AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್​ಗಳಲ್ಲಿ Bed ಖಾಲಿ ಖಾಲಿ, ಸೋಂಕಿತರೇ ಬರ್ತಿಲ್ಲ

ಬೆಂಗಳೂರು:ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಹೋಂ ಐಸೋಲೇಷನ್​ಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗಾಗಿಯೇ ಬೆಂಗಳೂರಿನಲ್ಲಿ ಒಟ್ಟು 12 ಕಡೆ ಕೋವಿಡ್ ಕೇರ್ ಸೆಂಟರ್​ಗಳನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು. ಆದರೆ ಈಗ ಸರ್ಕಾರದಿಂದ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಐಸೋಲೇಷನ್ ಆಗಲು […]

ಕೋವಿಡ್ ಸೆಂಟರ್​ಗಳಲ್ಲಿ Bed ಖಾಲಿ ಖಾಲಿ, ಸೋಂಕಿತರೇ ಬರ್ತಿಲ್ಲ
ಸಾಧು ಶ್ರೀನಾಥ್​
|

Updated on:Aug 18, 2020 | 11:10 AM

Share

ಬೆಂಗಳೂರು:ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಹೋಂ ಐಸೋಲೇಷನ್​ಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗಾಗಿಯೇ ಬೆಂಗಳೂರಿನಲ್ಲಿ ಒಟ್ಟು 12 ಕಡೆ ಕೋವಿಡ್ ಕೇರ್ ಸೆಂಟರ್​ಗಳನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು.

ಆದರೆ ಈಗ ಸರ್ಕಾರದಿಂದ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಐಸೋಲೇಷನ್ ಆಗಲು ಅವಕಾಶ ನೀಡಲಾಗಿದ್ದು, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಹೆಚ್ಚು ಒಲವು ತೋರುತ್ತಿದ್ದಾರೆ. ಇದರಿಂದಾಗಿ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ.

ಈಗಾಗಲೇ BIECಯ ಐದು ಹಾಲ್​ಗಳಲ್ಲಿ 10,000 ಬೆಡ್​ಗಳ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಲಾಗಿದ್ದು, ಸದ್ಯ BIECಯಲ್ಲಿ 6,000 ಬೆಡ್​ಗಳು ಸಂಪೂರ್ಣ ಸಿದ್ಧವಾಗಿವೆ. ಅದರಲ್ಲಿ 1,500 ಬೆಡ್​ಗಳನ್ನು ಮಾತ್ರ ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದೆ.

ಒಟ್ಟು 12 ಕೋವಿಡ್ ಕೇರ್ ಸೆಂಟರ್​ಗಳಲ್ಲಿ 4,576 ಬೆಡ್​ಗಳಿದ್ದು, ಅದರಲ್ಲಿ 2,966 ಬೆಡ್​ಗಳು ಭರ್ತಿಯಾಗಿವೆ. ಭರ್ತಿಯಾಗಿರುವ ಬೆಡ್​ಗಳಲ್ಲು ಸಹ 1,610 ಬೆಡ್​ಗಳ ರೋಗಿಗಳು ಗುಣಮುಖರಾಗಿ ಮನೆಗೆ ವಾಪಸಾಗಿದ್ದಾರೆ. ಪ್ರತಿನಿತ್ಯ ಪತ್ತೆಯಾಗುವ ಸೋಂಕಿತರ ಪೈಕಿ ಶೇಕಡ 70ರಷ್ಟು ಜನ, ರೋಗಲಕ್ಷಣ ಇಲ್ಲದವರಾಗಿದ್ದಾರೆ. ಅವರಲ್ಲಿ ಶೇಕಡ 40-50 ರಷ್ಟು ಜನ, ಮನೆಯಲ್ಲಿಯೇ ಐಸೋಲೇಷನ್ ಆಗುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ಹಾಗೂ ಸರ್ಕಾರದಿಂದ ನಿರ್ಮಿಸಿರುವ ಕೋವಿಡ್​ ಕೇರ್​ ಸೆಂಟರ್​ಗಳ ಬೆಡ್​ಗಳು ಉಪಯೋಗಕ್ಕೆ ಬಾರದಂತಾಗಿವೆ.

Published On - 10:42 am, Tue, 18 August 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು