ಊರಲ್ಲಿದ್ದ ಮಗು ಕರೆತರಲು ಹೋಗುತ್ತಿದ್ದ ದಂಪತಿ ಭೀಕರ ಅಪಘಾತಕ್ಕೆ ಬಲಿ

ಬೆಂಗಳೂರು: ತಮ್ಮ ಮೂರು ವರ್ಷದ ಮಗುವನ್ನು ಮನೆಗೆ ವಾಪಸ್ ಕರೆತರಲು ಹೋಗುವ ವೇಳೆ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮವಾಗಿ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ನಗರೂರಿನ ದಂಪತಿಗಳಾದ ನರಸಿಂಹಮೂರ್ತಿ (40) ಮತ್ತು ಲತಾ(35) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಗಳು. ಪರೋಕ್ಷವಾಗಿ ಮಗುವನ್ನು ಅನಾಥ ಮಾಡಿದ ಕೊರೊನಾ ಈ ದಂಪತಿ ಕೊರೊನಾ ಸೋಂಕಿನ ಕಾರಣದಿಂದಾಗಿ ಮೂರು ವರ್ಷದ ಮಗುವನ್ನು ತಮ್ಮ ಹುಟ್ಟೂರಾದ, ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಬಿಟ್ಟಿದ್ದರು. ಆದ ಕಾರಣ ಆ […]

ಊರಲ್ಲಿದ್ದ ಮಗು ಕರೆತರಲು ಹೋಗುತ್ತಿದ್ದ ದಂಪತಿ ಭೀಕರ ಅಪಘಾತಕ್ಕೆ ಬಲಿ
ಸಾಧು ಶ್ರೀನಾಥ್​

Updated on: Aug 18, 2020 | 11:11 AM

ಬೆಂಗಳೂರು: ತಮ್ಮ ಮೂರು ವರ್ಷದ ಮಗುವನ್ನು ಮನೆಗೆ ವಾಪಸ್ ಕರೆತರಲು ಹೋಗುವ ವೇಳೆ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮವಾಗಿ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ನಗರೂರಿನ ದಂಪತಿಗಳಾದ ನರಸಿಂಹಮೂರ್ತಿ (40) ಮತ್ತು ಲತಾ(35) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಗಳು.

ಪರೋಕ್ಷವಾಗಿ ಮಗುವನ್ನು ಅನಾಥ ಮಾಡಿದ ಕೊರೊನಾ
ಈ ದಂಪತಿ ಕೊರೊನಾ ಸೋಂಕಿನ ಕಾರಣದಿಂದಾಗಿ ಮೂರು ವರ್ಷದ ಮಗುವನ್ನು ತಮ್ಮ ಹುಟ್ಟೂರಾದ, ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಬಿಟ್ಟಿದ್ದರು. ಆದ ಕಾರಣ ಆ ಮಗುವನ್ನು ಮನೆಗೆ ವಾಪಸ್ ಕರೆತರಲು ಬೈಕಿನಲ್ಲಿ ತೆರಳುವಾಗ ರಾಷ್ಟ್ರೀಯ ಹೆದ್ದಾರಿ 4ರ ಬೂದಿಹಾಳದ ಬಳಿ ದಂಪತಿ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ದಂಪತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ನೆಲಮಂಗಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ನಂತರ ಕಂಟೇನರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us