AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ವೇಳೆ ಬಂದ್ ಆಗಲಿವೆಯಾ 10 ಸಾವಿರ ಖಾಸಗಿ ಶಾಲೆಗಳು?

ಮಹಾಮಾರಿ ಕೊರೊನಾ ಅದೆಷ್ಟೋ ಜನರ ಬದುಕನ್ನೇ ಅತಂತ್ರ ಮಾಡಿದೆ. ಶಾಲಾ-ಕಾಲೇಜುಗಳಿಲ್ಲದೆ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಈ ನಡುವೆ ಈಗ ಸರ್ಕಾರದ ನಿರ್ಧಾರದಿಂದ ಖಾಸಗಿ ಶಾಲೆ ವಿದ್ಯಾರ್ಥಿಗಳಿಗೆ ಕಂಟಕ ಎದುರಾಗಲಿದೆಯಾ ಎಂಬ ಅನುಮಾನ ಶುರುವಾಗಿದೆ.

ಕೋವಿಡ್ ವೇಳೆ ಬಂದ್ ಆಗಲಿವೆಯಾ 10 ಸಾವಿರ ಖಾಸಗಿ ಶಾಲೆಗಳು?
6 ರಿಂದ 9ನೇ ತರಗತಿ ಸ್ಥಗಿತ
ಆಯೇಷಾ ಬಾನು
|

Updated on:Nov 30, 2020 | 8:55 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಅದೆಷ್ಟೋ ಜನರ ಬದುಕನ್ನೇ ಅತಂತ್ರ ಮಾಡಿದೆ. ಶಾಲಾ-ಕಾಲೇಜುಗಳಿಲ್ಲದೆ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಈ ನಡುವೆ ಈಗ ಸರ್ಕಾರದ ನಿರ್ಧಾರದಿಂದ ಖಾಸಗಿ ಶಾಲೆ ವಿದ್ಯಾರ್ಥಿಗಳಿಗೆ ಕಂಟಕ ಎದುರಾಗಲಿದೆಯಾ ಎಂಬ ಅನುಮಾನ ಶುರುವಾಗಿದೆ.

ಶಾಲಾ ಕಟ್ಟಡಗಳಿಗೆ ಸುರಕ್ಷತಾ ಪ್ರಮಾಣ ಪತ್ರ ಪಡೆಯಲು ಶಿಕ್ಷಣ ಇಲಾಖೆ ಸುತ್ತೋಲೆ ಕಳಿಸಿದೆ. ನ್ಯಾಯಾಲಯದ ಆದೇಶದನ್ವಯ ಪ್ರಮಾಣ ಪತ್ರ ಪಡೆಯಬೇಕು. ಶಾಲಾ ಕಟ್ಟಡಗಳ ಗುಣಮಟ್ಟದ ಕುರಿತು ಪ್ರಮಾಣ ಪತ್ರ​ ಪಡೆದುಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ. ಜೊತೆಗೆ ಅಗ್ನಿಶಾಮಕ ಇಲಾಖೆಯಿಂದಲೂ ಪ್ರಮಾಣ ಪತ್ರ ಪಡೆಯಬೇಕು.

ಸುರಕ್ಷತಾ ಕ್ರಮಗಳನ್ನ ಪಾಲಿಸದ ಶಾಲೆಗಳ ಮೇಲೆ ಸರ್ಕಾರ ಚಾಟಿ ಬೀಸಿದೆ. ಸುರಕ್ಷತಾ ಕ್ರಮ ಅನುಸರಿಸದ ಹಾಗೂ ಪ್ರಮಾಣ ಪತ್ರ ಪಡೆಯದ ಶಾಲೆಗಳ ಅನುಮತಿ ರದ್ದಿಗೆ ನಿರ್ಧಾರ ಮಾಡಿದೆ. ಹೀಗಾಗಿ ಅನುದಾನ ರಹಿತ ಖಾಸಗಿ ಶಾಲೆ ಒಕ್ಕೂಟ ಪ್ರತಿಭಟನೆಗೆ ಮುಂದಾಗಿದೆ. ಈ ಬಗ್ಗೆ ಇಂದು ಮಧ್ಯಾಹ್ನ 12 ಗಂಟೆಗೆ ರುಪ್ಸ ಸಂಘಟನೆ ಸುದ್ದಿಗೋಷ್ಠಿ ಹಮ್ಮಿಕೊಂಡಿದೆ.

ಸರ್ಕಾರದ ಆದೇಶದ ವಿರುದ್ಧ ತಿರುಗಿ ಬಿದ್ದ ರುಪ್ಸ ಸಂಘಟನೆ: ಇನ್ನು ಸರ್ಕಾರದ ಈ ನಿರ್ಧಾರಕ್ಕೆ ರುಪ್ಸ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಖಾಸಗಿ ಶಾಲೆಗಳಿಗೆ ಮಾತ್ರ ರೂಲ್ಸ್.. ಸರ್ಕಾರಿ ಶಾಲೆಗಳಿಗಿಲ್ಲ. ಖಾಸಗಿ ಶಾಲೆಗಳನ್ನ ಮುಚ್ಚಿಸೋ ಷಡ್ಯಂತ್ರ ನಡೆಯುತ್ತಿದ್ಯಾ? ಖಾಸಗಿ ಶಾಲೆಗಳನ್ನ ಮುಚ್ಚಿಸಿ ಸರ್ಕಾರಿ ಶಾಲೆಗಳ ಹೆಚ್ಚಿಸ್ತಾರಾ. ಸರ್ಕಾರದ ನಿಯಮದಿಂದ 10 ಸಾವಿರ ಶಾಲೆಗಳು ಬಂದ್ ಆಗಲಿವೆ ಎಂದು ಸರ್ಕಾರದ ನಿರ್ಧಾರಕ್ಕೆ ರುಪ್ಸ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.

Published On - 8:54 am, Mon, 30 November 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ