AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ಇಲಾಖೆ ಹೇಗೆ ಕೆಲಸ ಮಾಡುತ್ತದೆ? ಮಳೆ ಮುನ್ಸೂಚನೆಗೆ ಈಗ ಬಳಸುತ್ತಿರುವ ತಂತ್ರಜ್ಞಾನ ಯಾವುದು?

ಹವಾಮಾನ ಇಲಾಖೆ ನೀಡುವ ಮಳೆ ಮುನ್ಸೂಚನೆಗಳು ಬಹುತೇಕ ಸಮಯದಲ್ಲಿ ಸುಳ್ಳಾಗುತ್ತವೆ ಈ ಬಗ್ಗೆ ಹಲವು ಜೋಕುಗಳೆ ಚಾಲ್ತಿಯಲ್ಲಿವೆ. ಹಾಗಿದ್ದರೆ ಈ ಇಲಾಖೆ ಹವಾಮಾನ ಮುನ್ಸೂಚನೆ ನೀಡಲು ಬಳಸುವ ತಂತ್ರಜ್ಞಾನ ಯಾವುದು? ಮಳೆ ಮುನ್ಸೂಚನೆಗಳು ಸುಳ್ಳಾಗುವುದೇಕೆ? ಈ ಬಗ್ಗೆ ವಿವರವಾಗಿ ವಿಜ್ಞಾನಿ ಕುವಿ ಅರಸನ್ ಮಾತನಾಡಿದ್ದಾರೆ.

ಮಂಜುನಾಥ ಸಿ.
| Updated By: ಸಾಧು ಶ್ರೀನಾಥ್​|

Updated on:Apr 27, 2024 | 5:13 PM

Share

‘ಹವಾಮಾನ ಇಲಾಖೆ ಕೊಡುವ ಮಳೆ ಮುನ್ಸೂಚನೆ ನಿಜವಾಗುತ್ತದೆ ಎಂದರೆ ನಂಬಬಹುದೇನೋ, ಆರ್​ಸಿಬಿ ಕಪ್ ಗೆಲ್ಲುತ್ತದೆ ಎಂದರೆ ನಂಬಲಾಗದು’ ಸಾಮಾಜಿಕ ಜಾಲತಾಣದಲ್ಲಿಈ ರೀತಿಯ ಜೋಕ್​ಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಈ ಜೋಕ್​ನಲ್ಲಿ ಆರ್​ಸಿಬಿ ಭಾಗವನ್ನು ಬಿಟ್ಟು ಗಮನಿಸಿದರೆ ಹವಾಮಾನ ಇಲಾಖೆ ಬಗ್ಗೆ ಜನರಿಗೆ ಇರುವ ಅಪನಂಬಿಕೆ, ತಾತ್ಸಾರದ ಅರಿವಾಗುತ್ತದೆ. ಇದು ಮಾತ್ರವಲ್ಲ ಹವಾಮಾನ ಇಲಾಖೆ ನೀಡುವ ಮುನ್ಸೂಚನೆಗಳು ಸುಳ್ಳಾಗುವ ಬಗ್ಗೆ ಹಲವು ಜೋಕ್​ಗಳು ಚಾಲ್ತಿಯಲ್ಲಿವೆ. ಹವಾಮಾನ ಇಲಾಖೆಯ ಮುನ್ಸೂಚನೆಗಳು ಸುಳ್ಳಾಗುವುದೇಕೆ? ಇಲಾಖೆಯ ಅಧಿಕಾರಿಗಳು ಸುಮ್ಮನೆ ಆಕಾಶ ನೋಡಿ ಮುನ್ಸೂಚನಾ ವರದಿ ನೀಡುತ್ತಾರೆಯೇ? ವರದಿ ನೀಡಲು ಇಲಾಖೆ ಬಳಸುವ ತಂತ್ರಜ್ಞಾನಗಳು ಯಾವುವು? ಹವಾಮಾನದ ಗುಣ ಅಳೆಯುವ ಮಾಪನಗಳು ಯಾವುವು? ಮುನ್ಸೂಚನೆಗಳು ವಿಫಲವಾಗುವುದು ಏಕೆ? ಎಲ್ಲ ವಿಷಯಗಳ ಬಗ್ಗೆ ಬೆಂಗಳೂರಿನ ಹವಾಮಾನ ಇಲಾಖೆ ಮುಖ್ಯಸ್ಥ ವಿಜ್ಞಾನಿ ಕುವಿ ಅರಸನ್ ವಿವರವಾಗಿ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಭೂ ವಿಜ್ಞಾನ ಇಲಾಖೆಯ ಅಡಿಯಲ್ಲಿ ಕೆಲಸ ಮಾಡುವ ಮೆಟ್ರೊಲೊಜಿ ಅಥವಾ ಹವಾಮಾನ ಮುನ್ಸೂಚನೆ ಮತ್ತು ಮಾಪನ ವಿಭಾಗವು ಕೇವಲ ಮಳೆ ಮುನ್ಸೂಚನೆಗಳನ್ನು ಮಾತ್ರವೇ ನೀಡುವುದಿಲ್ಲ. ಈ ವಿಭಾಗವು ರೈತರಿಗೆ ಮಳೆ ಮುನ್ಸೂಚನೆ ನೀಡುವ ಜೊತೆಗೆ ದೇಶದ ಪ್ರತಿಯೊಂದು ವಿಮಾನ ನಿಲ್ದಾಣದಲ್ಲಿ ಪ್ರತಿ ಅರ್ಧಗಂಟೆಗೊಮ್ಮೆ ಹವಾಮಾನ ಮಾಹಿತಿ ನೀಡುತ್ತದೆ. ದೇಶದ ಎಲ್ಲ ವಿಮಾನ ನಿಲ್ದಾಣದಲ್ಲಿ ಹವಾಮಾನ ಇಲಾಖೆಯ ಕಚೇರಿ ಇದೆ. ಅಣೆಕಟ್ಟೆ ನೀರಿನ ಮಟ್ಟ ನಿಗಾ, ಸ್ಯಾಟಲೈಟ್ ಮಾಪನ, ಅಂತರ್ಜಲದ ಅಧ್ಯಯನ, ಭೂಕಂಪನ ಮಾಪನ ಇನ್ನೂ ಕೆಲವು ಕಾರ್ಯಗಳು ಈ ಸಂಸ್ಥೆಯ ಕಾರ್ಯಮಿತಿಯಲ್ಲಿ ಬರುತ್ತವೆ. ಈ ಇಲಾಖೆ ನೀಡುವ ಹವಾಮಾನ ಮುನ್ಸೂಚನೆಯನ್ನು ದೇಶದ ಹಲವು...

Published On - 12:31 pm, Thu, 25 April 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!