ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ!

ಚಿಕ್ಕಬಳ್ಳಾಪುರ: ಎಷ್ಟೇ ಪ್ರಬಲವಾದ ಕಾನೂನುಗಳು ಜಾರಿಗೆ ತಂದರೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಕಡಿಮೆಯಾಗಿಲ್ಲ. ಇತ್ತೀಚೆಗಷ್ಟೇ ಹೈದರಾಬಾದ್​ನಲ್ಲಿ ದಿಶಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್ ಮಾಡಿದ್ದರು. 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ರೇಪ್ ಅಂಡ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನಿಗದಿಯಾಗಿದೆ. ಆದ್ರೂ ಸಹ ದಿನದಿಂದ ದಿನಕ್ಕೆ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ […]

ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ!

Updated on: Feb 04, 2020 | 4:14 PM

ಚಿಕ್ಕಬಳ್ಳಾಪುರ: ಎಷ್ಟೇ ಪ್ರಬಲವಾದ ಕಾನೂನುಗಳು ಜಾರಿಗೆ ತಂದರೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಕಡಿಮೆಯಾಗಿಲ್ಲ. ಇತ್ತೀಚೆಗಷ್ಟೇ ಹೈದರಾಬಾದ್​ನಲ್ಲಿ ದಿಶಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್ ಮಾಡಿದ್ದರು. 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ರೇಪ್ ಅಂಡ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನಿಗದಿಯಾಗಿದೆ. ಆದ್ರೂ ಸಹ ದಿನದಿಂದ ದಿನಕ್ಕೆ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ.

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಶಾಲಾ ಆವರಣದಲ್ಲೇ ಪಿಯು ಹಾಗೂ ಪದವಿ ವಿದ್ಯಾರ್ಥಿ ಲೈಂಗಿಕ ದೌರ್ಜನ್ಯ ಎಸಗಿ, ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ. ಬಳಿಕ ವಿಡಿಯೋವನ್ನು ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಕುರಿತು ವಿದ್ಯಾರ್ಥಿನಿ ಪೋಷಕರು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us