AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ವೇಳೆ ಬಂದ್ ಆಗಲಿವೆಯಾ 10 ಸಾವಿರ ಖಾಸಗಿ ಶಾಲೆಗಳು?

ಮಹಾಮಾರಿ ಕೊರೊನಾ ಅದೆಷ್ಟೋ ಜನರ ಬದುಕನ್ನೇ ಅತಂತ್ರ ಮಾಡಿದೆ. ಶಾಲಾ-ಕಾಲೇಜುಗಳಿಲ್ಲದೆ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಈ ನಡುವೆ ಈಗ ಸರ್ಕಾರದ ನಿರ್ಧಾರದಿಂದ ಖಾಸಗಿ ಶಾಲೆ ವಿದ್ಯಾರ್ಥಿಗಳಿಗೆ ಕಂಟಕ ಎದುರಾಗಲಿದೆಯಾ ಎಂಬ ಅನುಮಾನ ಶುರುವಾಗಿದೆ.

ಕೋವಿಡ್ ವೇಳೆ ಬಂದ್ ಆಗಲಿವೆಯಾ 10 ಸಾವಿರ ಖಾಸಗಿ ಶಾಲೆಗಳು?
6 ರಿಂದ 9ನೇ ತರಗತಿ ಸ್ಥಗಿತ
ಆಯೇಷಾ ಬಾನು
|

Updated on:Nov 30, 2020 | 8:55 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಅದೆಷ್ಟೋ ಜನರ ಬದುಕನ್ನೇ ಅತಂತ್ರ ಮಾಡಿದೆ. ಶಾಲಾ-ಕಾಲೇಜುಗಳಿಲ್ಲದೆ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಈ ನಡುವೆ ಈಗ ಸರ್ಕಾರದ ನಿರ್ಧಾರದಿಂದ ಖಾಸಗಿ ಶಾಲೆ ವಿದ್ಯಾರ್ಥಿಗಳಿಗೆ ಕಂಟಕ ಎದುರಾಗಲಿದೆಯಾ ಎಂಬ ಅನುಮಾನ ಶುರುವಾಗಿದೆ.

ಶಾಲಾ ಕಟ್ಟಡಗಳಿಗೆ ಸುರಕ್ಷತಾ ಪ್ರಮಾಣ ಪತ್ರ ಪಡೆಯಲು ಶಿಕ್ಷಣ ಇಲಾಖೆ ಸುತ್ತೋಲೆ ಕಳಿಸಿದೆ. ನ್ಯಾಯಾಲಯದ ಆದೇಶದನ್ವಯ ಪ್ರಮಾಣ ಪತ್ರ ಪಡೆಯಬೇಕು. ಶಾಲಾ ಕಟ್ಟಡಗಳ ಗುಣಮಟ್ಟದ ಕುರಿತು ಪ್ರಮಾಣ ಪತ್ರ​ ಪಡೆದುಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ. ಜೊತೆಗೆ ಅಗ್ನಿಶಾಮಕ ಇಲಾಖೆಯಿಂದಲೂ ಪ್ರಮಾಣ ಪತ್ರ ಪಡೆಯಬೇಕು.

ಸುರಕ್ಷತಾ ಕ್ರಮಗಳನ್ನ ಪಾಲಿಸದ ಶಾಲೆಗಳ ಮೇಲೆ ಸರ್ಕಾರ ಚಾಟಿ ಬೀಸಿದೆ. ಸುರಕ್ಷತಾ ಕ್ರಮ ಅನುಸರಿಸದ ಹಾಗೂ ಪ್ರಮಾಣ ಪತ್ರ ಪಡೆಯದ ಶಾಲೆಗಳ ಅನುಮತಿ ರದ್ದಿಗೆ ನಿರ್ಧಾರ ಮಾಡಿದೆ. ಹೀಗಾಗಿ ಅನುದಾನ ರಹಿತ ಖಾಸಗಿ ಶಾಲೆ ಒಕ್ಕೂಟ ಪ್ರತಿಭಟನೆಗೆ ಮುಂದಾಗಿದೆ. ಈ ಬಗ್ಗೆ ಇಂದು ಮಧ್ಯಾಹ್ನ 12 ಗಂಟೆಗೆ ರುಪ್ಸ ಸಂಘಟನೆ ಸುದ್ದಿಗೋಷ್ಠಿ ಹಮ್ಮಿಕೊಂಡಿದೆ.

ಸರ್ಕಾರದ ಆದೇಶದ ವಿರುದ್ಧ ತಿರುಗಿ ಬಿದ್ದ ರುಪ್ಸ ಸಂಘಟನೆ: ಇನ್ನು ಸರ್ಕಾರದ ಈ ನಿರ್ಧಾರಕ್ಕೆ ರುಪ್ಸ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಖಾಸಗಿ ಶಾಲೆಗಳಿಗೆ ಮಾತ್ರ ರೂಲ್ಸ್.. ಸರ್ಕಾರಿ ಶಾಲೆಗಳಿಗಿಲ್ಲ. ಖಾಸಗಿ ಶಾಲೆಗಳನ್ನ ಮುಚ್ಚಿಸೋ ಷಡ್ಯಂತ್ರ ನಡೆಯುತ್ತಿದ್ಯಾ? ಖಾಸಗಿ ಶಾಲೆಗಳನ್ನ ಮುಚ್ಚಿಸಿ ಸರ್ಕಾರಿ ಶಾಲೆಗಳ ಹೆಚ್ಚಿಸ್ತಾರಾ. ಸರ್ಕಾರದ ನಿಯಮದಿಂದ 10 ಸಾವಿರ ಶಾಲೆಗಳು ಬಂದ್ ಆಗಲಿವೆ ಎಂದು ಸರ್ಕಾರದ ನಿರ್ಧಾರಕ್ಕೆ ರುಪ್ಸ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.

Published On - 8:54 am, Mon, 30 November 20

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?