AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್​ಗಳಲ್ಲಿ Bed ಖಾಲಿ ಖಾಲಿ, ಸೋಂಕಿತರೇ ಬರ್ತಿಲ್ಲ

ಬೆಂಗಳೂರು:ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಹೋಂ ಐಸೋಲೇಷನ್​ಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗಾಗಿಯೇ ಬೆಂಗಳೂರಿನಲ್ಲಿ ಒಟ್ಟು 12 ಕಡೆ ಕೋವಿಡ್ ಕೇರ್ ಸೆಂಟರ್​ಗಳನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು. ಆದರೆ ಈಗ ಸರ್ಕಾರದಿಂದ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಐಸೋಲೇಷನ್ ಆಗಲು […]

ಕೋವಿಡ್ ಸೆಂಟರ್​ಗಳಲ್ಲಿ Bed ಖಾಲಿ ಖಾಲಿ, ಸೋಂಕಿತರೇ ಬರ್ತಿಲ್ಲ
ಸಾಧು ಶ್ರೀನಾಥ್​
|

Updated on:Aug 18, 2020 | 11:10 AM

Share

ಬೆಂಗಳೂರು:ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಹೋಂ ಐಸೋಲೇಷನ್​ಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗಾಗಿಯೇ ಬೆಂಗಳೂರಿನಲ್ಲಿ ಒಟ್ಟು 12 ಕಡೆ ಕೋವಿಡ್ ಕೇರ್ ಸೆಂಟರ್​ಗಳನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು.

ಆದರೆ ಈಗ ಸರ್ಕಾರದಿಂದ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಐಸೋಲೇಷನ್ ಆಗಲು ಅವಕಾಶ ನೀಡಲಾಗಿದ್ದು, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಹೆಚ್ಚು ಒಲವು ತೋರುತ್ತಿದ್ದಾರೆ. ಇದರಿಂದಾಗಿ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ.

ಈಗಾಗಲೇ BIECಯ ಐದು ಹಾಲ್​ಗಳಲ್ಲಿ 10,000 ಬೆಡ್​ಗಳ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಲಾಗಿದ್ದು, ಸದ್ಯ BIECಯಲ್ಲಿ 6,000 ಬೆಡ್​ಗಳು ಸಂಪೂರ್ಣ ಸಿದ್ಧವಾಗಿವೆ. ಅದರಲ್ಲಿ 1,500 ಬೆಡ್​ಗಳನ್ನು ಮಾತ್ರ ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದೆ.

ಒಟ್ಟು 12 ಕೋವಿಡ್ ಕೇರ್ ಸೆಂಟರ್​ಗಳಲ್ಲಿ 4,576 ಬೆಡ್​ಗಳಿದ್ದು, ಅದರಲ್ಲಿ 2,966 ಬೆಡ್​ಗಳು ಭರ್ತಿಯಾಗಿವೆ. ಭರ್ತಿಯಾಗಿರುವ ಬೆಡ್​ಗಳಲ್ಲು ಸಹ 1,610 ಬೆಡ್​ಗಳ ರೋಗಿಗಳು ಗುಣಮುಖರಾಗಿ ಮನೆಗೆ ವಾಪಸಾಗಿದ್ದಾರೆ. ಪ್ರತಿನಿತ್ಯ ಪತ್ತೆಯಾಗುವ ಸೋಂಕಿತರ ಪೈಕಿ ಶೇಕಡ 70ರಷ್ಟು ಜನ, ರೋಗಲಕ್ಷಣ ಇಲ್ಲದವರಾಗಿದ್ದಾರೆ. ಅವರಲ್ಲಿ ಶೇಕಡ 40-50 ರಷ್ಟು ಜನ, ಮನೆಯಲ್ಲಿಯೇ ಐಸೋಲೇಷನ್ ಆಗುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ಹಾಗೂ ಸರ್ಕಾರದಿಂದ ನಿರ್ಮಿಸಿರುವ ಕೋವಿಡ್​ ಕೇರ್​ ಸೆಂಟರ್​ಗಳ ಬೆಡ್​ಗಳು ಉಪಯೋಗಕ್ಕೆ ಬಾರದಂತಾಗಿವೆ.

Published On - 10:42 am, Tue, 18 August 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು