AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿನಾಡಿನಲ್ಲೊಬ್ರು ಅಪರೂಪದ ಶಿಕ್ಷಕ.. ಮನೆ ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಬೋಧನೆ!

ಬಳ್ಳಾರಿ: ಈಗ ಎಲ್ಲೆಡೆ ಕೊರೊನಾ ಹೆಮ್ಮಾರಿ ಭೀತಿ. ಹೀಗಾಗಿ ರಾಜ್ಯ ಸರ್ಕಾರ ಇನ್ನೂ ಶಾಲಾ-ಕಾಲೇಜುಗಳನ್ನ ಆರಂಭಿಸಿಲ್ಲ. ಬದಲಿಗೆ ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆದ್ರೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ವಿನೂತನ ರೀತಿಯಲ್ಲಿ ಬೋಧನೆ ಶುರು ಮಾಡಿದ್ದಾರೆ. ಆ ಮೂಲಕ ಕರ್ಚಿಗನೂರು ಗ್ರಾಮಸ್ಥರ ವಿಶೇಷ ಗಮನ ಸೆಳೆದಿದ್ದಾರೆ. ಇಡೀ ರಾಜ್ಯವ್ಯಾಪಿ ಆನ್ ಲೈನ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಈ ಸಂದರ್ಭದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕ […]

ಗಣಿನಾಡಿನಲ್ಲೊಬ್ರು ಅಪರೂಪದ ಶಿಕ್ಷಕ.. ಮನೆ ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಬೋಧನೆ!
ಸಾಧು ಶ್ರೀನಾಥ್​
| Edited By: |

Updated on:Jul 30, 2020 | 4:00 PM

Share

ಬಳ್ಳಾರಿ: ಈಗ ಎಲ್ಲೆಡೆ ಕೊರೊನಾ ಹೆಮ್ಮಾರಿ ಭೀತಿ. ಹೀಗಾಗಿ ರಾಜ್ಯ ಸರ್ಕಾರ ಇನ್ನೂ ಶಾಲಾ-ಕಾಲೇಜುಗಳನ್ನ ಆರಂಭಿಸಿಲ್ಲ. ಬದಲಿಗೆ ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆದ್ರೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ವಿನೂತನ ರೀತಿಯಲ್ಲಿ ಬೋಧನೆ ಶುರು ಮಾಡಿದ್ದಾರೆ. ಆ ಮೂಲಕ ಕರ್ಚಿಗನೂರು ಗ್ರಾಮಸ್ಥರ ವಿಶೇಷ ಗಮನ ಸೆಳೆದಿದ್ದಾರೆ.

ಇಡೀ ರಾಜ್ಯವ್ಯಾಪಿ ಆನ್ ಲೈನ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಈ ಸಂದರ್ಭದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕ ರಾಘವೇಂದ್ರ, ಆ ಗ್ರಾಮದ ಪ್ರತಿ ವಿದ್ಯಾರ್ಥಿಯ ಮನೆಮನೆಗೆ ತೆರಳಿ ಪಾಠ ಮಾಡುವ ಮುಖೇನ ಮತ್ತೊಬ್ಬರಿಗೆ ಮಾದರಿಯಾಗಿದ್ದಾರೆ. ಈಗಾಗಲೇ ಬಹುತೇಕ ಎಲ್ಲ ವಿಭಾಗದ ಮೇಲೂ ಕೊವೀಡ್ -19 ಪರಿಣಾಮ ಬೀರುತ್ತಿದೆ. ಅದರಲ್ಲಿ ಅತೀ ಹೆಚ್ಚು ಸಮಸ್ಯೆ ಅನುಭವಿಸುತ್ತಿರೋದು ಮಾತ್ರ ಶಿಕ್ಷಣ ಕ್ಷೇತ್ರ ಮಾತ್ರ. ಕಳೆದ ಐದು ತಿಂಗಳಿಂದ ಶಾಲಾ -ಕಾಲೇಜುಗಳು ಬಂದ್ ಅಗಿರೋದರಿಂದ ಮಕ್ಕಳ ಶೈಕ್ಷಣಿಕ ಬದುಕು ಕುಂಠಿತಗೊಳ್ಳುವ ಆತಂಕ ಪೋಷಕರನ್ನು ಕಾಡುತ್ತಿದೆ.

ಕರ್ಚಿಗನೂರು ಸರ್ಕಾರಿ ಶಾಲೆಯಲ್ಲಿ ಸುಮಾರು 100 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು‌, ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ರಾಘವೇಂದ್ರ, ಮಹಾಮಾರಿ ಕೊರೊನಾ ಎಫೆಕ್ಟ್ ನಿಂದಾಗಿ ಎಲ್ಲ ಶಾಲೆಗಳು ಬಂದ್ ಅಗಿರೋದರಿಂದ ಮಕ್ಕಳು ಬಿಂದಾಸ್ ಅಗಿ ಓಡಾಡಿಕೊಂಡಿದ್ದಾರೆ. ಇದನ್ನರಿತ ಮುಖ್ಯ ಶಿಕ್ಷಕ ರಾಘವೇಂದ್ರ ನೇತ್ರತ್ವದಲ್ಲಿ ಶಿಕ್ಷಕರು ಹಳ್ಳಿಗೆ ತೆರಳಿ ನಾಲ್ಕೈದು ಮಕ್ಕಳನ್ನು ಒಂದೆಡೆ ಸೇರಿಸಿ ಪಾಠ ಬೋಧನೆ ಮಾಡುತ್ತಿದ್ದಾರೆ.

ಪಾಠ ಹೇಳುವುದಷ್ಟೆ ಅಲ್ಲ. ವಿದ್ಯಾರ್ಥಿಗಳಿಗೆ ಪಾಠ ಮಾಡುವುದಕ್ಕೂ ಮುಂಚೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಾರೆ. ಅಲ್ಲದೆ ಮಾಸ್ಕ್ ಧರಿಸಿಕೊಂಡ್ರೆ ಮಾತ್ರ ಪಾಠ ಹೇಳಿ ಕೋಡೋದಾಗಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡುತ್ತಾರೆ. ಸಾಮಾಜಿಕ ಅಂತರ ಕಾಯ್ದುಕೊಂಡೇ ಪಾಠ ಬೋಧನೆ ಮಾಡುತ್ತಾರೆ. ಶಿಕ್ಷಕರ ಈ ಕ್ರಮಕ್ಕೆ ಸ್ಥಳೀಯ ಗ್ರಾಮಸ್ಥರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ವಿದ್ಯಾರ್ಥಿಗಳಿಗೆ ಪಾಠದ ಜೊತೆ ಜೊತೆಗೆ ಮಹಾಮಾರಿ ಕೊರೊನಾ ಜಾಗ್ರತೆ ಮೂಡಿಸುವುದು ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿಯ ಬಾರದು ಎಂದು ಸ್ವ ಇಚ್ಚೆಯಿಂದ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಭೋಧನೆ ಮಾಡುವುದು. ಮರು ದಿನ ಪುನಾರಾರ್ವತನೆ ಮಕ್ಕಳಿಂದ ಮಾಡಿಸಲಾಗುತ್ತದೆ ಅಂತಾ ಪ್ರಭಾರಿ ಮುಖ್ಯ ಶಿಕ್ಷಕ ರಾಘವೇಂದ್ರ ಹೇಳುತ್ತಾರೆ.

Published On - 7:06 pm, Tue, 28 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ