ಚಿತ್ರ
Srinivas Mata
|

Updated on: Mar 19, 2021 | 7:01 PM

Share

ಭಾರತದ ಅತಿ ದೊಡ್ಡ ಸಾಫ್ಟ್​ವೇರ್ ಸೇವಾ ಕಂಪೆನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್​​ನಿಂದ ಶುಕ್ರವಾರ (ಮಾರ್ಚ್ 19, 2021) ಉದ್ಯೋಗಿಗಳಿಗೆ ವೇತನ ಹೆಚ್ಚಳವನ್ನು ಘೋಷಣೆ ಮಾಡಲಾಗಿದೆ. ಏಪ್ರಿಲ್ 1ನೇ ತಾರೀಕಿನಿಂದ ವೇತನ ಹೆಚ್ಚಳ ಜಾರಿಗೆ ಬರಲಿದೆ. ಈ ಬಗ್ಗೆ ಮಿಂಟ್ ವರದಿ ಮಾಡಿದ್ದು, ಈ ಕುರಿತು ಟಿಸಿಎಸ್ ವಕ್ತಾರರನ್ನು ಮಾತನಾಡಿಸಿದೆ. 2021ರ ಏಪ್ರಿಲ್​​ನಿಂದ ಎಲ್ಲ ಕಡೆಯಲ್ಲಿ ಈ ವೇತನದ ಹೆಚ್ಚಳವನ್ನು ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ ಎಂಬುದಾಗಿ ವರದಿಯಾಗಿದೆ.

ಮುಂಬೈ ಮೂಲದ ಈ ಐ.ಟಿ. ಕಂಪೆನಿಯಲ್ಲಿ 4 ಲಕ್ಷಕ್ಕೂ ಅಧಿಕ ಉದ್ಯೋಗಿಗಳು ಕಾರ್ಯ ನಿರ್ವಹಿಸುತ್ತಾರೆ. ಈ ನಿರ್ಧಾರದಿಂದ ಅವರಿಗೆಲ್ಲ ಅನುಕೂಲ ಆಗಲಿದೆ. FY22ಕ್ಕೆ ವೇತನ ಹೆಚ್ಚಳವನ್ನು ಘೋಷಿಸಿದ ಮೊದಲ ಐ.ಟಿ. ಕಂಪೆನಿ ಟಿಸಿಎಸ್. ಆರು ತಿಂಗಳಲ್ಲಿ ಇದು ಎರಡನೇ ಬಾರಿಗೆ ಟಿಸಿಎಸ್ ವೇತನ ಹೆಚ್ಚಳ ಮಾಡುತ್ತಿದೆ. ಕಳೆದ ವರ್ಷ ಅಕ್ಟೋಬರ್​ನಲ್ಲಿ ಸಂಬಳ ಹೆಚ್ಚಳ ಘೋಷಣೆ ಮಾಡಿತ್ತು.

ಮೂಲಗಳು ತಿಳಿಸಿರುವ ಪ್ರಕಾರ, ಕೋವಿಡ್ 19 ಬಿಕ್ಕಟ್ಟಿನ ಮಧ್ಯೆಯೂ FY21ರಲ್ಲಿ ಐಟಿ ವಲಯದ ನಿಯಮಾವಳಿಯಂತೆಯೇ ಸಂಬಳ ಹೆಚ್ಚು ಮಾಡಿತ್ತು. ಇನ್ನು ಮಾಮೂಲಿಯಾದ ಬಡ್ತಿ ಕ್ರಮದಂತೆ ಅದನ್ನು ಸಹ ಮುಂದುವರಿಸಿಕೊಂಡು ಹೋಗಲಿದೆ. FY22ಕ್ಕೆ ಟಿಸಿಎಸ್ ಉದ್ಯೋಗಿಗಳಿಗೆ ಸರಾಸರಿ ಶೇಕಡಾ 12ರಿಂದ 14ರಷ್ಟು ಹೆಚ್ಚಳ ಆರು ತಿಂಗಳ ಅವಧಿಯಲ್ಲಿ ದೊರೆಯಲಿದೆ.

ಡಿಸೆಂಬರ್ 31, 2020ಕ್ಕೆ ಕೊನೆಯಾದ ತ್ರೈಮಾಸಿಕದಲ್ಲಿ ಟಿಸಿಎಸ್ ಶೇಕಡಾ 7ರಷ್ಟು ಹೆಚ್ಚಿಗೆ ನಿವ್ವಳ ಲಾಭ ಪಡೆದು, 8701 ಕೋಟಿ ರೂಪಾಯಿಯನ್ನು ದಾಖಲಿಸಿದೆ. ಕೋವಿಡ್- 19 ಬಿಕ್ಕಟ್ಟಿನ ಸಂದರ್ಭದಲ್ಲಿ ಟಿಸಿಎಸ್ ಕಂಪೆನಿಯ ಕ್ಲೌಡ್ ಸೇವೆಗೆ ಹೆಚ್ಚಿನ ಬೇಡಿಕೆ ಬಂದು, ಅದರಿಂದ ಅನುಕೂಲ ಆಗಿದೆ. ಕಳೆದ ಒಂಬತ್ತು ವರ್ಷದಲ್ಲೇ ಡಿಸೆಂಬರ್ ತ್ರೈಮಾಸಿಕದಲ್ಲಿ ಟಿಸಿಎಸ್ ದಾಖಲಿಸಿದ ಅತ್ಯುತ್ತಮ ಫಲಿತಾಂಶ ಇದು ಎಂದು ಹೇಳಿಕೊಳ್ಳಲಾಗಿದೆ. ಟಿಸಿಎಸ್ ಕಂಪೆನಿ ಷೇರಿನ ಬೆಲೆ ಶುಕ್ರವಾರದ ಕೊನೆಗೆ ಎನ್​ಎಸ್​ಇಯಲ್ಲಿ ರೂ. 3050.20ಕ್ಕೆ ವಹಿವಾಟು ಮುಗಿಸಿದೆ.

ಇದನ್ನೂ ಓದಿ: Accenture Employees Bonus: ಆಕ್ಸೆಂಚರ್​ನ 2 ಲಕ್ಷ ಸಿಬ್ಬಂದಿಗೆ ದೊರೆಯಲಿದೆ ಬೋನಸ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್