ದೆಹಲಿಯಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿರಿಕ್, ಅಧಿಕಾರಿಗಳ ಜತೆ ಪ್ರಯಾಣಿಕರ ವಾಗ್ವಾದ

ಬೆಂಗಳೂರು: ಕೇಂದ್ರ ಸರ್ಕಾರ ಕೆಲ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸುವ ನಿರ್ಧಾರ ಕೈಗೊಂಡಿತ್ತು. ಅದರಂತೆ ಕಳೆದ ಮಂಗಳವಾರದಿಂದ ರೈಲು ಸೇವೆ ಆರಂಭವಾಗಿದೆ. ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರೈಲಿನಲ್ಲಿ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ನಿರಾಕರಿಸಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲು ಸೇವೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ಒಪ್ಪದೆ ಗಲಾಟೆ ಮಾಡ್ತಿದ್ದಾರೆ. ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಕ್ವಾರಂಟೈನ್​ನಲ್ಲಿ ಇರುವ ಬಗ್ಗೆ ನಮಗೆ […]

ದೆಹಲಿಯಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿರಿಕ್, ಅಧಿಕಾರಿಗಳ ಜತೆ ಪ್ರಯಾಣಿಕರ ವಾಗ್ವಾದ
ಸಾಧು ಶ್ರೀನಾಥ್​

Updated on: May 14, 2020 | 10:28 AM

ಬೆಂಗಳೂರು: ಕೇಂದ್ರ ಸರ್ಕಾರ ಕೆಲ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸುವ ನಿರ್ಧಾರ ಕೈಗೊಂಡಿತ್ತು. ಅದರಂತೆ ಕಳೆದ ಮಂಗಳವಾರದಿಂದ ರೈಲು ಸೇವೆ ಆರಂಭವಾಗಿದೆ. ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರೈಲಿನಲ್ಲಿ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ನಿರಾಕರಿಸಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ನಡೆದಿದೆ.

ರೈಲು ಸೇವೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ಒಪ್ಪದೆ ಗಲಾಟೆ ಮಾಡ್ತಿದ್ದಾರೆ. ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಕ್ವಾರಂಟೈನ್​ನಲ್ಲಿ ಇರುವ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಟಿಕೆಟ್ ಬುಕ್ ಮಾಡಿ ನಮ್ಮನ್ನು ವಾಪಸ್ ಕಳುಹಿಸಿ ಬಿಡಿ ಎಂದು 10 ಜನ ಪ್ರಯಾಣಿಕರು ಪಟ್ಟು ಹಿಡಿದಿದ್ದಾರೆ.

Published On - 10:07 am, Thu, 14 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us