Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ವಾಡಿ ‘ಪ್ರಸಾದ’ ದುರಂತಕ್ಕೆ 2 ವರ್ಷ: ಇನ್ನೂ ಈಡೇರಿಲ್ಲ ಸರಕಾರದ ಭರವಸೆ, ಸಂಕಷ್ಟದಲ್ಲಿ ಸಂತ್ರಸ್ಥರು

ಅಸ್ವಸ್ಥರಾದವರ ಕುಟುಂಬಗಳಿಗೆ 12 ತಿಂಗಳ ಕಾಲ ₹ 10 ಸಾವಿರ ಸಹಾಯಧನ, ಒಂದು ವರ್ಷ ಪಡಿತರ ಆಹಾರ, ಗುಡಿಕೈಗಾರಿಕೆ ಆರಂಭಿಸುವ ಮೂಲಕ ಉದ್ಯೋಗ ಕಲ್ಪಿಸುವ ಭರವಸೆಯನ್ನು ಅಂದಿನ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ನೀಡಿದ್ದರು.

ಸುಳ್ವಾಡಿ ‘ಪ್ರಸಾದ’ ದುರಂತಕ್ಕೆ 2 ವರ್ಷ: ಇನ್ನೂ ಈಡೇರಿಲ್ಲ ಸರಕಾರದ ಭರವಸೆ, ಸಂಕಷ್ಟದಲ್ಲಿ ಸಂತ್ರಸ್ಥರು
ಕಿಚ್ಚುಗುತ್ತಿ ಮಾರಮ್ಮ ದೇಗುಲ ಮತ್ತು ಆರೋಪಿ ಇಮ್ಮಡಿ ಮಹದೇವ ಸ್ವಾಮಿ
Follow us
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 16, 2020 | 7:44 AM

ಚಾಮರಾಜನಗರ: ಇಡೀ ರಾಜ್ಯ ತಲ್ಲಣಿಸುವಂತೆ ಮಾಡಿದ್ದ ಹನೂರು ತಾಲ್ಲೂಕು ಸುಳ್ವಾಡಿ ಗ್ರಾಮದ ಪ್ರಸಿದ್ಧ ಕಿಚ್ಚುಗತ್ತಿ ಮಾರಮ್ಮ ದೇಗುಲದಲ್ಲಿ ವಿಷ ಬೆರೆಸಿದ ಪ್ರಸಾದ ವಿತರಣೆ ಭೀಕರ ಕೃತ್ಯಕ್ಕೆ ಸೋಮವಾರ (ಡಿ.14) ಎರಡು ವರ್ಷ ಆಗಿದೆ. ವಿಷ ಬೆರೆಸಿದ್ದ ಟೊಮೆಟೊ ಬಾತ್ ಪ್ರಸಾದ ಸೇವಿಸಿದ್ದ 12 ಮಂದಿ ಮೃತಪಟ್ಟಿದ್ದರು. 120ಕ್ಕೂ ಹೆಚ್ಚು ಮಂದಿಗೂ ನಾನಾ ಸಂಕಷ್ಟ ಅನುಭವಿಸುತ್ತಾ ದಿನದೂಡುತ್ತಿದ್ದಾರೆ.

ದೇಶದ ಗಮನ ಸೆಳೆದಿದ್ದ ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ ಎಂದು ಅಂದಿನ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಗುಡುಗಿದ್ದರು. ಬಿದರಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ಥರಿಗೆ ಸಾಂತ್ವನ ಹೇಳಿ, ಭರವಸೆಗಳ ಮಹಾಪೂರವನ್ನೇ ಹರಿಸಿದ್ದರು. ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ, ಎರಡು ಎಕರೆ ಜಾಗ, ಒಂದು ವರ್ಷ ಉಚಿತ ಪಡಿತರ, ಗುಡಿ ಕೈಗಾರಿಕೆ ಸ್ಥಾಪನೆ ಮಾಡುವುದಾಗಿ ಹೇಳಿದ್ದರು.

ಅಸ್ವಸ್ಥರಾದವರ ಕುಟುಂಬಗಳಿಗೆ 12 ತಿಂಗಳ ಕಾಲ ₹ 10 ಸಾವಿರ ಸಹಾಯಧನ, ಒಂದು ವರ್ಷ ಪಡಿತರ ಆಹಾರ, ಗುಡಿಕೈಗಾರಿಕೆ ಆರಂಭಿಸುವ ಮೂಲಕ ಉದ್ಯೋಗ ಕಲ್ಪಿಸುವ ಭರವಸೆ ನೀಡಿದ್ದರು. ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಬಿಟ್ಟರೆ ಬೇರೆ ಇನ್ಯಾವುದೇ ಸೌಲಭ್ಯ ನಮಗೆ ತಲುಪಿಲ್ಲ ಎಂದು ಕುಟುಂಬಗಳ ಸದಸ್ಯರು ಆರೋಪಿಸಿದ್ದಾರೆ.

ಕಿಚ್ಚಗುತ್ತಿ ಮಾರಮ್ಮ ದೇವಾಲಯದ ಟ್ರಸ್ಟ್ ಮೇಲೆ ಹಿಡಿತ ಸಾಧಿಸುವ ಸಲುವಾಗಿ ದೇವರ ಹೆಸರಿನಲ್ಲಿ ತಯಾರಿಸಿದ್ದ ಟೊಮೆಟೊ ಬಾತ್​ಗೆ ವಿಷ ಬೆರೆಸಲಾಗಿತ್ತು. ಏನೂ ಅರಿಯದ ಓಂ ಶಕ್ತಿ ಮಾಲಾಧಾರಿಗಳು ಸೇರಿದಂತೆ ಸುಳ್ವಾಡಿ, ಮಾರ್ಟಳ್ಳಿ, ದೊರೆಸ್ವಾಮಿ ಮೇಡು, ಬಿದರಳ್ಳಿ ಗ್ರಾಮಗಳ ಭಕ್ತರು ಪ್ರಸಾದ ಸೇವಿಸಿ ಸಾವನ್ನಪ್ಪಿದ್ದರು. ಕೋಟೆ ಪೊದೆ ಗ್ರಾಮದ ಮೈಲಿಬಾಯಿಯಲ್ಲಿ ಹೆಣ್ಣು ಮಕ್ಕಳು (ಪ್ರಿಯಾ ಮತ್ತು ರಾಣಿ) ಮತ್ತು ಓರ್ವ ಗಂಡು ಮಗ ಹಾಗೂ ಬಿದರಳ್ಳಿ ಗ್ರಾಮದ ಐಶ್ವರ್ಯ ತಂದೆ ತಾಯಿ ಇಲ್ಲದೆ ಅನಾಥರಾಗಿದ್ದಾರೆ.

ಸೆರೆಮನೆಯಲ್ಲಿ ಆರೋಪಿಗಳು ದೇಗುಲ ಪ್ರಸಾದಕ್ಕೆ ವಿಷ ಬೆರೆಸಿದ್ದ ಆರೋಪಿಗಳಾದ ಇಮ್ಮಡಿ ಮಹದೇವ ಸ್ವಾಮಿ, ಅಂಬಿಕಾ, ಮಾದೇಶ ಮತ್ತು ದೊಡ್ಡಯ್ಯ ಕಳೆದ ಎರಡು ವರ್ಷದಿಂದ ಮೈಸೂರಿನ ಕಾರಾಗೃಹದಲ್ಲಿದ್ದಾರೆ. ಈ ಪ್ರಕರಣದ ಆರೋಪಿಗಳ ಪರವಾಗಿ ಯಾವುದೇ ವಕೀಲರು ವಾದಿಸುವುದಿಲ್ಲ ಎಂದು ಜಿಲ್ಲಾ ವಕೀಲರ ಸಂಘ ಹೇಳಿತ್ತು. ನವೆಂಬರ್ ತಿಂಗಳಲ್ಲಿ ಆರೋಪಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿಯೂ ಜಾಮೀನು ಸಿಕ್ಕಿರಲಿಲ್ಲ.

ತೆಗೆದಿದೆ ದೇಗುಲ ಟ್ರಸ್ಟ್​ ನಿರ್ವಹಿಸುತ್ತಿದ್ದ ಕಿಚ್ಚುಗತ್ತಿ ಮಾರಮ್ಮ ದೇವಾಲಯಕ್ಕೆ ಕಳೆದ 22 ವರ್ಷದಿಂದ ಬೀಗ ಜಡಿಯಲಾಗಿತ್ತು. ಈಗ ದೇವಾಲಯವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಂಡು, ಬಾಗಿಲು ತೆಗೆಸಿದೆ. ದೇವಾಲಯದಲ್ಲಿ ಪೂಜಾ ವಿಧಿವಿಧಾನಗಳು ನಡೆಯುತ್ತಿವೆ‌. -ಎಂ.ಇ ಮಂಜುನಾಥ್

ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್

ದೇವರ ಪ್ರಸಾದವೆಂದು ವಿಷವುಣಿಸಿದ್ದ ಸ್ವಾಮಿ ಜೈಲಿನಲ್ಲಿದ್ದುಕೊಂಡೇ ಮಾಡಿದ್ದೇನು ಗೊತ್ತಾ?

Published On - 7:35 am, Wed, 16 December 20

ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್