DC ಆದೇಶ ಉಲ್ಲಂಘನೆ, ಮಧುರೆ ಶನಿ ಮಹಾತ್ಮ ದೇಗುಲದಲ್ಲಿ ಜನಸಾಗರ

ಬೆಂಗಳೂರು:ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳ ಪ್ರವೇಶವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದ್ರೆ ಜನರು ಜಿಲ್ಲಾಧಿಕಾರಿ ಆದೇಶವನ್ನು ಉಲ್ಲಂಘಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶನಿ ಮಹಾತ್ಮ ದೇವಾಲಯದಲ್ಲಿ ಶ್ರಾವಣ ಮಾಸ ಶನಿವಾರ ಹಾಗೂ ಭಾನುವಾರ ಮಧುರೆ ಶನಿ ಮಹಾತ್ಮ ದೇವಾಲಯದಲ್ಲಿ ಎಲ್ಲಾ ಸೇವೆಗಳನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದರು. ಆದರೆ ಇಂದು ಜಿಲ್ಲಾಧಿಕಾರಿ ಆದೇಶಕ್ಕೆ ಕವಡೆ ಕಾಸಿನ ಬೆಲೆಯನ್ನು ನೀಡದ ಸಾರ್ವಜನಿಕರು […]

DC ಆದೇಶ ಉಲ್ಲಂಘನೆ, ಮಧುರೆ ಶನಿ ಮಹಾತ್ಮ ದೇಗುಲದಲ್ಲಿ ಜನಸಾಗರ
ಸಾಧು ಶ್ರೀನಾಥ್​

Updated on: Aug 15, 2020 | 3:43 PM

ಬೆಂಗಳೂರು:ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳ ಪ್ರವೇಶವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದ್ರೆ ಜನರು ಜಿಲ್ಲಾಧಿಕಾರಿ ಆದೇಶವನ್ನು ಉಲ್ಲಂಘಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶನಿ ಮಹಾತ್ಮ ದೇವಾಲಯದಲ್ಲಿ ಶ್ರಾವಣ ಮಾಸ ಶನಿವಾರ ಹಾಗೂ ಭಾನುವಾರ ಮಧುರೆ ಶನಿ ಮಹಾತ್ಮ ದೇವಾಲಯದಲ್ಲಿ ಎಲ್ಲಾ ಸೇವೆಗಳನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದರು.

ಆದರೆ ಇಂದು ಜಿಲ್ಲಾಧಿಕಾರಿ ಆದೇಶಕ್ಕೆ ಕವಡೆ ಕಾಸಿನ ಬೆಲೆಯನ್ನು ನೀಡದ ಸಾರ್ವಜನಿಕರು ತಂಡೋಪತಂಡವಾಗಿ ಆಗಮಿಸಿ, ಸಾಮಾಜಿಕ ಅಂತರವೂ ಕಾಯ್ದುಕೊಳ್ಳದೆ ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಜೊತೆಗೆ ದೇವಸ್ಥಾನದ ಬಳಿಯೇ ದೊಡ್ಡಬೆಳವಂಗಲ ಠಾಣೆಯ ಪೊಲೀಸರು ಇದ್ದರೂ ಸಹ, ಜಿಲ್ಲಾಧಿಕಾರಿ ಆದೇಶಕ್ಕೆ ತಕ್ಕಂತೆ ಕಾರ್ಯನಿರ್ವಹಿಸದೆ, ದಿವ್ಯ ನಿರ್ಲಕ್ಷ ವಹಿಸಿದ್ದು ಸ್ಥಳೀಯ ಜನರು ಆಕ್ರೋಶಗೊಳ್ಳುವಂತೆ ಮಾಡಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us