AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್​ಗಳಲ್ಲಿ Bed ಖಾಲಿ ಖಾಲಿ, ಸೋಂಕಿತರೇ ಬರ್ತಿಲ್ಲ

ಬೆಂಗಳೂರು:ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಹೋಂ ಐಸೋಲೇಷನ್​ಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗಾಗಿಯೇ ಬೆಂಗಳೂರಿನಲ್ಲಿ ಒಟ್ಟು 12 ಕಡೆ ಕೋವಿಡ್ ಕೇರ್ ಸೆಂಟರ್​ಗಳನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು. ಆದರೆ ಈಗ ಸರ್ಕಾರದಿಂದ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಐಸೋಲೇಷನ್ ಆಗಲು […]

ಕೋವಿಡ್ ಸೆಂಟರ್​ಗಳಲ್ಲಿ Bed ಖಾಲಿ ಖಾಲಿ, ಸೋಂಕಿತರೇ ಬರ್ತಿಲ್ಲ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 18, 2020 | 11:10 AM

Share

ಬೆಂಗಳೂರು:ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಹೋಂ ಐಸೋಲೇಷನ್​ಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ ಎಂಬ ಸತ್ಯ ಈಗ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ದಿನೇದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗಾಗಿಯೇ ಬೆಂಗಳೂರಿನಲ್ಲಿ ಒಟ್ಟು 12 ಕಡೆ ಕೋವಿಡ್ ಕೇರ್ ಸೆಂಟರ್​ಗಳನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು.

ಆದರೆ ಈಗ ಸರ್ಕಾರದಿಂದ ರೋಗಲಕ್ಷಣಗಳು ಇಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಐಸೋಲೇಷನ್ ಆಗಲು ಅವಕಾಶ ನೀಡಲಾಗಿದ್ದು, ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಹೆಚ್ಚು ಒಲವು ತೋರುತ್ತಿದ್ದಾರೆ. ಇದರಿಂದಾಗಿ ಕೋವಿಡ್ ಕೇರ್ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ.

ಈಗಾಗಲೇ BIECಯ ಐದು ಹಾಲ್​ಗಳಲ್ಲಿ 10,000 ಬೆಡ್​ಗಳ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಲಾಗಿದ್ದು, ಸದ್ಯ BIECಯಲ್ಲಿ 6,000 ಬೆಡ್​ಗಳು ಸಂಪೂರ್ಣ ಸಿದ್ಧವಾಗಿವೆ. ಅದರಲ್ಲಿ 1,500 ಬೆಡ್​ಗಳನ್ನು ಮಾತ್ರ ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದೆ.

ಒಟ್ಟು 12 ಕೋವಿಡ್ ಕೇರ್ ಸೆಂಟರ್​ಗಳಲ್ಲಿ 4,576 ಬೆಡ್​ಗಳಿದ್ದು, ಅದರಲ್ಲಿ 2,966 ಬೆಡ್​ಗಳು ಭರ್ತಿಯಾಗಿವೆ. ಭರ್ತಿಯಾಗಿರುವ ಬೆಡ್​ಗಳಲ್ಲು ಸಹ 1,610 ಬೆಡ್​ಗಳ ರೋಗಿಗಳು ಗುಣಮುಖರಾಗಿ ಮನೆಗೆ ವಾಪಸಾಗಿದ್ದಾರೆ. ಪ್ರತಿನಿತ್ಯ ಪತ್ತೆಯಾಗುವ ಸೋಂಕಿತರ ಪೈಕಿ ಶೇಕಡ 70ರಷ್ಟು ಜನ, ರೋಗಲಕ್ಷಣ ಇಲ್ಲದವರಾಗಿದ್ದಾರೆ. ಅವರಲ್ಲಿ ಶೇಕಡ 40-50 ರಷ್ಟು ಜನ, ಮನೆಯಲ್ಲಿಯೇ ಐಸೋಲೇಷನ್ ಆಗುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ಹಾಗೂ ಸರ್ಕಾರದಿಂದ ನಿರ್ಮಿಸಿರುವ ಕೋವಿಡ್​ ಕೇರ್​ ಸೆಂಟರ್​ಗಳ ಬೆಡ್​ಗಳು ಉಪಯೋಗಕ್ಕೆ ಬಾರದಂತಾಗಿವೆ.

Published On - 10:42 am, Tue, 18 August 20

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ