AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ-ತಾತನ ಹೆಸರು ಹೇಳಿ ರಾಜಕೀಯ ಮಾಡ್ತಿದ್ದವರು ನಿರುದ್ಯೋಗಿಗಳಾಗಿದ್ದಾರೆ -ತೇಜಸ್ವಿ

ತುಮಕೂರು: ಈ ಹಿಂದೆ ಅಪ್ಪ-ತಾತನ ಹೆಸರು ಹೇಳಿ ರಾಜಕೀಯ ಮಾಡುತ್ತಿದ್ದರು. ಹೀಗೆ ರಾಜಕೀಯ ಮಾಡ್ತಿದ್ದವರು ಕಾಲಾಂತರದಲ್ಲಿ ನಿರುದ್ಯೋಗಿಗಳಾಗಿದ್ದಾರೆ ಎಂದು ಶಿರಾದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟಾಂಗ್ ಕೊಟ್ಟಿದ್ದಾರೆ. ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಭರ್ಜರಿ ಪ್ರಚಾರ ನಡೆಯುತ್ತಿದೆ. ಈ ವೇಳೆ ಮಾತನಾಡಿದ ತೇಜಸ್ವಿ ಸೂರ್ಯ ವಿಪಕ್ಷಗಳ ವಿರುದ್ಧ ಪ್ರಹಾರ ಮಾಡಿದ್ದಾರೆ. ಬಿಜೆಪಿಯ ಇತಿಹಾಸದಲ್ಲಿ ಯಾವುದೂ ಸುಲಭವಾಗಿ ಸಿಕ್ಕಿಲ್ಲ. ದೇಶದಲ್ಲಿ ಬಿಜೆಪಿ 303 ಸಂಸದರನ್ನು ಹೊಂದಿದೆ. ಮನೆಯಲ್ಲಿ ಸುಮ್ಮನೆ ಮಲಗಿದ್ರಿಂದ ಬಂದಿರುವುದಲ್ಲ. […]

ಅಪ್ಪ-ತಾತನ ಹೆಸರು ಹೇಳಿ ರಾಜಕೀಯ ಮಾಡ್ತಿದ್ದವರು ನಿರುದ್ಯೋಗಿಗಳಾಗಿದ್ದಾರೆ -ತೇಜಸ್ವಿ
ಆಯೇಷಾ ಬಾನು
| Edited By: |

Updated on:Oct 22, 2020 | 3:25 PM

Share

ತುಮಕೂರು: ಈ ಹಿಂದೆ ಅಪ್ಪ-ತಾತನ ಹೆಸರು ಹೇಳಿ ರಾಜಕೀಯ ಮಾಡುತ್ತಿದ್ದರು. ಹೀಗೆ ರಾಜಕೀಯ ಮಾಡ್ತಿದ್ದವರು ಕಾಲಾಂತರದಲ್ಲಿ ನಿರುದ್ಯೋಗಿಗಳಾಗಿದ್ದಾರೆ ಎಂದು ಶಿರಾದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟಾಂಗ್ ಕೊಟ್ಟಿದ್ದಾರೆ. ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಭರ್ಜರಿ ಪ್ರಚಾರ ನಡೆಯುತ್ತಿದೆ. ಈ ವೇಳೆ ಮಾತನಾಡಿದ ತೇಜಸ್ವಿ ಸೂರ್ಯ ವಿಪಕ್ಷಗಳ ವಿರುದ್ಧ ಪ್ರಹಾರ ಮಾಡಿದ್ದಾರೆ.

ಬಿಜೆಪಿಯ ಇತಿಹಾಸದಲ್ಲಿ ಯಾವುದೂ ಸುಲಭವಾಗಿ ಸಿಕ್ಕಿಲ್ಲ. ದೇಶದಲ್ಲಿ ಬಿಜೆಪಿ 303 ಸಂಸದರನ್ನು ಹೊಂದಿದೆ. ಮನೆಯಲ್ಲಿ ಸುಮ್ಮನೆ ಮಲಗಿದ್ರಿಂದ ಬಂದಿರುವುದಲ್ಲ. ಪ್ರತಿಯೊಂದನ್ನೂ ಸಂಘರ್ಷದ ಮೂಲಕವೇ ಗೆದ್ದಿದ್ದೇವೆ. ಶಿರಾದಲ್ಲೂ ಕೂಡ ಸಂಘರ್ಷದ ಯೋಜನೆ ಜಾರಿಯಲ್ಲಿದೆ. ಮೋದಿ ಅಧಿಕಾರಕ್ಕೆ ಬಂದ ಬಳಿಕ 60 ವರ್ಷದಲ್ಲಿ ಆಗಿರದಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ರಾಷ್ಟ್ರದ ನಿರುದ್ಯೋಗದ ಕುರಿತು ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.

ಈ ಚುನಾವಣೆ ಗೆದ್ದೇ ಗೆಲ್ಲುತ್ತೇವೆ: ಶಿರಾದಲ್ಲಿ ಬದಲಾವಣೆ ಪರ್ವವಿದೆ. ಯುವಕರು ಜೆ.ಡಿ.ಎಸ್, ಕಾಂಗ್ರೆಸ್ ಅಧಿಕಾರ ನೋಡಿ ಬೇಸತ್ತಿದ್ದಾರೆ. ನೇರವಾಗಿ ಯುವಕರು ಮೋದಿ, ಯಡಿಯೂರಪ್ಪ ನೇತೃತ್ವದ ಶಾಸಕರು ಬೇಕೆಂದು ಬಯಸಿದ್ದಾರೆ. ಶಿರಾ ಅಭಿವೃದ್ಧಿಯಾಗಲು ಯುವಕರು ಸಂಕಲ್ಪ ಮಾಡಿದ್ದಾರೆ.‌ ಇಷ್ಟು ವರ್ಷ ಕಾಣದ ಅಭಿವೃದ್ಧಿಯನ್ನು ರಾಜೇಶ್ ಗೌಡ ನೇತೃತ್ವದಲ್ಲಿ ಕಾಣಲಿದ್ದಾರೆ. ಈ ಚುನಾವಣೆ ಶಿರಾ ಇತಿಹಾಸದಲ್ಲೇ ಬದಲಾವಣೆ ಚುನಾವಣೆಯಾಗಲಿದೆ. ಯುವಕರು ಅತ್ಯಂತ ಉತ್ಸಾಹಕರಾಗಿ ಬಿಜೆಪಿ ಪರ ನಿಂತಿದ್ದಾರೆ. ಈ ಚುನಾವಣೆ ಗೆದ್ದೆ ಗೆಲ್ಲುತ್ತೇವೆ ಎಂದು ಯುವಕರನ್ನು ಬಡಿದೆಬ್ಬಿಸಿದ್ದಾರೆ.

Published On - 3:25 pm, Thu, 22 October 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ