AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿನಾಡಿನಲ್ಲೊಬ್ರು ಅಪರೂಪದ ಶಿಕ್ಷಕ.. ಮನೆ ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಬೋಧನೆ!

ಬಳ್ಳಾರಿ: ಈಗ ಎಲ್ಲೆಡೆ ಕೊರೊನಾ ಹೆಮ್ಮಾರಿ ಭೀತಿ. ಹೀಗಾಗಿ ರಾಜ್ಯ ಸರ್ಕಾರ ಇನ್ನೂ ಶಾಲಾ-ಕಾಲೇಜುಗಳನ್ನ ಆರಂಭಿಸಿಲ್ಲ. ಬದಲಿಗೆ ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆದ್ರೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ವಿನೂತನ ರೀತಿಯಲ್ಲಿ ಬೋಧನೆ ಶುರು ಮಾಡಿದ್ದಾರೆ. ಆ ಮೂಲಕ ಕರ್ಚಿಗನೂರು ಗ್ರಾಮಸ್ಥರ ವಿಶೇಷ ಗಮನ ಸೆಳೆದಿದ್ದಾರೆ. ಇಡೀ ರಾಜ್ಯವ್ಯಾಪಿ ಆನ್ ಲೈನ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಈ ಸಂದರ್ಭದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕ […]

ಗಣಿನಾಡಿನಲ್ಲೊಬ್ರು ಅಪರೂಪದ ಶಿಕ್ಷಕ.. ಮನೆ ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಬೋಧನೆ!
ಸಾಧು ಶ್ರೀನಾಥ್​
| Updated By: |

Updated on:Jul 30, 2020 | 4:00 PM

Share

ಬಳ್ಳಾರಿ: ಈಗ ಎಲ್ಲೆಡೆ ಕೊರೊನಾ ಹೆಮ್ಮಾರಿ ಭೀತಿ. ಹೀಗಾಗಿ ರಾಜ್ಯ ಸರ್ಕಾರ ಇನ್ನೂ ಶಾಲಾ-ಕಾಲೇಜುಗಳನ್ನ ಆರಂಭಿಸಿಲ್ಲ. ಬದಲಿಗೆ ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆದ್ರೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ವಿನೂತನ ರೀತಿಯಲ್ಲಿ ಬೋಧನೆ ಶುರು ಮಾಡಿದ್ದಾರೆ. ಆ ಮೂಲಕ ಕರ್ಚಿಗನೂರು ಗ್ರಾಮಸ್ಥರ ವಿಶೇಷ ಗಮನ ಸೆಳೆದಿದ್ದಾರೆ.

ಇಡೀ ರಾಜ್ಯವ್ಯಾಪಿ ಆನ್ ಲೈನ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಈ ಸಂದರ್ಭದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕ ರಾಘವೇಂದ್ರ, ಆ ಗ್ರಾಮದ ಪ್ರತಿ ವಿದ್ಯಾರ್ಥಿಯ ಮನೆಮನೆಗೆ ತೆರಳಿ ಪಾಠ ಮಾಡುವ ಮುಖೇನ ಮತ್ತೊಬ್ಬರಿಗೆ ಮಾದರಿಯಾಗಿದ್ದಾರೆ. ಈಗಾಗಲೇ ಬಹುತೇಕ ಎಲ್ಲ ವಿಭಾಗದ ಮೇಲೂ ಕೊವೀಡ್ -19 ಪರಿಣಾಮ ಬೀರುತ್ತಿದೆ. ಅದರಲ್ಲಿ ಅತೀ ಹೆಚ್ಚು ಸಮಸ್ಯೆ ಅನುಭವಿಸುತ್ತಿರೋದು ಮಾತ್ರ ಶಿಕ್ಷಣ ಕ್ಷೇತ್ರ ಮಾತ್ರ. ಕಳೆದ ಐದು ತಿಂಗಳಿಂದ ಶಾಲಾ -ಕಾಲೇಜುಗಳು ಬಂದ್ ಅಗಿರೋದರಿಂದ ಮಕ್ಕಳ ಶೈಕ್ಷಣಿಕ ಬದುಕು ಕುಂಠಿತಗೊಳ್ಳುವ ಆತಂಕ ಪೋಷಕರನ್ನು ಕಾಡುತ್ತಿದೆ.

ಕರ್ಚಿಗನೂರು ಸರ್ಕಾರಿ ಶಾಲೆಯಲ್ಲಿ ಸುಮಾರು 100 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು‌, ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ರಾಘವೇಂದ್ರ, ಮಹಾಮಾರಿ ಕೊರೊನಾ ಎಫೆಕ್ಟ್ ನಿಂದಾಗಿ ಎಲ್ಲ ಶಾಲೆಗಳು ಬಂದ್ ಅಗಿರೋದರಿಂದ ಮಕ್ಕಳು ಬಿಂದಾಸ್ ಅಗಿ ಓಡಾಡಿಕೊಂಡಿದ್ದಾರೆ. ಇದನ್ನರಿತ ಮುಖ್ಯ ಶಿಕ್ಷಕ ರಾಘವೇಂದ್ರ ನೇತ್ರತ್ವದಲ್ಲಿ ಶಿಕ್ಷಕರು ಹಳ್ಳಿಗೆ ತೆರಳಿ ನಾಲ್ಕೈದು ಮಕ್ಕಳನ್ನು ಒಂದೆಡೆ ಸೇರಿಸಿ ಪಾಠ ಬೋಧನೆ ಮಾಡುತ್ತಿದ್ದಾರೆ.

ಪಾಠ ಹೇಳುವುದಷ್ಟೆ ಅಲ್ಲ. ವಿದ್ಯಾರ್ಥಿಗಳಿಗೆ ಪಾಠ ಮಾಡುವುದಕ್ಕೂ ಮುಂಚೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಾರೆ. ಅಲ್ಲದೆ ಮಾಸ್ಕ್ ಧರಿಸಿಕೊಂಡ್ರೆ ಮಾತ್ರ ಪಾಠ ಹೇಳಿ ಕೋಡೋದಾಗಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡುತ್ತಾರೆ. ಸಾಮಾಜಿಕ ಅಂತರ ಕಾಯ್ದುಕೊಂಡೇ ಪಾಠ ಬೋಧನೆ ಮಾಡುತ್ತಾರೆ. ಶಿಕ್ಷಕರ ಈ ಕ್ರಮಕ್ಕೆ ಸ್ಥಳೀಯ ಗ್ರಾಮಸ್ಥರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ವಿದ್ಯಾರ್ಥಿಗಳಿಗೆ ಪಾಠದ ಜೊತೆ ಜೊತೆಗೆ ಮಹಾಮಾರಿ ಕೊರೊನಾ ಜಾಗ್ರತೆ ಮೂಡಿಸುವುದು ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿಯ ಬಾರದು ಎಂದು ಸ್ವ ಇಚ್ಚೆಯಿಂದ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಭೋಧನೆ ಮಾಡುವುದು. ಮರು ದಿನ ಪುನಾರಾರ್ವತನೆ ಮಕ್ಕಳಿಂದ ಮಾಡಿಸಲಾಗುತ್ತದೆ ಅಂತಾ ಪ್ರಭಾರಿ ಮುಖ್ಯ ಶಿಕ್ಷಕ ರಾಘವೇಂದ್ರ ಹೇಳುತ್ತಾರೆ.

Published On - 7:06 pm, Tue, 28 July 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು