AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

45 ವರ್ಷ ಮೇಲ್ಪಟ್ಟ, ಕೇಂದ್ರ ಸರ್ಕಾರಿ ನೌಕರರು ಕೊವಿಡ್​-19 ಲಸಿಕೆ ಸ್ವೀಕರಿಸಲು ಸರ್ಕಾರದ ಸೂಚನೆ

ಜಗತ್ತಿನ ಹಲವು ದೇಶಗಳಲ್ಲಿ ಕೊರೊನಾ ಎರಡನೆ ಅಲೆ ಎದ್ದಿದ್ದು, ಭಾರತವೂ ಹೊರತಾಗಿಲ್ಲ. ಒಂದು ದಿನದಲ್ಲಿ ದಾಖಲಾಗುವ ಕೇಸ್​ಗಳ ಸಂಖ್ಯೆ ಲಕ್ಷ ದಾಟುತ್ತಿದೆ. ಇಂದು 96,982 ಪ್ರಕರಣಗಳು ದಾಖಲಾಗಿದ್ದು, 442 ಮಂದಿ ಮೃತಪಟ್ಟಿದ್ದಾರೆ.

45 ವರ್ಷ ಮೇಲ್ಪಟ್ಟ, ಕೇಂದ್ರ ಸರ್ಕಾರಿ ನೌಕರರು ಕೊವಿಡ್​-19 ಲಸಿಕೆ ಸ್ವೀಕರಿಸಲು ಸರ್ಕಾರದ ಸೂಚನೆ
ಲಸಿಕೆಯ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 06, 2021 | 8:10 PM

Share

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಸಿಕ್ಕಾಪಟೆ ಹೆಚ್ಚುತ್ತಿದೆ. ಲಸಿಕೆ ವಿತರಣೆ ಮೂರನೇ ಹಂತದಲ್ಲಿ ನಡೆಯುತ್ತಿದ್ದು, 65 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟು, ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ. ಇದೀಗ ಕೇಂದ್ರ ಸರ್ಕಾರಿ ನೌಕರರು, 45 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆಯನ್ನು ತೆಗೆದುಕೊಳ್ಳಿ ಎಂದು ಸರ್ಕಾರ ಹೇಳಿದೆ.

45ವರ್ಷ ಹಾಗೂ ಅದರ ಮೇಲ್ಪಟ್ಟ, ಕೇಂದ್ರ ಸರ್ಕಾರಿ ನೌಕರರು ಎಲ್ಲರೂ ಕೊವಿಡ್ 19 ಲಸಿಕೆಯನ್ನು ತೆಗೆದುಕೊಳ್ಳಬೇಕು. ಕೊವಿಡ್​ ಹರಡುವಿಕೆಯನ್ನು ತಡೆಗಟ್ಟಲು ಇದು ಪರಿಣಾಮಕಾರಿಯಾಗಿರುತ್ತದೆ ಎಂದು ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ. ಸರ್ಕಾರದ ಆದೇಶದ ಅನ್ವಯ ಪ್ರತಿಯೊಬ್ಬರೂ, ಸ್ವಯಂಪ್ರೇರಿತರಾಗಿ ಹೋಗಿ ಲಸಿಕೆ ತೆಗೆದುಕೊಳ್ಳಬೇಕಾಗುತ್ತದೆ.

ಜಗತ್ತಿನ ಹಲವು ದೇಶಗಳಲ್ಲಿ ಕೊರೊನಾ ಎರಡನೆ ಅಲೆ ಎದ್ದಿದ್ದು, ಭಾರತವೂ ಹೊರತಾಗಿಲ್ಲ. ಒಂದು ದಿನದಲ್ಲಿ ದಾಖಲಾಗುವ ಕೇಸ್​ಗಳ ಸಂಖ್ಯೆ ಲಕ್ಷ ದಾಟುತ್ತಿದೆ. ಇಂದು 96,982 ಪ್ರಕರಣಗಳು ದಾಖಲಾಗಿದ್ದು, 442 ಮಂದಿ ಮೃತಪಟ್ಟಿದ್ದಾರೆ. ಕೊವಿಡ್​ 19 ರೂಪಾಂತರ ಸೋಂಕಿತರಿಂದ ಹಾಗೂ ಮಾಸ್ಕ್​, ಸಾಮಾಜಿಕ ಅಂತರ ನಿಯಮ ಪಾಲಿಸದವರಿಂದಲೇ ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅದರಲ್ಲಿ ಮಹಾರಾಷ್ಟ್ರದಲ್ಲೇ ಸೋಂಕಿನ ಸಂಖ್ಯೆ ಹೆಚ್ಚಾಗಿದೆ. ಇಂದು 47,288 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಅಲ್ಲಿನ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ, 25 ವರ್ಷ ಮೀರಿದವರಿಗೂ ಲಸಿಕೆ ಹಾಕಲು ಅವಕಾಶ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನೈಟ್​ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: Assam elections 2021: ಅಸ್ಸಾಂ ವಿಧಾನಸಭೆ ಚುನಾವಣೆಯ ಕೊನೇ ಹಂತದ ಮತದಾನ ಮುಕ್ತಾಯ, ಶೇ 82 ಮತದಾನ

ಬೇರೆ ಬೇರೆ ತಂಡದಲ್ಲಿದ್ರೂ ದಿವ್ಯಾ-ದಿವ್ಯಾ ಹೊಸ ಗೇಮ್ ಪ್ಲಾನ್; ರೋಲ್ ಮಾಡೆಲ್ ಆಗೋ ಆಸೆಯಲ್ಲಿ ದಿವ್ಯಾ ಉರುಡುಗ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ