AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಫ್ಯಾನ್ಸ್​ಗೆ ಸಿಹಿ ಸುದ್ದಿ: ಐಸೋಲೇಷನ್​ನಲ್ಲಿದ್ದ ಆಟಗಾರರ ಬಗ್ಗೆ ಮಹತ್ತರ ಮಾಹಿತಿ ನೀಡಿದ BCCI

ರೋಹಿತ್​ ಶರ್ಮಾ, ಶುಭ್​ ಮನ್​ ಗಿಲ್, ರಿಷಬ್​ ಪಂತ್​, ನವದೀಪ್​ ಸೈನಿ ಹಾಗೂ ಪೃಥ್ವಿ ಷಾ ಹೋಟೆಲ್​ ಒಂದಕ್ಕೆ ತೆರಳಿದ್ದರು. ಇದರ ಫೋಟೋವನ್ನು ಫ್ಯಾನ್​ ಒರ್ವ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಟೀಂ ಇಂಡಿಯಾ ಫ್ಯಾನ್ಸ್​ಗೆ ಸಿಹಿ ಸುದ್ದಿ: ಐಸೋಲೇಷನ್​ನಲ್ಲಿದ್ದ ಆಟಗಾರರ ಬಗ್ಗೆ ಮಹತ್ತರ ಮಾಹಿತಿ ನೀಡಿದ BCCI
ಟೀಂ ಇಂಡಿಯಾ
ರಾಜೇಶ್ ದುಗ್ಗುಮನೆ
|

Updated on: Jan 03, 2021 | 10:12 PM

Share

ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ ಸದ್ಯ ಆಸ್ಟ್ರೇಲಿಯಾದಲ್ಲಿರುವ ಟೀಂ ಇಂಡಿಯಾದ 5 ಆಟಗಾರರನ್ನು ಐಸೋಲೇಷನ್​ನಲ್ಲಿ ಇಡಲಾಗಿತ್ತು. ಜೊತೆಗೆ, ಇವರು ಸಿಡ್ನಿಯಲ್ಲಿ ನಡೆಯುವ ಮೂರನೇ ಟೆಸ್ಟ್​ನಲ್ಲಿ ಆಡುವುದಿಲ್ಲ ಎನ್ನುವ ವದಂತಿ ಕೂಡ ಹಬ್ಬಿತ್ತು. ಇದೀಗ, ಇದಕ್ಕೆ BCCI ಸ್ಪಷ್ಟನೆ ನೀಡಿದೆ. ಐಸೋಲೇಷನ್​ಗೆ ಒಳಗಾಗಿರುವ ಆಟಗಾರರು ಸೇರಿ ತಂಡ ಎಲ್ಲಾ ಸದಸ್ಯರು ನಾಳೆ ಸಿಡ್ನಿಗೆ ಪ್ರಯಾಣ ಬೆಳೆಸಲಿದ್ದಾರಂತೆ.

ರೋಹಿತ್​ ಶರ್ಮಾ, ಶುಭ್​ ಮನ್​​ ಗಿಲ್, ರಿಷಬ್​ ಪಂತ್​, ನವದೀಪ್​ ಸೈನಿ ಹಾಗೂ ಪೃಥ್ವಿ ಷಾ ಹೋಟೆಲ್​ ಒಂದಕ್ಕೆ ತೆರಳಿದ್ದರು. ಇದರ ಫೋಟೋವನ್ನು ಫ್ಯಾನ್​ ಓರ್ವ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ. ಈ ವಿಚಾರ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಆಸ್ಟ್ರೇಲಿಯಾ ಮಾಧ್ಯಮಗಳು ಕೂಡ ತಮ್ಮಿಚ್ಛೆಯಂತೆ ವರದಿ ಪ್ರಕಟ ಮಾಡಿದ್ದವು.

ಭಾರತ ಆಟಗಾರರು ಯಾವುದೆ ಕೊರೊನಾ ನಿಯಮ ಉಲ್ಲಂಘನೆ ಮಾಡಿಲ್ಲ. ಹೀಗಾಗಿ, ಈ 5 ಆಟಗಾರ ಮೇಲೆ ಯಾವುದೆ ನಿರ್ಬಂಧ ಇರುವುದಿಲ್ಲ. ಅವರು ಕೂಡ ತಂಡದ ಜೊತೆ ಸಿಡ್ನಿಗೆ ತೆರಳುತ್ತಾರೆ. ಅಂದು ಹೊರಗೆ ಮಳೆ ಬರುತ್ತಿದ್ದದರಿಂದ ಆಟಗಾರರು ಹೋಟೆಲ್​ ಒಳಗೆ ಹೋಗಿದ್ದರು ಎಂದು ಹೆಸರು ಹೇಳಲು ಇಚ್ಛಿಸಿದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸದ್ಯ, BCCI ಅಧಿಕಾರಿಗಳು ನೀಡಿರುವ ಮಾಹಿತಿ ಟೀಂ ಇಂಡಿಯಾದ ಆಟಗಾರರಿಗೆ ಖುಷಿ ತಂದುಕೊಟ್ಟಿದೆ.

‘ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ’- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ