AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ಇಲಾಖೆ ಹೇಗೆ ಕೆಲಸ ಮಾಡುತ್ತದೆ? ಮಳೆ ಮುನ್ಸೂಚನೆಗೆ ಈಗ ಬಳಸುತ್ತಿರುವ ತಂತ್ರಜ್ಞಾನ ಯಾವುದು?

ಹವಾಮಾನ ಇಲಾಖೆ ನೀಡುವ ಮಳೆ ಮುನ್ಸೂಚನೆಗಳು ಬಹುತೇಕ ಸಮಯದಲ್ಲಿ ಸುಳ್ಳಾಗುತ್ತವೆ ಈ ಬಗ್ಗೆ ಹಲವು ಜೋಕುಗಳೆ ಚಾಲ್ತಿಯಲ್ಲಿವೆ. ಹಾಗಿದ್ದರೆ ಈ ಇಲಾಖೆ ಹವಾಮಾನ ಮುನ್ಸೂಚನೆ ನೀಡಲು ಬಳಸುವ ತಂತ್ರಜ್ಞಾನ ಯಾವುದು? ಮಳೆ ಮುನ್ಸೂಚನೆಗಳು ಸುಳ್ಳಾಗುವುದೇಕೆ? ಈ ಬಗ್ಗೆ ವಿವರವಾಗಿ ವಿಜ್ಞಾನಿ ಕುವಿ ಅರಸನ್ ಮಾತನಾಡಿದ್ದಾರೆ.

ಮಂಜುನಾಥ ಸಿ.
| Edited By: ಸಾಧು ಶ್ರೀನಾಥ್​|

Updated on:Apr 27, 2024 | 5:13 PM

Share

‘ಹವಾಮಾನ ಇಲಾಖೆ ಕೊಡುವ ಮಳೆ ಮುನ್ಸೂಚನೆ ನಿಜವಾಗುತ್ತದೆ ಎಂದರೆ ನಂಬಬಹುದೇನೋ, ಆರ್​ಸಿಬಿ ಕಪ್ ಗೆಲ್ಲುತ್ತದೆ ಎಂದರೆ ನಂಬಲಾಗದು’ ಸಾಮಾಜಿಕ ಜಾಲತಾಣದಲ್ಲಿಈ ರೀತಿಯ ಜೋಕ್​ಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಈ ಜೋಕ್​ನಲ್ಲಿ ಆರ್​ಸಿಬಿ ಭಾಗವನ್ನು ಬಿಟ್ಟು ಗಮನಿಸಿದರೆ ಹವಾಮಾನ ಇಲಾಖೆ ಬಗ್ಗೆ ಜನರಿಗೆ ಇರುವ ಅಪನಂಬಿಕೆ, ತಾತ್ಸಾರದ ಅರಿವಾಗುತ್ತದೆ. ಇದು ಮಾತ್ರವಲ್ಲ ಹವಾಮಾನ ಇಲಾಖೆ ನೀಡುವ ಮುನ್ಸೂಚನೆಗಳು ಸುಳ್ಳಾಗುವ ಬಗ್ಗೆ ಹಲವು ಜೋಕ್​ಗಳು ಚಾಲ್ತಿಯಲ್ಲಿವೆ. ಹವಾಮಾನ ಇಲಾಖೆಯ ಮುನ್ಸೂಚನೆಗಳು ಸುಳ್ಳಾಗುವುದೇಕೆ? ಇಲಾಖೆಯ ಅಧಿಕಾರಿಗಳು ಸುಮ್ಮನೆ ಆಕಾಶ ನೋಡಿ ಮುನ್ಸೂಚನಾ ವರದಿ ನೀಡುತ್ತಾರೆಯೇ? ವರದಿ ನೀಡಲು ಇಲಾಖೆ ಬಳಸುವ ತಂತ್ರಜ್ಞಾನಗಳು ಯಾವುವು? ಹವಾಮಾನದ ಗುಣ ಅಳೆಯುವ ಮಾಪನಗಳು ಯಾವುವು? ಮುನ್ಸೂಚನೆಗಳು ವಿಫಲವಾಗುವುದು ಏಕೆ? ಎಲ್ಲ ವಿಷಯಗಳ ಬಗ್ಗೆ ಬೆಂಗಳೂರಿನ ಹವಾಮಾನ ಇಲಾಖೆ ಮುಖ್ಯಸ್ಥ ವಿಜ್ಞಾನಿ ಕುವಿ ಅರಸನ್ ವಿವರವಾಗಿ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಭೂ ವಿಜ್ಞಾನ ಇಲಾಖೆಯ ಅಡಿಯಲ್ಲಿ ಕೆಲಸ ಮಾಡುವ ಮೆಟ್ರೊಲೊಜಿ ಅಥವಾ ಹವಾಮಾನ ಮುನ್ಸೂಚನೆ ಮತ್ತು ಮಾಪನ ವಿಭಾಗವು ಕೇವಲ ಮಳೆ ಮುನ್ಸೂಚನೆಗಳನ್ನು ಮಾತ್ರವೇ ನೀಡುವುದಿಲ್ಲ. ಈ ವಿಭಾಗವು ರೈತರಿಗೆ ಮಳೆ ಮುನ್ಸೂಚನೆ ನೀಡುವ ಜೊತೆಗೆ ದೇಶದ ಪ್ರತಿಯೊಂದು ವಿಮಾನ ನಿಲ್ದಾಣದಲ್ಲಿ ಪ್ರತಿ ಅರ್ಧಗಂಟೆಗೊಮ್ಮೆ ಹವಾಮಾನ ಮಾಹಿತಿ ನೀಡುತ್ತದೆ. ದೇಶದ ಎಲ್ಲ ವಿಮಾನ ನಿಲ್ದಾಣದಲ್ಲಿ ಹವಾಮಾನ ಇಲಾಖೆಯ ಕಚೇರಿ ಇದೆ. ಅಣೆಕಟ್ಟೆ ನೀರಿನ ಮಟ್ಟ ನಿಗಾ, ಸ್ಯಾಟಲೈಟ್ ಮಾಪನ, ಅಂತರ್ಜಲದ ಅಧ್ಯಯನ, ಭೂಕಂಪನ ಮಾಪನ ಇನ್ನೂ ಕೆಲವು ಕಾರ್ಯಗಳು ಈ ಸಂಸ್ಥೆಯ ಕಾರ್ಯಮಿತಿಯಲ್ಲಿ ಬರುತ್ತವೆ. ಈ ಇಲಾಖೆ ನೀಡುವ ಹವಾಮಾನ ಮುನ್ಸೂಚನೆಯನ್ನು ದೇಶದ ಹಲವು...

Published On - 12:31 pm, Thu, 25 April 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!