AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಪ್ರತಿನಿಧಿಗಳಿಗೆ ಕ್ಲಾಸ್​ ತೆಗೆದುಕೊಂಡ ಗ್ರಾಮಸ್ಥರಿಗೆ ಕೊನೆಗೂ ಸಿಕ್ತು ತಾತ್ಕಾಲಿಕ ರಿಲೀಫ್​, ಎಲ್ಲಿ?

ಚಿಕ್ಕಮಗಳೂರು:  ಗ್ರಾಮಸ್ಥರ ಪರದಾಟಕ್ಕೆ ಸ್ಪಂದಿಸದ ಜನಪ್ರತಿನಿಧಿಗಳನ್ನ ಸ್ಥಳೀಯರು ತರಾಟೆಗೆ ತೆಗೆದುಕೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಂಕೇನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಸ್ಥಳೀಯರಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಕಳೆದ ಬಾರಿ ಪ್ರವಾಹದಲ್ಲಿ ಬಂಕೇನಹಳ್ಳಿ ಸೇತುವೆ ಕೊಚ್ಚಿ ಹೋಗಿತ್ತು. ಬಂಕೇನಹಳ್ಳಿ, ಚೇಗು, ಕೂಡಳ್ಳಿ ಸೇರಿದಂತೆ ಕೆಲ ಗ್ರಾಮಗಳ ಜನರು ಸೇತುವೆಯಿಲ್ಲದೆ ಪರದಾಡಬೇಕಾಯಿತು. ನಮಗೆ ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಸೇರಿದಂತೆ ಸರ್ಕಾರದ ಗಮನವನ್ನ ಇತ್ತ ನಿರಂತರವಾಗಿ ಸೆಳೆಯುತ್ತಲೇ ಬಂದಿದ್ರು. ಆದ್ರೂ ಯಾವುದೇ ಪ್ರಯೋಜನವಾಗದೆ ಇದ್ದಾಗ ತಾವೇ […]

ಜನಪ್ರತಿನಿಧಿಗಳಿಗೆ ಕ್ಲಾಸ್​ ತೆಗೆದುಕೊಂಡ ಗ್ರಾಮಸ್ಥರಿಗೆ ಕೊನೆಗೂ ಸಿಕ್ತು ತಾತ್ಕಾಲಿಕ ರಿಲೀಫ್​, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Aug 18, 2020 | 6:29 PM

Share

ಚಿಕ್ಕಮಗಳೂರು:  ಗ್ರಾಮಸ್ಥರ ಪರದಾಟಕ್ಕೆ ಸ್ಪಂದಿಸದ ಜನಪ್ರತಿನಿಧಿಗಳನ್ನ ಸ್ಥಳೀಯರು ತರಾಟೆಗೆ ತೆಗೆದುಕೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಂಕೇನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಸ್ಥಳೀಯರಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಕಳೆದ ಬಾರಿ ಪ್ರವಾಹದಲ್ಲಿ ಬಂಕೇನಹಳ್ಳಿ ಸೇತುವೆ ಕೊಚ್ಚಿ ಹೋಗಿತ್ತು. ಬಂಕೇನಹಳ್ಳಿ, ಚೇಗು, ಕೂಡಳ್ಳಿ ಸೇರಿದಂತೆ ಕೆಲ ಗ್ರಾಮಗಳ ಜನರು ಸೇತುವೆಯಿಲ್ಲದೆ ಪರದಾಡಬೇಕಾಯಿತು. ನಮಗೆ ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಸೇರಿದಂತೆ ಸರ್ಕಾರದ ಗಮನವನ್ನ ಇತ್ತ ನಿರಂತರವಾಗಿ ಸೆಳೆಯುತ್ತಲೇ ಬಂದಿದ್ರು. ಆದ್ರೂ ಯಾವುದೇ ಪ್ರಯೋಜನವಾಗದೆ ಇದ್ದಾಗ ತಾವೇ ಮುಂದು ಬಂದು ತಾತ್ಕಾಲಿಕ ಸೇತುವೆಯನ್ನ ನಿರ್ಮಿಸಿಕೊಂಡಿದ್ದರು.

ದುರಂತ ಅಂದ್ರೆ ಹೊಸದಾಗಿ ನಿರ್ಮಿಸಿದ ಸೇತುವೆ ಕೂಡ ಈ ಬಾರಿ ಮಳೆಯಲ್ಲಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಸಾವಿರಾರು ಜನರು ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ಉದ್ಭವಿಸಿತ್ತು. ಈ ನಡುವೆ ಕಳೆದ 10 ದಿನಗಳ ಹಿಂದೆ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಶಾಸಕ ಕುಮಾರಸ್ವಾಮಿ ಸ್ಥಳಕ್ಕೆ ಭೇಟಕೊಟ್ಟ ವೇಳೆ ಸ್ಥಳೀಯರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ರು. ಆ ವೇಳೆ ಏನೋ ಸಬೂಬು ಹೇಳಲು ಹೊರಟ ಶಾಸಕರನ್ನ ನೀವು ಮಾತಾಡಬೇಡಿ, ಸುಳ್ಳು ಹೇಳೋದು ನಿಮ್ಮ ಜಾಯಮಾನವಾಗಿದೆ ಅಂತಾ ತರಾಟೆ ತೆಗೆದುಕೊಂಡಿದ್ರು.

ಬಿಸಿ ಮುಟ್ಟಿಸಿದ ಮೇಲೆ ಬುದ್ಧಿ ಕಲಿತ ಜನಪ್ರತಿನಿಧಿಗಳು ಸ್ಥಳೀಯರು ಬಿಸಿ ಮುಟ್ಟಿಸಿದ ಮೇಲೆ ಇದೀಗ ಬಂಕೇನಹಳ್ಳಿಗೆ ತಾತ್ಕಾಲಿಕವಾಗಿ ಸೇತುವೆಯ ನಿರ್ಮಾಣವಾಗಿದೆ. ಸದ್ಯ, ಹೇಮಾವತಿ ನದಿಯ ಆರ್ಭಟ ತಕ್ಕ ಮಟ್ಟಿಗೆ ಕಮ್ಮಿಯಾಗಿರೋದ್ರಿಂದ ತಾತ್ಕಾಲಿಕ ಸೇತುವೆಯಲ್ಲಿ ಜನಸಾಮಾನ್ಯರು ಓಡಾಡಲು ಸಾಧ್ಯವಾಗಿದೆ.  ಆದರೆ, ಇದು ಕೇವಲ ತಾತ್ಕಾಲಿಕ ವ್ಯವಸ್ಥೆಯಾಗಿರೋದ್ರಿಂದ ಸ್ಥಳೀಯರು ಶಾಶ್ವತ ಸೇತುವೆಗಾಗಿ ಬೇಡಿಕೆ ಇಟ್ಟಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?